Homeಕರ್ನಾಟಕಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

- Advertisement -
- Advertisement -

ಘನತೆಯುತ ಬದುಕು, ಗೌರವ, ಕನಿಷ್ಠ ವೇತನ, ಮಕ್ಕಳ ಶಿಕ್ಷಣ, ತಮ್ಮ ಹಕ್ಕುಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪೌರಕಾರ್ಮಿಕರು 15 ದಿನಗಳ ಪೌರಕಾರ್ಮಿಕರ ಜಾಥಾ ನಡೆಸುತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, AICCTU ಕರ್ನಾಟಕ ಮತ್ತು CPIML ಕರ್ನಾಟಕ ಸಂಘಟನೆಗಳು ಜಂಟಿಯಾಗಿ ಈ ಜಾಥಾಗೆ ಕರೆ ನೀಡಿದೆ. ಅಕ್ಟೋಬರ್‌ 9 ರಿಂದ ಕೆ.ಆರ್.ಪುರಂ ಮಾರುಕಟ್ಟೆಯಿಂದ ಆರಂಭವಾಗಿರುವ ಜಾಥಾ ಮುಂದಿನ 15 ದಿನಗಳು ನಡೆಯಲಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿ ದಿನ ನಡೆಯಲಿದೆ.

Image

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಜಾಥಾವು ಬೆಂಗಳೂರಿನಾದ್ಯಂತ ನಡೆಯಲಿದ್ದು ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಿಗೆ ಮತ್ತು ಅವರ ಮನೆಗಳಿಗೆ ತೆರಳುತ್ತದೆ. ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಎಲ್ಲಾರ ಗಮನಕ್ಕೆ ತರಲಾಗುತ್ತದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಮತ್ತು ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ತಕ್ಷಣ ಕ್ರಮಕೈಗೊಳ್ಳುವಂತೆ ಹಾಗೂ ಅವರ ಎಲ್ಲಾ ಹಕ್ಕುಗಳಿಗಾಗಿ ಒತ್ತಾಯಿಸಲಾಗುವುದು ಎಂದು AICCTU ಕರ್ನಾಟಕ ತಿಳಿಸಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ  ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾ “ಪೌರ ಕಾರ್ಮಿಕರಿಗೆ ಕಳೆದ ಆರು ವರ್ಷಗಳಿಂದ ವೇತನ ಹೆಚ್ಚು ಮಾಡಿಲ್ಲ. 35 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಕೇಳುತ್ತಿದ್ದೇವೆ ಅದಿನ್ನು ಆಗಿಲ್ಲ. ಪೌರಕಾರ್ಮಿರರಿಗೆ ಕೆಲಸ ಖಾಯಂ ಮಾಡಬೇಕು. ಅವರಿಗೆ ವಸತಿ ನೀಡಬೇಕು. ಅವರ ಮಕ್ಕಳಿಗೆ ಉಚಿತ ಉತ್ತಮ ಶಿಕ್ಷಣ ನೀಡಬೇಕು. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಉತ್ತಮ ಊಟ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಾದ್ಯಂತ ಜಾಥಾ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದುವರಿದು, “ಪೌರಕಾರ್ಮಿಕರಿಗೆ ಗೌರವ ನೀಡಬೇಕು. ನಗರ ಸ್ವಚ್ಛಗೊಳಿಸಿ, ಆರೋಗ್ಯ ಕಾಪಾಡುವ ಅವರಿಗೆ ಗೌರವ ಸಿಗುತ್ತಿಲ್ಲ. ಕೆಲಸ ಮಾಡುವ ಸ್ಥಳಗಳಲ್ಲಿ ಕುಡಿಯುವ ನೀರು ಕೇಳಿದರೆ ಶೌಚಾಲಯದ ಜಗ್ಗುಗಳಲ್ಲಿ ನೀರು ನೀಡಲಾಗುತ್ತದೆ. ಈ ವಲಯದಲ್ಲಿ ಹೆಚ್ಚಿನ ಜನ ಹೆಣ್ಣುಮಕ್ಕಳು, ದಲಿತರು ಇರುವ ಕಾರಣ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮೇಸ್ತ್ರಿಗಳು ಮಹಿಳೆಯರಿಗೆ ಮರ್ಯಾದೆ ನೀಡುತ್ತಿಲ್ಲ. ನಮಗೂ ಎಲಲ್ರಂತೆ ಬದುಕುವ ಹಕ್ಕಿಲ್ಲವೇ..?” ಎಂದು ಪ್ರಶ್ನಿಸಿದ್ದಾರೆ.

ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಒಂದೊಂದು ಏರಿಯಾಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಮಾಡುತ್ತಿದ್ದೇವೆ. ಕಾರ್ಮಿಕರು ಕೆಲಸ ಮಾಡುತ್ತಲೇ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿದಿನ 5 ರಿಂದ 6 ಜನ ರಜೆ ಹಾಕಿಕೊಂಡು ಜಾಥಾ ಮಾಡುತ್ತಾರೆ. ಸಮಸ್ಯೆಗಳು, ಹಕ್ಕುಗಳು, ಬೇಡಿಕೆಗಳ ಬಗ್ಗೆ ಕರ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. 15 ದಿನದ ಬಳಿಕ ಬಿಬಿಎಂಪಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

“ಮನೆಯ ಮಾಲೀಕರು ಮನೆ ಬಾಗಿಲಿಗೆ ನೀರು ಹಾಖುತ್ತಾರೋ ಇಲ್ಲವೋ, ಆದರೆ, ನಾವು ರಸ್ತೆಗಳನ್ನು ಗುಡಿಸುತ್ತೇವೆ. ಆದರೂ ನಮಗೆ ಸಮಾನತೆ, ಘನತೆ, ಸಮಯಕ್ಕೆ ಪಾವತಿ ಕೂಡ ಇಲ್ಲ. ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಕುಳಿತು ಊಟ ಮಾಡಲು ಸರಿಯಾದ ಸ್ಥಳ ಕೂಡ ಇಲ್ಲ. ಇನ್ನು ಹೆಚ್ಚಿನ ಮಹಿಳೆಯರೇ ಇರುವ ನಮಗೆ, ನಮ್ಮದೆ ಆದ ಸಮಸ್ಯೆಗಳಿಗೆ ಆದರೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಇಲ್ಲ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ನಾವು ಕೂಡ ಬಯಸುತ್ತೇವೆ. ನಮಗೂ ವಸತಿ ಸಮುಚ್ಛಯ ಬೇಕು. ಸಮಾನತೆಗಾಗಿ ನಾವು ಹೋರಾಡುತ್ತಲೇ ಇರುತ್ತೇವೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ರತ್ನಮ್ಮ ಹೇಳಿದ್ದಾರೆ.

Image

 


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...