Homeಕರ್ನಾಟಕಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

ಮೂಡಬಿದಿರೆಯ ಆಳ್ವಾಸ್ ಶಾಲೆಯಲ್ಲಿ ಗ್ರೀಷ್ಮಾ ವ್ಯಾಸಂಗ ಮಾಡುತ್ತಿದ್ದಳು. ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲಾ ಪ್ರವೇಶಾತಿ ನಿರಾಕರಿಸಲಾಗಿತ್ತು. ತೇರ್ಗಡೆಯಾಗಿರುವ ವಿದ್ಯಾರ್ಥಿಗೆ 50,000 ರೂ. ಪ್ರೋತ್ಸಾಹಧನವನ್ನು ಡಾ.ಜಿ.ಪರಮೇಶ್ವರ ನೀಡಿದ್ದಾರೆ.

- Advertisement -
- Advertisement -

ಶಾಲೆಯ ಶುಲ್ಕ ಪಾವತಿಸಲಾಗದೆ, ಶಾಲೆಯವರು ಪರೀಕ್ಷೆಯ ಪ್ರವೇಶಪತ್ರ ನೀಡದ ಕಾರಣ ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಕೊನೆಗೂ ಪೂರಕ ಪರೀಕ್ಷೆಯನ್ನು ಎದುರಿಸಿ ಶಾಲೆಗೆ ಟಾಪರ್‌ ಆಗಿ ತೇರ್ಗಡೆಯಾಗಿದ್ದಾಳೆ.

ಕೊರಟಗೆರೆ ಪಟ್ಟಣದ ಬಿ.ಆರ್‌.ನರಸಿಂಹಮೂರ್ತಿ, ಟಿ.ಪಿ.ಪದ್ಮಾವತಮ್ಮ ದಂಪತಿಯ ಹದಿನಾರು ವರ್ಷಗಳ ಪುತ್ರಿ ಗ್ರೀಷ್ಮಾ ನಾಯಕ್‌, ಪರೀಕ್ಷೆ ಬರೆಯಲು ಅವಕಾಶ ಸಿಗದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೋವಿಡ್ ಸಂದರ್ಭದಲ್ಲಿ ಘಟಿಸಿದ ಈ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗಿತ್ತು.

ರೈತರ ಮಗಳಾದ ಗ್ರೀಷ್ಮಾ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗ್ರೀಷ್ಮಾ ಹೇಳುವಂತೆ, “ಕೋವಿಡ್ ಕಾರಣದಿಂದಾಗಿ ಶಾಲೆಗೆ ಹಾಜರಾಗಲು ಹಾಗೂ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿರಲಿಲ್ಲ. ನನ್ನ ಸಹೋದರಿ ಕೀರ್ತನಾ, ಕೋರ್‌ ಸಬ್ಜೆಕ್ಟ್‌ ಕಲಿಕೆಗೆ ಸಹಕರಿಸಿದಳು. ಪರೀಕ್ಷೆಗೆ ಮೂರು ತಿಂಗಳು ಇರುವಾಗ ಭಾಷಾ ವಿಷಯಗಳ ಓದು ಆರಂಭಿಸಿದ್ದೆ. ಆದರೆ ನನ್ನ ಹೆಸರು ಶಾಲಾ ದಾಖಲಾತಿಯಲ್ಲಿಯೇ ಇರಲಿಲ್ಲ.”

ಗ್ರೀಷ್ಮಾ ಆಳ್ವಾಸ್‌ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಗ್ರೀಷ್ಮಾ ಕುಟುಂಬ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಹತ್ತನೇ ತರಗತಿಯ ದಾಖಲಾತಿಯಲ್ಲಿ ಸೇರಿಸಿರಲಿಲ್ಲ. ಹೀಗಾಗಿ ಹತ್ತನೇ ತರಗತಿಯ ಪ್ರವೇಶಾತಿಗೂ ಅವಕಾಶವಿರಲಿಲ್ಲ.

“ಶುಲ್ಕ ಪಾವತಿಗೆ ಹೆಚ್ಚುವರಿ ಸಮಯವನ್ನು ಶಾಲಾ ನಿರ್ವಹಣಾ ಮಂಡಳಿ ನಮಗೆ ನೀಡಲಿಲ್ಲ. ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ .96 ಅಂಕ ಗಳಿಸಿದ್ದರೂ ಹತ್ತನೇ ತರಗತಿಗೆ ಪ್ರವೇಶವನ್ನು ನೀಡಿಲ್ಲ” ಎಂದು ಪೋಷಕರು ಆರೋಪಿಸಿದ್ದರು.

ಡಿಡಿಪಿಐ ಅವರಲ್ಲಿಯೂ ಪೋಷಕರು ಮೊರೆ ಇಟ್ಟಾಗ ಪ್ರಕರಣ ಅಂದಿನ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ತನಕ ಹೋಗಿತ್ತು. ಇದೇ ರೀತಿಯ ಪ್ರಕರಣಗಳು ಎಲ್ಲೆಡೆ ವರದಿಯಾದಾಗ ಶುಲ್ಕ ಪಾವತಿಯನ್ನು ಮುಂದಿಟ್ಟುಕೊಂಡು ಪರೀಕ್ಷಾ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಆದೇಶಿಸಿದ್ದರು.

ವಿದ್ಯಾರ್ಥಿನಿ ಗ್ರೀಷ್ಮಾ

ಅಲ್ಲದೇ ಗ್ರೀಷ್ಮಾ ಅವರ ಕುಟುಂಬವನ್ನು ಸುರೇಶ್‌ ಕುಮಾರ್‌ ಭೇಟಿಯಾಗದಿದರು. ಹೊಸ ಅಭ್ಯರ್ಥಿಯನ್ನಾಗಿಯೇ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಗ್ರೀಷ್ಮಾ ಅವರ ಓದಿನ ಖುಷಿಯನ್ನು ಸುರೇಶ್ ಕುಮಾರ್ ಪ್ರೋತ್ಸಾಹಿಸಿದ್ದರು.

“ಸಚಿವರು ನಮ್ಮ ಮನೆಗೆ ಬಂದ ಬಳಿಕ ಶಾಲೆಯವರು ನನ್ನ ಹೆಸರನ್ನು ಬೋರ್ಡ್ ಪರೀಕ್ಷೆಗೆ ನಮೂದಿಸಿದ್ದರು. ಹೀಗಾಗಿ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಯಾಗಿ ಪೂರಕ ಪರೀಕ್ಷೆಯಲ್ಲಿ ನನ್ನನ್ನು ಪರಿಗಣಿಸಲಾಗಿತ್ತು” ಎಂದು ಗ್ರೀಷ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

ಆಳ್ವಾಸ್‌ ಶಾಲೆಯ ಮುಖ್ಯಶಿಕ್ಷಕಿ ವಿಜಯಾ ಟಿ.ಮೂರ್ತಿ ಅವರು, “ಗ್ರೀಷ್ಮಾ ಪೋಷಕರು ನಮ್ಮ ಸಂಪರ್ಕದಲ್ಲಿ ಇರಲಿಲ್ಲ” ಎಂದು ಆರೋಪಿಸಿದ್ದರು. “ನಾವು ಪೋಷಕರಿಗೆ ಪತ್ರವನ್ನು ಕಳುಹಿಸಿದ್ದೆವು. ಆದರೂ ಅವರು ಹತ್ತನೇ ತರಗತಿಗೆ ದಾಖಲಾತಿ ಮಾಡಿರಲಿಲ್ಲ. ನಮ್ಮ ಪತ್ರಗಳಿಗೂ ಉತ್ತರಿಸಲಿಲ್ಲ. ನಂತರದಲ್ಲಿ ಶುಲ್ಕ ಪಾವತಿಸದ ಕಾರಣ ಪ್ರವೇಶಾತಿ ನೀಡಿಲ್ಲ ಎಂದು ಹೇಳಿ ಗಾಬರಿಗೊಳಿಸಿದರು” ಎಂದು ಮುಖ್ಯಶಿಕ್ಷಕಿ ಹೇಳಿಕೆ ನೀಡಿದ್ದರು.

ಅಂದಹಾಗೆ ಗ್ರೀಷ್ಮಾ ಉತ್ತಮ ಫಲಿತಾಂಶವನ್ನು ಗಳಿಸುವ ಮೂಲಕ ಭರವಸೆಯಾಗಿ ಹೊಮ್ಮಿದ್ದಾರೆ. “ನಾನು 625ಕ್ಕೆ 615ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವ ಭರವಸೆ ಹೊಂದಿದ್ದೆ. ಆದರೆ ಪರೀಕ್ಷೆಯಲ್ಲಿ ಕೆಲವೊಂದು ಗೊಂದಲಕ್ಕೊಳಗಾಗಿ ಕೆಲವು ಅಂಕಗಳನ್ನು ಕಳೆದುಕೊಂಡೆ” ಎಂದಿದ್ದಾರೆ. ಆದರೆ ಅಂತಿಮವಾಗಿ ಗ್ರೀಷ್ಮಾ 599 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಮುಂದಿನ ಕಲಿಕೆಯನ್ನು ಮುಂದುವರಿಸುವುದಾಗಿ ಗ್ರೀಷ್ಮಾ ಹೇಳಿದ್ದಾರೆ. ಅವರಿಗೆ ಹಲವರ ಸಹಕಾರವೂ ದೊರೆತಿದೆ.

ಜಿ.ಪರಮೇಶ್ವರ 50 ಸಾವಿರ ರೂ. ಪ್ರೋತ್ಸಾಹ ಧನ; ಮೆಡಿಕಲ್‌ ಸೀಟ್ ಭರವಸೆ

ಕೊರಟಗೆರೆ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿದ್ಯಾರ್ಥಿನಿಯ ಕುಟುಂಬವನ್ನು ಮಂಗಳವಾರ ಭೇಟಿಯಾಗಿ, ಐವತ್ತು ಸಾವಿರ ರೂ. ಪ್ರೋತ್ಸಾಹಧನವನ್ನು ನೀಡಿ, ವಿದ್ಯಾರ್ಥಿಯನ್ನು ಪ್ರೋತ್ಸಾಹಿಸಿದ್ದಾರೆ.

“ವಿದ್ಯಾಭ್ಯಾಸವನ್ನು ಇದೇ ರೀತಿಯಲ್ಲಿ ಮುಂದುವರಿಸಬೇಕು” ಎಂದು ಕಿವಿ ಮಾತನ್ನು ಹೇಳಿರುವ ಶಾಸಕರು ಇದೇ ಸಂದರ್ಭದಲ್ಲಿ ಪ್ರೋತ್ಸಾಹಧನವಾಗಿ ವಿದ್ಯಾರ್ಥಿನಿಗೆ 50 ಸಾವಿರ ರೂ.ಗಳ ಚೆಕ್ ನೀಡಿ ನೆರವಾಗಿದ್ದಾರೆ. ಜೊತೆಗೆ ಪಿಯುಸಿ ನಂತರ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರವೇಶಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿ: ನೀಟ್ ವಿರುದ್ದದ ಹೋರಾಟಕ್ಕೆ ಬೆಂಬಲಿಸುವಂತೆ 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...