Homeಮುಖಪುಟ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

- Advertisement -
- Advertisement -

“ನೂರು ಜನರ ಗುಂಪು ಹಲ್ಲೆ ಮಾಡಿತು, ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಎಚ್ಚರಿಸಿತು” – ಹೀಗೆ ಮಧ್ಯಪ್ರದೇಶದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ.

ಮಧ್ಯಪ್ರದೇಶದ ಇಂದೋರ್‌ ಸಮೀಪದ ಕಂಪೆಲ್‌ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಏಳು ಜನರಿರುವ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ರಾತ್ರಿ 8.30ರ ವೇಳೆಗೆ ಸುಮಾರು ನೂರು ಜನರಿದ್ದ ಕೇಸರಿಪಡೆ ಹಲ್ಲೆ ನಡೆಸಿದೆ. ಅಲ್ಲದೆ ಮನೆ ಖಾಲಿ ಮಾಡಿ, ಊರು ಬಿಡುವಂತೆ ಹಲ್ಲೆಕೋರ ಗುಂಪು ಮುಸ್ಲಿಂ ಕುಟುಂಬಕ್ಕೆ ಧಮ್ಕಿ ಹಾಕಿದೆ.

ಒಂದು ತಿಂಗಳ ಹಿಂದೆಯೇ ಊರು ಬಿಡುವಂತೆ ಈ ಹಲ್ಲೆಕೋರ ಗುಂಪು ಎಚ್ಚರಿಸಿತ್ತು. ಶನಿವಾರದೊಳಗೆ ಮನೆ ಖಾಲಿ ಮಾಡುವಂತೆ ಎಚ್ಚರಿಸಿತ್ತು. ಕುಟುಂಬ ಊರು ಬಿಟ್ಟು ಹೋಗಲಿಲ್ಲವೆಂದು ಶನಿವಾರ ದಾಳಿ ಮಾಡಿರುವ ಹಲ್ಲೆಕೋರರು, `ಜೈಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ ಎಂದು ದಾಳಿಗೊಳಗಾದ ಕುಟುಂಬ ಆರೋಪಿಸಿದೆ. ಆದರೆ, “ಎರಡು ಗುಂಪುಗಳ ನಡುವೆ ಹಣದ ವಿಚಾರವಾಗಿ ಜಗಳವಾಗಿದೆ. ಎರಡು ಗುಂಪುಗಳಿಂದಲೂ ದೂರುಗಳು ಬಂದಿವೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಕುಟುಂಬವು ಎರಡು ವರ್ಷಗಳ ಹಿಂದೆ ನೀಮಾರ್‌ನಿಂದ ಕಂಪೇಲ್‌ಗೆ ಬಂದು ನೆಲೆಸಿತ್ತು. ಜೀವನೋಪಾಯಕ್ಕಾಗಿ ಟ್ರಾಲಿಗಳು ಹಾಗೂ ಇತರ ಕೃಷಿ ಉಪಕರಣಗಳನ್ನು ತಯಾರಿಸಿ ಮಾರುತ್ತಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಹಲ್ಲೆಗೊಳಗಾದ 46 ವರ್ಷದ ಫಾರುಕ್‌ ಲೋಹರ್‌ ಅವರ ಪುತ್ರ ಶಾರುಖ್‌ ಲೋಹರ್‌‌ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಅವರು ಒಳಗೆ ನುಗ್ಗಿ ರಾಡ್‌ಗಳನ್ನು ಬಳಸಿ ನಮ್ಮನ್ನು ಹೊಡೆಯಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಪದೇ ಪದೇ ಹೊಡೆಯಲು ಪ್ರಾರಂಭಿಸಿದರು. ನನ್ನ ಚಿಕ್ಕಪ್ಪ ಮಧ್ಯಪ್ರವೇಶಿಸಿದಾಗ ಅವರನ್ನೂ ಹೊಡೆದರು. ‘ನಾವು ನಿಮಗೆ ಖಾಲಿ ಮಾಡುವಂತೆ ಹೇಳಿದ್ದೆವು, ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕೆಂದು ಎಚ್ಚರಿಸಿದ್ದೆವು’ ಎಂಬುದಾಗಿ ಹೇಳಿದರು” ಎಂದು ಶಾರುಖ್‌ ಆರೋಪಿಸಿದ್ದಾರೆ.

ಕುಟುಂಬವನ್ನು ನೋಡಲು ಬಂದಿದ್ದ ಶಾರುಖ್‌ ಅವರ ಸಹೋದರಿ ಫೌಸಿಯಾ ಕೂಡ ಘಟನೆ ವೇಳೆ ಸ್ಥಳದಲ್ಲಿದ್ದು, ಅವರು ಕೂಡ ಪತ್ರಿಕೆಯೊಂದಿಗೆ ಮಾತನಾಡಿದ್ದಾರೆ. “ಕಾರಿನಲ್ಲಿ ಬಂದ ಈ ಜನರ ಕೈಯಲ್ಲಿ ರಾಡುಗಳು ಇದ್ದವು. ಈ ಘಟನೆಯ ಚಿತ್ರೀಕರಣ ಮಾಡಲು ನಾನು ಮೊಬೈಲ್‌ ತೆಗೆದುಕೊಂಡಾಗ ನನ್ನ ಕೈ ಹಿಡಿದು ಎಳೆದು ಮೊಬೈಲ್‌ ಕಿತ್ತುಕೊಂಡು ಪುಡಿಪುಡಿ ಮಾಡಿದರು” ಎಂದು ಆಪಾದಿಸಿದ್ದಾರೆ.

ಸುಮಾರು 25 ನಿಮಿಷಗಳ ಕಾಲ ಘಟನೆ ನಡೆದಿದೆ. ನಂತರ ಕುಟುಂಬವು ಖುಡೆಲ್ ಪೊಲೀಸ್ ಠಾಣೆಗೆ ಧಾವಿಸಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

“ಕಳೆದ ತಿಂಗಳು ಅದೇ ಯುವಕರು ಬಂದು ಊರು ಬಿಟ್ಟು ಹೋಗುವಂತೆ ನಮಗೆ ಸೂಚಿಸಿದ್ದರು. ನಾವು ನಮ್ಮ ಮನೆಯ ಹತ್ತಿರ ನಿವೇಶನ ಖರೀದಿಸಲಿದ್ದೇವೆ ಎಂದು ಅವರಿಗೆ ತಿಳಿದಿತ್ತು. ಅವರು ಅದನ್ನು ಇಷ್ಟಪಡಲಿಲ್ಲ. ನಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರಿಂದ, ಮನೆಯ ಹತ್ತಿರದಲ್ಲಿ ಒಂದು ನಿವೇಶನ ಖರೀದಿಸಬೇಕೆಂದಿದ್ದೆವು. ಆದರೆ ಅವರ ಬೆದರಿಕೆಯ ನಂತರ, ನಾವು ಭೂ ಒಪ್ಪಂದವನ್ನು ರದ್ದುಗೊಳಿಸಿದೆವು. ಪ್ಲಾಟ್ ಅನ್ನು ಖರೀದಿಸಲಿಲ್ಲ. ಆದರೆ ಸರ್ಪಂಚ್ ಅವರು ಬಂದು -ಆ ಹುಡುಗರು ಕೇವಲ ಬಿಸಿ ರಕ್ತದವರು. ಚಿಂತೆ ಮಾಡಬೇಡಿ- ಎಂದು ಹೇಳಿದ್ದರಿಂದ ನಾವು ಮನೆ ಖಾಲಿ ಮಾಡಲಿಲ್ಲ” ಎಂದು ಶಾರುಖ್ ಹೇಳಿಕೆ ನೀಡಿದ್ದಾರೆ.

ಲೋಹರ್‌ ಕುಟುಂಬದ ದೂರಿನ ಅನ್ವಯ ಖುದೀಲ್‌‌ ಪೊಲೀಸರು 9 ಮಂದಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 323, 506 , 29, 427, 147, 148 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಶ್ವಜೀತ್ ತೋಮರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ಲೋಹರ್ ಕುಟುಂಬಕ್ಕೆ ಟ್ರಾಲಿ ನಿರ್ಮಿಸಲು ಇತರ ಗುಂಪಿನಿಂದ ಸ್ವಲ್ಪ ಹಣವನ್ನು ನೀಡಲಾಗಿತ್ತು. ಆದರೆ ಅವರು ಟ್ರಾಲಿಯನ್ನು ತಯಾರಿಸಲಿಲ್ಲ ಅಥವಾ ಹಣವನ್ನು ಹಿಂದಿರುಗಿಸಲಿಲ್ಲ, ಅದು ಘಟನೆಯನ್ನು ಪ್ರಚೋದಿಸಿದಂತೆ ತೋರುತ್ತದೆ. ಎರಡು ಗುಂಪುಗಳು ಜಗಳವಾಡಿಕೊಂಡಿವೆ. ಹಳ್ಳಿಯ ಬಳಿ ವಾಸಿಸುತ್ತಿರುವ ವಿಕಾಸ್ ಪಟೇಲ್ ದೂರಿನ ಆಧಾರದ ಮೇಲೆ ಪ್ರತಿದೂರು ದಾಖಲಿಸಲಾಗಿದೆ” ಎಂದಿದ್ದಾರೆ.

“ಈ ಹಲ್ಲೆಕೋರರು ಆರ್‌ಎಸ್‌ಎಸ್‌ಗೆ ಸೇರಿದವರು ಮತ್ತು ಒಂದು ತಿಂಗಳ ಹಿಂದೆ ಗ್ರಾಮವನ್ನು ತೊರೆಯುವಂತೆ ಬೆದರಿಕೆ ಹಾಕಿದ್ದಾರೆ” ಎಂದು ಕುಟುಂಬದ ಆರೋಪದ ಬಗ್ಗೆ ಕೇಳಿದಾಗ ಇನ್‌ಸ್ಪೆಕ್ಟರ್‌ ತೋಮರ, “ಅಂತಹ ಯಾವುದೇ ಮಾಹಿತಿ ನಮಗೆ ದೊರೆತ್ತಿಲ್ಲ. ಎಫ್‌ಐಆರ್ ನೋಂದಾಯಿಸುವಾಗ ಈ ಮಾಹಿತಿಯನ್ನು ನಮಗೆ ನೀಡಲಾಗಿಲ್ಲ. ನಮಗೆ ಅದರ ಅರಿವಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮತಗಳು ಬೇಕಾಗಿಲ್ಲ; ಅದಕ್ಕಾಗಿ ಅವರ ಬಳಿ ಹೋಗುವುದಿಲ್ಲ: ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಸ್ಲಿಂ ಕುಟುಂಬದ ಮೇಲೆ ಹಲ್ಲೆ ಮಾಡಿ, ಅವರನ್ನು ಊರು ಬಿಡುವಂತೆ ಬೆದರಿಕೆ ಹಾಕಿರುವ ಈ ದುರ್ಘಟನೆ ಖಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...