Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...