Homeಮುಖಪುಟರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ರಾಜಸ್ಥಾನದ ಹನುಮಾನ್‌ಘರ್ ಜಿಲ್ಲೆಯ ಪ್ರೇಂಪುರ ಎಂಬಲ್ಲಿ ದಲಿತ ಯುವಕನೊಬ್ಬನನ್ನು ಗುಂಪೊಂದು ತೀವ್ರ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಯುವಕನನ್ನು ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಆಕ್ರೋಶಗೊಂಡ ಯುವಕನ ಕುಟುಂಬ ಮತ್ತು ದಲಿತ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ 11 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಹಲವು ದಲಿತ ಸಂಘಟನೆಗಳು ಯುವಕನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ನಾಲ್ವರನ್ನು ಬಂಧಿಸಿ, ಉಳಿದ ಆರೋಪಿಗಳ ಬಂಧನದ ಆಶ್ವಾಸನೆ ನೀಡಿದ ಬಳಿಕವಷ್ಟೇ ಮೃತನ ಶವಸಂಸ್ಕಾರ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಜಗದೀಶ್ ಮೇಘವಾಲ್ ಎಂಬ ಯುವಕ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನಿಗೆ ಗುಂಪು ಕಟ್ಟಿ ಥಳಿಸಿ, ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಯುವಕನನ್ನು ಹೊಲಕ್ಕೆ ಎಳೆದೊಯ್ದು ಕೈಕಟ್ಟಿ ಮೊಣಕಾಲಿನಲ್ಲಿ ಕೂರಿಸಿ ದೊಣ್ಣೆಗಳಿಂದ ಮನಬಂದಂತೆ ಥಳಿಸಲಾಗಿದೆ. ಆತನ ಕೊನೆಯ ಉಸಿರಿರುವರೆಗೂ ಹಲ್ಲೆ ನಡೆಸಲಾಗಿದೆ. ನಂತರ ಶವವನ್ನು ಆತನ ಮನೆ ಮುಂದೆ ಎಸೆಯಲಾಗಿದೆ. ಆಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

ಈ ಘಟನೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದೆ. “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲಿನ ಹಲ್ಲೆಗಳು ಶೇ.21 ರಷ್ಟು ಹೆಚ್ಚಾಗಿವೆ. ಆದರೆ ಕೇಂದ್ರ ಕಾಂಗ್ರೆಸ್ ನಾಯಕರು ರಾಜಕೀಯ ಪ್ರವಾಸ ಮಾಡುತ್ತಿದ್ದಾರೆ. ಅವರಿಗೆ ರಾಜಸ್ಥಾನ ಕಾಣುತ್ತಿಲ್ಲ” ಎಂದು ಬಿಜೆಪಿ ಮುಖ್ಯಸ್ಥ ಸತೀಶ್ ಪುನಿಯಾ ಆರೋಪಿಸಿದ್ದಾರೆ.

ರಾಹುಲ್ ಜೀ, ಲಖಿಂಪುರದ ಬಗ್ಗೆ ಚಿಂತಿಸಬೇಡಿ, ಅಲ್ಲಿ ಯೋಗಿ ಸರ್ಕಾರದಲ್ಲಿದ್ದಾರೆ ಮತ್ತು ನೀವು ಪ್ರಿಯ ಗೆಹ್ಲೋಟ್ ಜೀ ಅಲ್ಲ. ರಾಜಸ್ಥಾನದ ಪ್ರೇಂಪುರದಲ್ಲಿ ನಡೆದ ದಲಿತ ಯುವಕನ ಕೊಲೆಯ ಬಗ್ಗೆ ಮಾತನಾಡಲು ಸ್ವಲ್ಪ ಧೈರ್ಯ ತೋರಿಸಿ. ಇದರಿಂದ ನೀವು ಎಷ್ಟು ಸತ್ಯವಂತರು ಎಂದು ಜನರಿಗೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ಕಿಡಿಕಾರಿದ್ದಾರೆ.

ಘಟನೆಯ ಕುರಿತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, “ರಾಜಸ್ಥಾನದ ದಲಿತ ವ್ಯಕ್ತಿಯ ಗುಂಪು ಹತ್ಯೆ ತೀರಾ ವಿಷಾಧನೀಯ ಮತ್ತು ಖಂಡನೀಯವಾಗಿದೆ. ಆದರೆ ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏಕೆ ನಿಶಬ್ದವಾಗಿದೆ? ಪಂಜಾಬ್ ಮತ್ತು ಛತ್ತಿಸ್‌ಘಡ ಮುಖ್ಯಮಂತ್ರಿಗಳು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ 50 ಲಕ್ಷ ಪರಿಹಾರ ನೀಡುತ್ತಾರೆಯೇ? ಈ ಬಗ್ಗೆ ಕಾಂಗ್ರೆಸ್ ಉತ್ತರಿಸಬೇಕು ಇಲ್ಲ ದಲಿತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸರ್ಕಾರಗಳಲ್ಲಿ ಕೇವಲ ಪಕ್ಷಗಳ ವ್ಯತ್ಯಾಸವಿದೆ. ದಲಿತ ದಬ್ಬಾಳಿಕೆಯ ವಿಷಯದಲ್ಲಿ ಎರಡೂ ಸರ್ಕಾರಗಳು ಒಂದೇ ಆಗಿರುತ್ತವೆ. ಹನುಮಾನ್‌ಘರ್‌ನಲ್ಲಿನ ದಲಿತರ ಹತ್ಯೆ ನೋವಿನಿಂದ ಕೂಡಿದೆ. ಅಶೋಕ್ ಗೆಹ್ಲೋಟ್‌ರವರೆ ನೀವು ತಮಾಷೆ ನೋಡಲು ಕುಳಿತಿದ್ದೀರಾ? ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ” ಎಂದು ಅಜಾದ್ ಸಮಾಜ್ ಪಕ್ಷದ ಮುಖಂಡ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...