Homeಮುಖಪುಟರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್‌ ಯಾದವ್‌ ಈ ಹಿಂದೆ, "ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು" ಎಂದಿದ್ದರು.

- Advertisement -
- Advertisement -

ಅಲಹಾಬಾದ್‌‌ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಮತ್ತೊಂದು ವಿವಾದಾತ್ಮಕ ನಿಲುವನ್ನು ತಾಳಿದ್ದಾರೆ.

2021ರ ಸೆಪ್ಟೆಂಬರ್‌‌ನಲ್ಲಿ “ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಶೇಖರ್‌ಕುಮಾರ್‌ ಯಾದವ್ ಹೇಳಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿ ಯಾದವ್‌ ಅವರು ಹೇಳಿದ್ದು ಟೀಕೆಗೆ ಒಳಗಾಗಿತ್ತು. ಇವರ ಹೇಳಿಕೆಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟೀಕೆಗಳು ವ್ಯಕ್ತವಾಗಿದ್ದವು. ಈಗ ಧಾರ್ಮಿಕ ನಂಬಿಕೆಯ ಹೆಸರಲ್ಲಿ ಮತ್ತೊಂದು ವಿವಾದಾತ್ಮಕ ನಿಲುವು ತಾಳಿದ್ದಾರೆ.

ರಾಮ, ಕೃಷ್ಣನ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಟೀಕಿಸಿದ್ದ ವ್ಯಕ್ತಿಗೆ ಜಾಮೀನು ನೀಡುವಾಗ ಜಸ್ಟೀಸ್‌ ಯಾದವ್‌ ಅವರು, “ದೇವರಾದ ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ, ವೇದ ವ್ಯಾಸ ಎಲ್ಲರಿಗೂ ಪಾರಂಪರಿಕ ಸ್ಥಾನಮಾನ ನೀಡಲು ಪಾರ್ಲಿಮೆಂಟ್‌ ಕಾನೂನು ರಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

“ಆರೋಪಿಯ ಹೇಳಿಕೆ ದೇಶದ ಬಹುಸಂಖ್ಯಾತರ ನಂಬಿಕೆಗೆ ಗಾಯಗೊಳಿಸಿದೆ, ಸಮಾಜದಲ್ಲಿ ಶಾಂತಿಯನ್ನು ಕದಡಿದೆ, ಮುಗ್ಧಜನರ ಮೇಲೆ ಅದರ ಭಾರ ಹೊರಿಸಲಾಗಿದೆ” ಎಂದು ನ್ಯಾಯಮೂರ್ತಿಯವರು ವಿಶ್ಲೇಷಿಸಿದ್ದಾರೆ. “ಈ ಪ್ರಕರಣದಲ್ಲಿ ನ್ಯಾಯಾಲಯ ಮೃದು ನಿಲುವು ತಾಳಿದರೆ, ದೇಶದ ಸೌಹಾರ್ದತೆ ಕದಡುವ ಈ ಥರದ ವ್ಯಕ್ತಿಗಳಿಗೆ ನೈತಿಕ ಬಲ ಬಂದುಬಿಡುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ ಆರೋಪಿಗೆ ಜಾಮೀನನ್ನು ನ್ಯಾಯಮೂರ್ತಿ ನೀಡಿದ್ದಾರೆ. “ವಿಚಾರಣಾಧೀನ ಕೈದಿಯಾಗಿ ಆರೋಪಿಯು 10 ತಿಂಗಳಿನಿಂದ ಜೈಲಿನಲ್ಲಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರಣೆ ಕೊನೆಗೊಳ್ಳುವ ಸಾಧ್ಯತೆಯಿಲ್ಲ” ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಯಾದವ್, “ಸುಪ್ರೀಂ ಕೋರ್ಟ್ ಭಗವಾನ್ ರಾಮನನ್ನು ನಂಬುವವರ ಪರವಾಗಿ ತೀರ್ಪು ನೀಡಿದೆ” ಎಂದು ಹೇಳಿದರು. ನ್ಯಾಯಮೂರ್ತಿ ಯಾದವ್ ಅವರು, “ರಾಮ ಪ್ರತಿ ನಾಗರಿಕನ ಹೃದಯದಲ್ಲಿ ನೆಲೆಸಿದ್ದಾನೆ, ಆತ ದೇಶದ ಆತ್ಮ, ಸಾಂಸ್ಕೃತಿಕ ಗುರುತು ಮತ್ತು ಆತನಿಲ್ಲದೆ ಭಾರತ ಅಪೂರ್ಣವಾಗಿದೆ” ಎಂದು ಅಭಿಪ್ರಾಯ ತಾಳಿದ್ದಾರೆ.

ಭಾರತೀಯ ಸಂವಿಧಾನವು ಆಸ್ತಿಕರು ಮತ್ತು ನಾಸ್ತಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡುತ್ತದೆ ಎಂಬುದನ್ನು ಗುರುತಿಸಿದ ನ್ಯಾಯಮೂರ್ತಿ ಯಾದವ್, ದೇವರುಗಳ ಅಶ್ಲೀಲ ಚಿತ್ರಗಳನ್ನು ಮಾಡಿ ಮತ್ತು ಅವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೂಲಕ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಾರತದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪಾರಂಪರಿಕ ಪಾಠಗಳನ್ನು ಸೇರಿಸಬೇಕೆಂದು ನ್ಯಾಯಮೂರ್ತಿ ಯಾದವ್ ಒತ್ತಾಯಿಸಿದ್ದಾರೆ.

ವಕೀಲರ ವಲಯದಿಂದ ಆಯ್ಕೆಯಾಗಿ ನ್ಯಾಯಾಧೀಶರಾದ ಯಾದವ್ ಅವರು, ಹೆಚ್ಚುವರಿ ನ್ಯಾಯಾಧೀಶರಾಗಿ ಡಿಸೆಂಬರ್ 12, 2019 ರಂದು ನೇಮಕವಾದರು. ಈ ವರ್ಷ ಮಾರ್ಚ್ 26ರಂದು ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್ 15, 2026 ರಂದು ನಿವೃತ್ತರಾಗುತ್ತಾರೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಆರ್‌.ದಾವೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಾ, ಶಾಲೆಯಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಭಗವದ್ಗೀತೆ ಮತ್ತು ಮಹಾಭಾರತವನ್ನು ಕಡ್ಡಾಯವಾಗಿ ಬೋಧಿಸಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಅಂದಿನ ಪ್ರೆಸ್ ಕೌನ್ಸಿಲ್‌ನ ಆಗಿನ ಅಧ್ಯಕ್ಷರಾಗಿದ್ದ ಜಸ್ಟೀಸ್‌ ಮಾರ್ಕಂಡೇಯ ಕಟ್ಜು ಅವರು ಕಟುವಾಗಿ ಟೀಕಿಸಿದ್ದರು. “ಇದು ಭಾರತದ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ” ಎಂದು ಖಂಡಿಸಿದ್ದರು.

ಬಾರ್‌ ಅಂಡ್‌ ಬೆಂಚ್‌‌ ಕೂಡ ಅಲಹಾಬಾದ್ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಗೋವಿಂದ್ ಮಾಥುರ್‌ ಅವರ ಟೀಕೆಯನ್ನು ಉಲ್ಲೇಖಿಸಿ ಜಸ್ಟೀಸ್ ಯಾದವ್‌ ನಿಲುವನ್ನು ಟೀಕಿಸಿದೆ. “ಯಾದವ್‌ ಅವರು ತಮ್ಮ ಐಡಿಯಾಲಜಿ, ನಂಬಿಕೆ, ತತ್ವಶಾಸ್ತ್ರವನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ನ್ಯಾಯಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಾಮೀನು ನೀಡಬೇಕಾದಾಗ ಪ್ರಕರಣವನ್ನು ಕೈಗೆತ್ತುಕೊಳ್ಳಲು ವಿಳಂಬ ಮಾಡಿದ್ದಾರೆ. ಹಿಂದಿಯಲ್ಲಿನ ಆದೇಶವನ್ನು ಇಂಗ್ಲಿಷ್ ಅನುವಾದವಿಲ್ಲದೆ ಅಪ್‌ಲೋಡ್ ಮಾಡಲಾಗಿದೆ”  ಎಂದು ಮಾಥುರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...