Homeಮುಖಪುಟಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

- Advertisement -
- Advertisement -

ಏರ್‌ ಇಂಡಿಯಾ ಮಾರಾಟ ಮಾಡುತ್ತಿರುವುದು ನಿಜವಾಗಿಯೂ ಟಾಟಾ ಕಂಪೆನಿಗೆ ನೀಡಿರುವ ಉಡುಗೊರೆಯಾಗಿದೆ ಎಂದು ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌ವಾದಿ)ದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೊಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಅಧಿಕಾರಕ್ಕೆ ಏರಿದ ನಂತರ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುತ್ತಲೆ ಬರುತ್ತಿದೆ. ಈ ಪಟ್ಟಿಗೆ ಹೊಸದಾಗಿ ಏರ್‌ ಇಂಡಿಯಾ ಕೂಡಾ ಸೇರಿಕೊಂಡಿದೆ. ಟಾಟಾ ಕಂಪೆನಿಯಿಂದಲೇ ಪ್ರಾರಂಭವಾಗಿದ್ದ ಏರ್‌ ಇಂಡಿಯಾ(ಆಗ ಅದಕ್ಕೆ ಟಾಟಾ ಏರ್‌ಲೈನ್ಸ್‌ ಎಂದು ಹೆಸರಿತ್ತು) ಉದ್ದಿಮೆಯನ್ನು ಸರ್ಕಾರವು ಈ ಹಿಂದೆ ರಾಷ್ಟ್ರೀಕರಣಗೊಳಿಸಿತ್ತು. ಇದೀಗ ಮತ್ತೆ ಐದು ದಶಕಗಳ ನಂತರ ಏರ್‌ ಇಂಡಿಯಾ ಟಾಟಾ ಕಂಪೆನಿಯ ತೆಕ್ಕೆಗೆ ಸೇರುತ್ತಿದೆ.

ಇದನ್ನೂ ಓದಿ: ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ

ಏರ್ ಇಂಡಿಯಾವನ್ನು ಪಡೆಯಲು ಟಾಟಾ ಕಂಪೆನಿಯು 18,000 ಕೋಟಿ ಮೊತ್ತವನ್ನು ಬಿಡ್‌ ಮಾಡಿದ್ದು, ಒಕ್ಕೂಟ ಸರ್ಕಾರ ಇದನ್ನು ಸ್ವೀಕರಿಸಿದೆ. ಸರ್ಕಾರ ಬಿಡಿ ಸ್ವೀಕರಿಸಿರುವುದನ್ನು ರತನ್ ಟಾಟಾ ಕಳೆದ ಶುಕ್ರವಾರ ಸ್ವಾಗತಿಸಿದ್ದರು.

ಏರ್‌ ಇಂಡಿಯಾ ಮತ್ತೆ ಟಾಟಾ ಕಂಪೆನಿಗೆ ಸೇರುತ್ತಿರುವುದಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, “ಒಕ್ಕೂಟ ಸರ್ಕಾರ ಏರ್‌‌ ಇಂಡಿಯಾ ಮಾರಾಟ ಮಾಡುತ್ತಿರುವುದು ಟಾಟಾ ಕಂಪೆನಿಗೆ ನೀಡಿರುವ ಉಡುಗೊರೆಯಾಗಿದೆ. ಇದು ಹೆದ್ದಾರಿಯಲ್ಲಿ ಹಾಡ ಹಗಲೇ ನಡೆಯುತ್ತಿರುವ ದರೋಡೆಯಾಗಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಲಖಿಂಪುರ್‌ ಖೇರಿ ಹತ್ಯಾಕಾಂಡದ ಬಗ್ಗೆಯು ಆಕ್ರೋಶ ವ್ಯಕ್ತಪಡಿಸಿದ ಯಚೂರಿ, “ಸಚಿವ ಅಜಯ್ ಮಿಶ್ರಾ ಅವರನ್ನು ತಕ್ಷಣವೇ ವಜಾಗೊಳಿಸಬೇಕು. ಅವರ ಭಾಷಣಗಳು ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸೆಗೆ ಪ್ರಚೋದನೆಯಾಗಿತ್ತು. ಅವರ ಮಗ ಆರೋಪಿಯಾಗಿದ್ದಾಗ ಕೂಡಾ ಅವರು ಸಚಿವರಾಗಿ ಉಳಿದುಕೊಂಡಿದ್ದಾರೆ. ಇದರಿಂದ ನ್ಯಾಯ  ಸಿಗಲು ಸಾಧ್ಯವಿಲ್ಲ” ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟೆಲಿಕಾಂನಿಂದ ಬಾಕಿ ಹಣ: ಸರ್ಕಾರದಿಂದ BSNLಗೆ ನಾಮ, ಏರ್‌ಟೆಲ್, ವೊಡಾ ಮೇಲೇಕೆ ಪ್ರೇಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...