Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...