Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...