Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...