Homeಮುಖಪುಟರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ನೆಡುಮುಡಿ ವೇಣು ಇನ್ನಿಲ್ಲ

- Advertisement -
- Advertisement -

ತಿರುವನಂತಪುರಂ: ಐದು ನೂರಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ, ಎರಡು ಭಾರಿ ರಾಷ್ಟ್ರ ಪ್ರಶಸ್ತಿಗಳನ್ನು, ಹಲವಾರು ಭಾರಿ ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದ ಪ್ರತಿಭಾನ್ವಿತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಬಳಿಕ ಅವರು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದರು.

ಅಲಪ್ಪುಜ ನೆಡುಮುಡಿಯಲ್ಲಿ ಪಿ.ಕೆ.ಕೇಶವನ್ ಪಿಳ್ಳೈ ಮತ್ತು ಪಿ.ಕುಂಜಿಕುಟ್ಟಿಯಮ್ಮ ದಂಪತಿಗೆ ಜನಿಸಿದ ಐದು ಮಕ್ಕಳಲ್ಲಿ ಒಬ್ಬರಾದ ವೇಣು ಅವರು 1978ರಲ್ಲಿ ಜಿ.ಅರವಿಂದನ್ ನಿರ್ದೇಶನದ ‘ಥಂಪು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ನೆಡುಮುಡಿ ವೇಣು ಎಂದು ಪ್ರೀತಿಯಿಂದ ಕರೆಯಲ್ಪಡುವ ಕೇಶವನ್ ವೇಣುಗೋಪಾಲ್ ನಾಯರ್ ಅವರು ರಂಗಭೂಮಿಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಬಳಿಕ ಚಲನಚಿತ್ರಗಳಲ್ಲಿ ನಟಿಸಿದರು. ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

“ಎಲ್ಲರೂ ಒಟ್ಟಾಗಿ ಕೊರೊನಾವನ್ನು ಸೋಲಿಸೋಣ, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸೋಣ” ಎಂದು ಅವರು ಹಾಡಿರುವ 90 ಸೆಕೆಂಡುಗಳ ಹಾಡು ಇತ್ತೀಚೆಗೆ ವೈರಲ್‌ ಆಗಿತ್ತು. ಈ ಹಾಡನ್ನು ಕೇರಳ ಪೊಲೀಸರು ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ ಅಪ್‌ಲೋಡ್ ಮಾಡಿದ ನಂತರ ಜನಪ್ರಿಯವಾಗಿತ್ತು. ಜಗತ್ತಿನಾದ್ಯಂತ ಇರುವ ನೆಟಿಜನ್‌ಗಳು ಮತ್ತು ಮಲಯಾಳಿಗಳು ವ್ಯಾಪಕವಾಗಿ ಈ ಹಾಡನ್ನು ಹಂಚಿಕೊಂಡಿದ್ದರು.

ಅಲಪ್ಪುಜದ ಸನಾತನ ಧರ್ಮ ಕಾಲೇಜಿನಲ್ಲಿ ಪದವಿ ಪಡೆದ ನಂತರ, ವೇಣು ಅವರು ಕೆಲಕಾಲ ಕಲಕೌಮುಡಿಯಲ್ಲಿ ಪತ್ರಕರ್ತರಾಗಿ, ಸಂಸ್ಥೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದರು. ‘ಕಟ್ಟತೆ ಕಿಲಿಗೂಡು’, ‘ತೀರ್ಥಂ’, ‘ಶ್ರುತಿ’, ‘ಅಂಬದ ಜ್ಞಾನೆ’, ‘ಒರು ಕಥಾ ಒರು ನನ್ನಕ್ಕಥಾ’, ‘ಸವಿದಂ’ ಮತ್ತು ‘ಅಂಗನೆ ಒರು ಅವಧಿಕಾಲತ್ತ’ ಮುಂತಾದ ಸಿನಿಮಾಗಳಿಗೆ ಅವರು ಸ್ಕ್ರಿಪ್ಟ್ ಬರೆದಿದ್ದಾರೆ. ಅವರು ‘ಪೂರಂ’ ಹೆಸರಿನ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ.

ಕಮಲ್ ಹಾಸನ್ ಅಭಿಯನದ ‘ಇಂಡಿಯನ್‌’, ವಿಕ್ರಮ್ ಅಭಿನಯದ ‘ಅನ್ನಿಯನ್’ ಸಿನಿಮಾಗಳಲ್ಲಿ ಅಭಿನಯಿಸಿದ ನೆಡುಮುಡಿ ವೇಣು ಅವರಿಗೆ ತಮಿಳು ಚಿತ್ರರಂಗದಲ್ಲಿ ಅಭಿಮಾನಿಗಳು ಸೃಷ್ಟಿಯಾದರು. ಬಳಿಕ ಅವರು ‘ಮೊಗಾಮುಲ್’ (1995) ಮತ್ತು ‘ಸರ್ವಂ ತಾಳ ಮಯಂ’ (2019) ಸಿನಿಮಾಗಳಲ್ಲಿ ಅಭಿನಯಿಸಿದರು.

ಜೀನತ್ ಅಮಾನ್, ವಿಕ್ಟರ್ ಬ್ಯಾನರ್ಜಿ ಮತ್ತು ರೂಪಾ ಗಂಗೂಲಿ ಅವರೊಂದಿಗೆ  ಇಂಗ್ಲಿಷ್ ಭಾಷೆಯ ‘ಚೌರಾಹೆನ್’ ಚಿತ್ರದಲ್ಲೂಅವರು ಅಭಿನಯಿಸಿದರು. ಸೆಪ್ಟೆಂಬರ್ 2007ರಲ್ಲಿ ಜಿಂಬಾಬ್ವೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಸೈರಾ’ ಚಿತ್ರದ ಪಾತ್ರಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡರು.

1980ರಲ್ಲಿ ‘ಚಾಮರಂ’ಗಾಗಿ ಅವರು ತಮ್ಮ ಮೊದಲ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು (ಎರಡನೇ ಅತ್ಯುತ್ತಮ ನಟ) ಪಡೆದರು. 1981ರಲ್ಲಿ ‘ವಿದಾಪರಯುಂ ಮುನ್ಪೆ’ ಸಿನಿಮಾಕ್ಕಾಗಿ ‘ಅತ್ಯುತ್ತಮ ನಟ’, 1987ರಲ್ಲಿ ‘ಒರು ಮಿನ್ನಮಿನುಂಗಿಂತೆ ನೂರುಂಗುವೆಟ್ಟಂ’  ಸಿನಿಮಾ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದರು.

“ನೆಡುಮುಡಿ ವೇಣು ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ತುಂಬಲಾಗದ ನಷ್ಟವಾಗಿದೆ. ಮಲಯಾಳಂನಲ್ಲಿ ನೆಡುಮುಡಿಯವರ ಸ್ಥಾನವನ್ನು ತುಂಬಲು ಯಾವುದೇ ಕಲಾವಿದರಿಗೆ ಸಾಧ್ಯವಿಲ್ಲ. ಸಿನಿಮಾ ಸೆಟ್‌ಗಳಲ್ಲಿ ಅವರು ಇದ್ದರೆಂದರೆ ವಿಶೇಷ ಶಕ್ತಿ ಸಂಚಲನವಾಗುತ್ತಿತ್ತು” ಎಂದು ನಟ ಮಣಿಯನ್ ಪಿಳ್ಳೈ ರಾಜು ಹೇಳಿದ್ದಾರೆ.

 ಇದನ್ನೂ ಓದಿರಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...