Homeಚಳವಳಿನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿದ್ದ ಮೈಷುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಅದನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಈ ಕುರಿತು ಇಂದು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ’ ಎಂದು ಘೋಷಿಸಿದ್ದಾರೆ.

ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹ ಎಂದು ಕಿಡಿಕಾರಿದರು.

ಮೈಶುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ. ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮೈಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಬಿ.ಎಸ್ ಯಡಿಯೂರಪ್ಪನವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಸದನದಲ್ಲಿ ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಬಿಜೆಪಿ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿತ್ತು. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಪ್ರತಿಭಟನೆಗೆ ಲಾರಿ ಮಾಲೀಕರು ಸಂಘ, ಮಂಡ್ಯ ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಸೇನೆ ಕರ್ನಾಟಕ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ದಲಿತ ಮುಖಂಡರಾದ ಎಂ.ಬಿ ಶ್ರೀನಿವಾಸ್, ಸಿಐಟಿಯುನ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...