Homeಚಳವಳಿನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ: ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿದ್ದ ಮೈಷುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಅದನ್ನು ಖಾಸಗೀಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಈ ಕುರಿತು ಇಂದು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಮೈಷುಗರ್ ಕಾರ್ಖಾನೆ ಪುನರ್ ಆರಂಭಿಸುತ್ತೇವೆ’ ಎಂದು ಘೋಷಿಸಿದ್ದಾರೆ.

ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಅನುದಾನ ನೀಡುವಂತೆ ಮಾತನಾಡುತ್ತೇನೆ. ಒಂದು ವೇಳೆ ಅವರು ಈ ಕೆಲಸ ಮಾಡದಿದ್ದರೆ ಮತ್ತೆ ನಾವು ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಕಾರ್ಖಾನೆಯನ್ನು ಪುನರ್ ಆರಂಭಿಸುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 65 ಸಕ್ಕರೆ ಕಾರ್ಖಾನೆಗಳ ಪೈಕಿ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆ ಎಂದರೆ ಮೈಶುಗರ್ ಕಾರ್ಖಾನೆ. ಸ್ವಾತಂತ್ರ್ಯ ಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಇದರ ಖಾಸಗೀಕರಣ ಜನದ್ರೋಹ ಎಂದು ಕಿಡಿಕಾರಿದರು.

ಮೈಶುಗರ್ ಕಾರ್ಖಾನೆ ಹಲವು ವರ್ಷಗಳ ಕಾಲ ಲಾಭದಲ್ಲೇ ಇತ್ತು, ಈಗ ನಷ್ಟಕ್ಕೆ ಸಿಲುಕಿದೆ. ಈ ನಷ್ಟಕ್ಕೆ ಸರ್ಕಾರ ಹೊಣೆಯೇ ಹೊರತು ರೈತರಲ್ಲ. ಸರ್ಕಾರದ ಹಲವು ಕಾರ್ಖಾನೆಗಳು, ಸಂಸ್ಥೆಗಳು ನಷ್ಟದಲ್ಲಿವೆ.‌ ಅವುಗಳನೆಲ್ಲ ಮಾರಾಟ ಮಾಡೋಕಾಗುತ್ತಾ? ನಷ್ಟಕ್ಕೆ ಕಾರಣಗಳನ್ನು ಪತ್ತೆಹಚ್ಚಿ, ಪುನರುಜ್ಜೀವನಗೊಳಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಮೈಶುಗರ್ ಕಾರ್ಖಾನೆ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ನಷ್ಟಕ್ಕೆ ಕಾರಣಗಳೇನು ಎನ್ನುವುದನ್ನು ವಿವರಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವಂತೆ ಒತ್ತಾಯಿಸಿದ್ದೆ. ಮಂಡ್ಯದ ಖಾಸಗಿ ಸಕ್ಕರೆ ಕಾರ್ಖಾನೆಗಳು ಲಾಭಗಳಿಸುತ್ತವೆ, ಆದರೆ ಸರ್ಕಾರಿ ಕಾರ್ಖಾನೆಗೆ ಏಕೆ ಲಾಭ ಗಳಿಸಲು ಸಾಧ್ಯವಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಉಳಿಯಬೇಕು ಎಂಬ ಉದ್ದೇಶದಿಂದ ರೂ. 145 ಕೋಟಿ ಅನುದಾನ ನೀಡಿದ್ದೆ. ಬಿ.ಎಸ್ ಯಡಿಯೂರಪ್ಪನವರು ಮಂಡ್ಯ ಜಿಲ್ಲೆಯವರು, ಅವರು ಈ ಕಾರ್ಖಾನೆಯನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಕಾಲದಲ್ಲೇ ಖಾಸಗೀಕರಣಗೊಳಿಸುವ ಕೆಲಸ ಆರಂಭ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಖಾನೆಗೆ ಸಂಬಂಧಿಸಿದ ಆಸ್ತಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೆ. ರವೀಂದ್ರ ಕಲಾಕ್ಷೇತ್ರದ ಎದುರು ಭಾಗದಲ್ಲಿ ಕಾರ್ಖಾನೆಗೆ ಸೇರಿದ ಭೂಮಿ ಇದೆ. ಈ ಭೂಮಿಯನ್ನು ಅಭಿವೃದ್ಧಿಪಡಿಸಿ, ಅದರಿಂದ ಬರುವ ಆದಾಯವನ್ನು ಕಾರ್ಖಾನೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆಯೊಂದಿಗೆ ಮಂಡ್ಯದ ಜನರಿಗೆ ಭಾವನಾತ್ಮಕ ಸಂಬಂಧವಿದೆ. ರೈತ ಹಿತರಕ್ಷಣಾ ವೇದಿಕೆಯವರು ಮೈಸೂರಿನಲ್ಲಿ ಧರಣಿ ಮಾಡುತ್ತಿದ್ದಾರೆ, ಯಾವುದೇ ಕಾರಣಕ್ಕೂ ಸರ್ಕಾರ ಈ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದು ಎಂದು ಸದನದಲ್ಲಿ ಆಗ್ರಹಿಸಿದ್ದೆ. ನಮ್ಮ ಒತ್ತಡಕ್ಕೆ ಮಣಿದು ಬಿಜೆಪಿ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಕೈಬಿಟ್ಟಿತ್ತು. ಈಗ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಶೀಘ್ರ ಕಾರ್ಯಾರಂಭಗೊಳಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಪ್ರತಿಭಟನೆಗೆ ಲಾರಿ ಮಾಲೀಕರು ಸಂಘ, ಮಂಡ್ಯ ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಸೇನೆ ಕರ್ನಾಟಕ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದವು. ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಾ ಜಯರಾಂ, ದಲಿತ ಮುಖಂಡರಾದ ಎಂ.ಬಿ ಶ್ರೀನಿವಾಸ್, ಸಿಐಟಿಯುನ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...