Homeಮುಖಪುಟಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

ಹಲವು ರಾಮಾಯಣಗಳಲ್ಲಿ, ಯಾವುದು ಮೂಲ ರಾಮಾಯಣ?

- Advertisement -
- Advertisement -

ಕನ್ನಡದ ಪ್ರಸಿದ್ಧ ಕವಿಯಾದ ಕುಮಾರವ್ಯಾಸನು ‘ತಿಣುಕಿದನು ಫಣಿರಾಯ ರಾಮಾಯಣದ ಕತೆಗಳ ಭಾರದಲಿ’ ಎಂಬ ಮಾತನ್ನು ಹೇಳುತ್ತಾನೆ. ಅವನಿಗೆ ಕನ್ನಡ ನಾಡೂ ಸೇರಿದಂತೆ ಭಾರತದ ಹಲವು ಕಡೆಗಳಲ್ಲಿ ಪ್ರಚಲಿತದಲ್ಲಿದ್ದ ಹಲವು ರಾಮಾಯಣಗಳ ಬಗ್ಗೆ ತಿಳಿದಿತ್ತು. 10 ನೇ ಶತಮಾನದ ಕೊನೆಯಲ್ಲಿ ರಚಿತವಾದ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’, 16 ನೇ ಶತಮಾನದ ತೊರವೆ ನರಹರಿಯ ‘ತೊರವೆ ರಾಮಾಯಣ’, 12-18ನೇ ಶತಮಾನಗಳಲ್ಲಿ ರಚಿತವಾದ ಯಕ್ಷಗಾನ ರಾಮಾಯಣಗಳು, ಮುದ್ದಣನ ರಾಮಾಶ್ವಮೇಧ, ಅದ್ಭುತ ರಾಮಾಯಣ – ಕೆಲವು ಉದಾಹರಣೆಗಳಷ್ಟೆ.

ದೇಶದಾದ್ಯಂತ ಹಲವು ಜನಪದ ರಾಮಾಯಣಗಳಿವೆ. ಈ ಜನಪದ ರಾಮಾಯಣಗಳು ರಾಮ ಕೇಂದ್ರಿತವಾಗಿರದೆ, ಬಹುಮಟ್ಟಿಗೆ ಸೀತಾ ಕೇಂದ್ರಿತವಾಗಿವೆ. ಚಿತ್ರ ಪಟ ರಾಮಾಯಣದಲ್ಲಿ ಸೀತೆಯು ಲಂಕೆಯಿಂದ ಹಿಂದೆ ಬಂದ ಆನಂತರ ರಾವಣ ಚಿತ್ರ ಬರೆಯುವ ಮಾರ್ಮಿಕ ಘಟನೆಯ ವಿವರ ಬರುತ್ತದೆ. ಈ ನಡುವೆ ಹಲವಾರು ರಾಮಾಯಣಗಳು ಒಂದು ಕಾಲದಲ್ಲಿ ಅಸ್ತಿತ್ವದಲ್ಲಿದ್ದು ಆನಂತರ ಕಾಣೆಯಾಗಿವೆ. ರಾಮಾಯಣದ ವಸ್ತುವು ಬರ್ಮಾ, ಲಾವೋಸ್‌, ಫಿಲಿಪೈನ್ಸ್‌, ನೇಪಾಲ, ಜಪಾನ್‌, ಮಂಗೋಲಿಯಾ ಇಂಡೊನೇಷಿಯಾ, ಮಲೇಷಿಯಾ, ಕಾಂಬೋಡಿಯಾ, ಶ್ರೀಲಂಕಾ ದೇಶಗಳ ಸಂಸ್ಕೃತಿಗಳನ್ನು ಆಳವಾಗಿ ಪ್ರವೇಶಿಸಿ ಮರು ಹುಟ್ಟು ಪಡೆಯುತ್ತಿವೆ.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್. ಡಿ. ಕುಮಾರಸ್ವಾಮಿ ಆಕ್ರೋಶ

ಈ ಎಲ್ಲಾ ರಾಮಾಯಣಗಳಿಗೆ ಮೂಲ ಆದಿಕವಿ ವಾಲ್ಮೀಕಿಯ ರಾಮಾಯಣ ಎಂದು ಹೇಳಲಾಗಿದೆ. ವಾಲ್ಮೀಕಿಗೆ ರಾಮ ಕತೆಯನ್ನು ನಾರದ ಹೇಳಿದನೆಂಬ ನಂಬಿಕೆಯೂ ಇದೆ. ಈ ನಾರದ ಬ್ರಹ್ಮನ ಮಗನಾಗಿದ್ದು ಭಾರತೀಯ ಮಹಾಕಾವ್ಯ ಮತ್ತು ಪುರಾಣಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಒಂದು ಪಾತ್ರವೇ ಹೊರತು ಐತಿಹಾಸಿಕ ವ್ಯಕ್ತಿಯಲ್ಲ. ಹೀಗಾಗಿ ಈ ಕಥನವನ್ನು ಪುರಾಣ-ಕಾವ್ಯಗಳ ಭಾಗವಾಗಿ ನೋಡಬೇಕೇ ವಿನಾ ವಾಸ್ತವ ಸತ್ಯವೆಂದು ಅಲ್ಲ.

ವಾಲ್ಮೀಕಿಯ ಕುರಿತಾದ ನಂಬಿಕೆಗಲೂ ಕಾಲಾಂತರದಲ್ಲಿ ಹಲವು ರೂಪಗಳನ್ನು ಧರಿಸಿವೆ. ಮಹಾಕಾವ್ಯದ ಭವ್ಯತೆ ದಿವ್ಯತೆಗಳನ್ನು ಹೆಚ್ಚು ಮಾಡಲು ಇಂಥ ಕತೆಗಳು ಸೇರಿಕೊಳ್ಳುತ್ತವೆ.

ಭಾರತದ ವಿವಿಧ ಭಾಷೆಗಳಲ್ಲಿ ಕಂಡು ಬರುವ ಜನಪದ ರಾಮಾಯಣಗಳ ವಸ್ತು ವಾಲ್ಮೀಕಿ ರಾಮಾಯಣಕ್ಕಿಂತ ತುಂಬ ಬೇರೆಯಾಗಿವೆ. ಎಷ್ಟೋ ರಾಮಾಯಣಗಳಲ್ಲಿ ಸೀತೆಯನ್ನು ಲಕ್ಷ್ಮಣ ಗೆದ್ದು ರಾಮನಿಗೆ ಅರ್ಪಿಸುವುದಿದೆ. ವಾಲ್ಮೀಕಿ ಇಂಥ ಹಲವು ರಾಮಾಯಣಗಳನ್ನು ಕೇಳಿ ಕೊನೆಗೆ ತನ್ನದೇ ಆದ ಒಂದು ರಾಮಾಯಣ ನಿರ್ಮಿಸಿರುವ ಸಾಧ್ಯತೆಯೇ ಹೆಚ್ಚು. ಏನಿದ್ದರೂ ಇದು ಕೋಳಿ ಮತ್ತು ಮೊಟ್ಟೆಯ ಕತೆ. ಯಾವುದರಿಂದ ಯಾವುದು ಹುಟ್ಟಿತು, ಯಾವುದು ಮೂಲ ಎಂದು ಹೇಳುವುದು ಅಸಾಧ್ಯ.

ಈಚಿನ ರಾಜಕೀಯದ ಭಾಗವಾಗಿ ‘ಸಂಸ್ಕೃತದ ರಾಮಾಯಣಕ್ಕೆ ಪ್ರತಿರೋಧವಾಗಿ ದೇಶಭಾಷೆಯಲ್ಲಿ ರಾಮಾಯಣವನ್ನು ಮರುಸೃಷ್ಟಿಸುತ್ತಿದ್ದಾರೆಂಬ’ ಆರೋಪವನ್ನು ಹಲವರು ಮಾಡುತ್ತಾ, ಮೂಲಕ್ಕೆ ನಿಷ್ಟರಾಗಿರಬೇಕೆಂಬ ಮಾತನ್ನು ಹೇಳುತ್ತಿದ್ದಾರೆ. ಇದನ್ನು ಒಪ್ಪಿಕೊಂಡರೆ, ಸಂಸ್ಕೃತದಲ್ಲೂ ಹಲವು ರಾಮಾಯಣಗಳಿರುವುದಕ್ಕೆ ಹೇಗೆ ಸಾಧ್ಯವಾಯಿತು? ಎಂಬ ಪ್ರಶ್ನೆಗೆ ಉತ್ತರ ನೀಡಬೇಕಾಗುತ್ತದೆ. ಭಾಸನ ‘ಪ್ರತಿಮಾನಾಟಕ’, ಮತ್ತು ‘ಅಭಿಷೇಕ’ ನಾಟಕಗಳು ಇದಕ್ಕೊಂದು ಉತ್ತಮ ಉದಾಹರಣೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಆಧ್ಯಾತ್ಮ ನಾಮಾಯಣ, ವಶಿಷ್ಟ ರಾಮಾಯಣ, ಆನಂದ ರಾಮಾಯಣ, ಅಗಸ್ತ್ಯ ರಾಮಾಯಣ, ಅದ್ಭುತ ರಾಮಾಯಣ, ಉತ್ತರ ರಾಮಚರಿತ – ಹೀಗೆ ಹಲವು ರಾಮಾಯಣಗಳ ಪರಂರೆ ಸಂಸ್ಕೃತಕ್ಕೇ ಇದೆ. ಅದೇ ರೀತಿಯಲ್ಲಿ ಭಾರತೀಯ ಭಾಷೆಗಳು ಕಂಬನ್‌ ರಾಮಾಯಣ, ತುಲಸೀ ರಾಮಾಯಣ ಮೊದಲಾದುವುಗಳನ್ನು ಸೃಷ್ಟಿಸಿಕೊಂಡಿವೆ. ಈ ನಿಟ್ಟಿನಲ್ಲಿ ಕನ್ನಡದಲ್ಲಿ ಬಂದ ಮಹತ್ಕೃತಿ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’. 20 ನೇ ಶತಮಾನಕ್ಕೆ ರಾಮಾಯಣ ಮುಖಾ ಮುಖಿಯಾದಾಗ ಹುಟ್ಟಿಕೊಂಡ ಮಹಾಕಾವ್ಯವದು.

ಈ ಬಹುಪಠ್ಯಗಳು ಮೂಲತಃ ಭಾರತದ ವೈವಿಧ್ಯತೆಗಳಿಗೊಂದು ರೂಪಕ. ವ್ಯಾಸರು ಬರೆದ ಮಹಾಭಾರತದ ಸಾವಿರಾರು ಪಠ್ಯಗಳನ್ನು ಪ್ರಖ್ಯಾತ ಸಂಸ್ಕೃತ ವಿದ್ವಾಂಸರಾಗಿದ್ದ ಶ್ರೀ ವಿಷ್ಣು ಎಸ್. ಸೂಕ್ತಂಕರ್ ಸಂಗ್ರಹಿಸಿ, ಅದರಿಂದ ಒಂದು ಪಠ್ಯವನ್ನು ಪರಿಷ್ಕರಿಸಿ ಪೂನಾದಿಂದ ಪ್ರಕಟಿಸಿದರು. ಹಾಗೆ ಪ್ರಕಟಿಸುವಾಗ ಅವರು ಬರೆದ ಬಹಳ ಮಹತ್ವದ ವಾಕ್ಯವೊಂದು ಇಂತಿದೆ- “ವ್ಯಾಸರು ಬರೆದ ಮೂಲ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಸಾಧ್ಯವಿಲ್ಲದ ಕೆಲಸ. ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ ಅಷ್ಟೆ”. ಈ ಮಾತು ರಾಮಾಯಣಕ್ಕೂ ಅನ್ವಯವಾಗುತ್ತದೆ.

ಗಮನಿಸಬೇಕಾದ ವಿಷಯವೆಂದರೆ, ನಮ್ಮ ದೇಶದಲ್ಲಿ ವಿವಿಧ ಸಮುದಾಯಗಳು ಕಾವ್ಯವನ್ನು ತಮಗೆ ಬೇಕಾದಂತೆ ಮತ್ತೆ ಮತ್ತೆ ಬರೆದುಕೊಳ್ಳುತ್ತವೆ ಅಥವಾ ಹೇಳಿಕೊಳ್ಳುತ್ತವೆ ಎಂಬುದನ್ನು ನಾವೀಗ ಮರೆತುಬಿಟ್ಟಿರುವುದು. ತನ್ನ ಕಾಲದ, ಸಮುದಾಯದ, ಪ್ರದೇಶದ ಮತ್ತು ನಿರೂಪಕನ ಅಗತ್ಯಗಳಿಗೆ ಅನುಗುಣವಾಗಿ ಕಾವ್ಯಗಳನ್ನು ಮತ್ತೆ ಮತ್ತೆ ಬರೆಯಲಾಗುತ್ತದೆ. ಆಕಾಶದಲ್ಲಿರುವ ನಕ್ಷತ್ರಗಳ ಹಾಗೆ. ಅವುಗಳನ್ನು ನಾವು ಎಣಿಸಲಾರೆವು, ಅವುಗಳಿಗೆ ವ್ಯಾಕರಣವನ್ನೂ ಬರೆಯಲಾರೆವು, ಆದರೆ ಅವು ಆಗಸದ ಒಟ್ಟಂದವನ್ನು ಹೆಚ್ಚಿಸಿವೆ.

ಕುವೆಂಪು ಮತ್ತು ಅವರು ಬರೆದ ರಾಮಾಯಣದ ಬಗ್ಗೆ ಈಗ ನಡೆಯುತ್ತಿರುವ ಚರ್ಚೆಗಳು ಮತ್ತು ಆರೋಪಗಳು ರಾಜಕೀಯ ಪ್ರೇರಿತವಾದುವು. ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು ಅಷ್ಟೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...