Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...