Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...