Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...