Homeಮುಖಪುಟಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಬೆಂಗಳೂರಿನ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಘಟನೆ; ಸ್ಮಾರ್ಟ್‌ಸಿಟಿ ಲಿಮಿಟೆಡ್‌ಗೆ ದೂರು

- Advertisement -
- Advertisement -

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧಿಸಿದ್ದರೂ ಆಡಳಿತಾರೂಢರ ಅವಿವೇಕದಿಂದಾಗಿ ಮತ್ತೆ ಮತ್ತೆ ಪ್ರಕರಣಗಳು ದಾಖಲಾಗುತ್ತಿವೆ. ಬೆಂಗಳೂರಿನಲ್ಲಿ ಸೋಮವಾರ (ಅ. 11) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ದೂರು ನೀಡಲಾಗಿದೆ.

ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಜೋಳನ್‌, ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್‌ ಗುಪ್ತಾ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದಾರೆ.

“ಇಲ್ಲಿನ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಒಳಗೆ ಕಾರ್ಮಿಕರನ್ನು ಇಳಿಸಲಾಗಿತ್ತು. ಯಾವುದೇ ರಕ್ಷಣಾ ಸಲಕರಣೆಗಳೂ ಇರಲಿಲ್ಲ. ಮಳೆ ನೀರು ಸರಾಗವಾಗಿ ಹರಿಸಲೆಂದು ಶುಚಿಗೊಳಿಸಲಾಗುತ್ತಿದೆ ಎಂದು ಹೇಳುತ್ತಾರೆ. ಆದರೆ ಒಳಚರಂಡಿ ಕಟ್ಟಿಕೊಂಡಿದೆ ಎಂದು ಅಪಾರ್ಟ್‌ಮೆಂಟ್‌ ಹೇಳುತ್ತದೆ” ಎಂದು ಬರೆದು ನಗರ ಪೊಲೀಸ್ ಕಮಿಷನರ್‌ ಕಮಲ್ ಪಂತ್‌ ಅವರನ್ನೂ ಟ್ಯಾಗ್‌ ಮಾಡಿ ಅವರು ಪ್ರಶ್ನಿಸಿದ್ದಾರೆ.

“ಸ್ಮಾರ್ಟ್ ಸಿಟಿ ಗುತ್ತಿಗೆದಾರರು ಈ ಕೆಲಸಕ್ಕೆ ಕಾರ್ಮಿಕರನ್ನು ದೂಡುತ್ತಿದೆ. ನಾನು ಗುತ್ತಿಗೆದಾರರಲ್ಲಿ ಕೇಳಿದಾಗ, ಆ ಜಾತಿ, ಆ ವೃತ್ತಿ ಮಾಡುವವರಿಗೆ ಇದ್ದು, ಅದೇ ಕೆಲಸವನ್ನು ಅವರು ಮಾಡಬೇಕು ಎಂದಿದ್ದಾರೆ” ಎಂದು ವಿನಯ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಅಮೃತ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌‌ನಿಂದ ಶಿವಾಜಿನಗರ ಇನ್ಫ್ಯಾನ್ಟ್ರಿ ರಸ್ತೆಯಲ್ಲಿ ನಡೆಯುತ್ತಿದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಕುರಿತು ಸ್ಮಾರ್ಟ್ ಸಿಟಿ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿರುವ ವಿನಯ್‌ ಶ್ರೀನಿವಾಸ ಹಾಗೂ ಸ್ವಾತಿ ಶಿವಾನಂದ್‌, “ನಾವು ಇಂದು ಬೆಳಿಗ್ಗೆ (ಸೋಮವಾರ, ಅಕ್ಟೋಬರ್‌ 11) ಇನ್ಫಾನ್ಟ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದೆವು. ಸೆಲೆರಾ ಡಯೋಗ್ನಾಟಿಕ್ಸ್‌ ಎದುರು ವ್ಯಕ್ತಿಯು ಮ್ಯಾನ್‌ಹೋಲ್‌ಗೆ ಇಳಿಯುತ್ತಿದ್ದನ್ನು ಕಂಡೆವು” ಎಂದಿದ್ದಾರೆ.

“ವ್ಯಕ್ತಿಯನ್ನು ಪ್ರಶ್ನಿಸಿದಾಗ ಮಳೆ ನೀರು ಕಟ್ಟಿಕೊಂಡಿದೆ. ಅದನ್ನು ತೆರವು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿಯೂ ಹಾಗೆ ಹೇಳಿದ್ದಾರೆ. ಆದರೆ ಚರಂಡಿಯೊಳಗೆ ಇಳಿದಿದ್ದ ವ್ಯಕ್ತಿಗಳು ಯಾವುದೇ ಗ್ಲೌಸ್‌, ಗಮ್‌ಬೂಟ್ಸ್‌‌ ಸೇರಿದಂತೆ ಯಾವುದೇ ರಕ್ಷಣ ಸಾಮಗ್ರಿಗಳನ್ನು ಧರಿಸಿರಲಿಲ್ಲ ಎಂಬುದನ್ನು ಗುರುತಿಸಿದೆವು. ಕೇಳಿದರೆ, ಅವರು ಯಾವುದೇ ಸಲಕರಣೆಗಳನ್ನು ನೀಡಿಲ್ಲ ಎಂದು ಪಿಟ್‌ನಲ್ಲಿ ಇಳಿದಿದ್ದ ವ್ಯಕ್ತಿಗಳು ಹೇಳಿದ್ದಾರೆ” ಎಂಬುದಾಗಿ ದೂರಿನಲ್ಲಿ ಹೇಳಿದ್ದಾರೆ.

“ಪಕ್ಕದ ಮಳಿಗೆಗೆ ಹೋಗಿ ಹತ್ತು ನಿಮಿಷದ ಬಳಿಕ ನಾವು ವಾಪಸ್‌ ಬರುವಾಗ ಅಲ್ಲಿ ಕೊಳಚೆ ನೀರು ತುಂಬಿದ್ದನ್ನು ಕಂಡೆವು. ಅವರಿಂದ ಗುತ್ತಿಗೆದಾರನ ನಂಬರ್‌ ಪಡೆದು ಕರೆ ಮಾಡಿದಾಗ ಮೂವರು (ಯೋಗೇಂದ್ರ, ರವಿಕಿರಣ್‌, ಹರ್ಷಗೌಡ) ಬಂದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಮೃತ ಕನ್‌ಸ್ಟ್ರಕ್ಟರ್‌ ಪ್ರೈವೇಟ್‌ ಲಿಮಿಟೆಡ್‌ನ ಇಂಜಿಯರುಗಳು ಇವರೆಂಬುದು ತಿಳಿಯಿತು. ಚರಂಡಿಯನ್ನು ಶುಚಿಗೊಳಿಸಲು ಕೆಲಸಗಾರರಿಗೆ ಹೇಳಿರುವುದಾಗಿ ಅವರು ಮಾಹಿತಿ ನೀಡಿದರು ಎಂದು ದೂರಿನಲ್ಲಿ ಹೇಳಿದ್ದಾರೆ.

ಒಬ್ಬ ವ್ಯಕ್ತಿ ಮಲದ ಗುಂಡಿಯ ಒಳಗೆ ಹಾಗೂ ಮತ್ತೊಬ್ಬ ಹೊರಗೆ ನಿಂತು ಬಕೆಟ್‌ಗಳನ್ನು ಬಳಸಿ ಕೊಳಚೆಯನ್ನು ತೆಗೆಯುತ್ತಿದ್ದರು. ಇದರ ಬಗ್ಗೆ ಪ್ರಶ್ನಿಸಿದರೆ ಇಂಜಿನಿಯರ್‌‌ ಯೋಗೇಂದ್ರ ಅವರು, -ಯಾವುದೇ ಯಂತ್ರ ಕೊಳಚೆಯನ್ನು ಶುಚಿಗೊಳಿಸಲು ಇಲ್ಲ. ಕಾರ್ಮಿಕರು ಶುಚಿಗೊಳಿಸಲು ಅಗತ್ಯ- ಎಂದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಏಕೆ ಯಾವುದೇ ರಕ್ಷಣಾ ಸಲಕರಣೆಗಳನ್ನು ನೀಡಿಲ್ಲ ಎಂದು ಕೇಳಿದಾಗ ರವಿಕುಮಾರ್‌ ಎಂಬವರು, -ಇವರೆಲ್ಲ ಕುಡುಕರು, ಇವರಿಗೆ ಗಮ್‌ಬೂಟ್ಸ್‌ ಹಾಗೂ ಗ್ಲವ್ಸ್‌ಗಳನ್ನು ನೀಡಿದ್ದೇವೆ. ಆದರೆ ಅವರು ಮಾರಿಕೊಂಡಿದ್ದಾರೆ-ಎಂದು ಹೇಳಿದ್ದಾರೆ. ಹರ್ಷಗೌಡ ಎಂಬವರು,- ಭಾರತದಲ್ಲಿ ಜಾತಿ ವ್ಯವಸ್ಥೆ ಇದೆ. ಕೆಲವು ಕೆಲಸಗಳನ್ನು ಮಾಡಲೆಂದೇ ಕೆಲವು ಜನರಿದ್ದಾರೆ. ಈ ಜನ ಶುಚಿಗೊಳಿಸಲೆಂದೇ ಇದ್ದಾರೆ. ನಾವು ಇಂಜಿನಿಯರುಗಳು. ಅವರು ಶುಚಿಗೊಳಿಸುವುದನ್ನು ತಡೆಯಲು ಸಾಧ್ಯವಿಲ್ಲ- ಎಂದರು. ಸಂಸ್ಥೆಯಿಂದ ಈ ಕೆಲಸವನ್ನು ಮಾಡಿಸಲಾಗುತ್ತಿದೆ ಎಂದು ಎಂಜಿನಿಯರುಗಳು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಒಂದು ವಾರದೊಳಗೆ ತನಿಖೆ ನಡೆಸಿ, ವರದಿಯನ್ನು ನೀಡಬೇಕು. ಕೆಲಸಗಾರರೊಂದಿಗೆ ಘನತೆಯಿಂದ ವರ್ತಿಸುವಂತೆ ಗುತ್ತಿಗೆದಾರರಿಗೆ ಸ್ಮಾರ್ಟ್‌‌ಸಿಟಿ ಅಧಿಕಾರಿಗಳು ಎಚ್ಚರಿಸಬೇಕು. ಕೆಲಸಗಾರರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳು, ಕೊಳಚೆ ಗುಂಡಿಗಳ ನಿರ್ಮೂಲನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು” ಎಂದು ದೂರುದಾರರು ಆಗ್ರಹಿಸಿದ್ದಾರೆ.

ಮುಂದುವರಿದು, “ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಿಳಿಸಬೇಕು. ಮ್ಯಾನ್ಯುಯಲ್‌ ಸ್ಕ್ಯಾವೇಂಜಿಂಗ್‌ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಹೇಗೆ ಪಾಲಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಮನದಟ್ಟು ಮಾಡಬೇಕು” ಎಂದು ದೂರುದಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆರೋಪಿ ಆಶಿಶ್ ಮಿಶ್ರಾ 3 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...