Homeಮುಖಪುಟಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

ಮಹಿಳಾ ನಿಂದನೆ: ಡಾ.ಕೆ.ಸುಧಾಕರ್‌ ಆಯ್ತು, ಈಗ ರಾಜಸ್ತಾನ ಶಿಕ್ಷಣ ಸಚಿವರ ಸರದಿ!

- Advertisement -
- Advertisement -

“ಹೆಚ್ಚು ಮಹಿಳಾ ಸಿಬ್ಬಂದಿಗಳು ಇರುವ ಶಾಲೆಗಳಲ್ಲಿ ಜಗಳಗಳು ಹೆಚ್ಚಾಗಿರುತ್ತವೆ” ಎಂದು ರಾಜಸ್ತಾನ ಶಿಕ್ಷಣ ಸಚಿವ ಗೋವಿಂದ ಸಿಂಗ್‌ ದೋಸ್ತಾರ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಕಾರ್ಯಕ್ರಮದಲ್ಲಿ ಅಕ್ಟೋಬರ್‌ 11ರಂದು ಹೀಗೆ ಮಾತನಾಡಿದ್ದಾರೆ.

“ಶಿಕ್ಷಣ ವಿಭಾಗದ ಮುಖ್ಯಸ್ಥನಾಗಿ ಗಮನಿಸಿದ್ದೇನೆಂದರೆ ಹೆಚ್ಚಿನ ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳು ವಿವಿಧ ಕಾರಣಗಳಿಗಾಗಿ ಹೆಚ್ಚು ಜಗಳಗಳನ್ನು ಆಡುತ್ತವೆ” ಎಂದಿರುವ ಅವರು, “ಈ ಜಗಳಗಳು ಸಾಮಾನ್ಯವಾಗಿ ತಡವಾಗಿ ಬರುವುದು ಅಥವಾ ಬೇಗ ಹಿಂತಿರುಗುವ ರೀತಿಯ ವಿಷಯಗಳ ಕುರಿತು ಆಗುತ್ತವೆ” ಎಂದು ತಿಳಿಸಿದ್ದಾರೆ.

“ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿಕೊಂಡರೆ ನೀವು ಯಾವಾಗಲೂ ಪುರುಷರಿಗಿಂತ ಮುಂದೆ ಇರುತ್ತೀರಿ” ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಲೈವ್‌ ಆಗಿರುವ ಈ ವಿಡಿಯೋವನ್ನು ‘ಇಂಡಿಯಾ ಟುಡೇ’ ಅಪ್‌ಲೋಡ್‌ ಮಾಡಿದ್ದು, ಸಚಿವರು ಹೀಗೆ ಮಾತನಾಡುವಾಗ ಇತರರು ತಲೆ ಆಡಿಸುತ್ತಾರೆ ಅಥವಾ ನಗುತ್ತಾರೆ.

ಇದನ್ನೂ ಓದಿರಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಈ ವರ್ಷದ ಆರಂಭದಲ್ಲಿ, ರಾಜಸ್ತಾನ ಆಡಳಿತ ಸೇವೆಗಳಿಗೆ (ಆರ್‌ಎಎಸ್) ತನ್ನ ಸೊಸೆಯ ಸಹೋದರಿ ಮತ್ತು ಸಹೋದರನ ಆಯ್ಕೆಯಲ್ಲಿ ದೋತ್ಸರ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರು ಆರೋಪವನ್ನು ನಿರಾಕರಿಸಿದ್ದರು ಹಾಗೂ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಹೇಳಿದ್ದರು.

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಿರುವುದು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (ವೈದ್ಯ ವೃತ್ತಿ ಹಿನ್ನೆಲೆಯವರು) ಹೀಗೆಯೇ ಮಾತನಾಡಿದ್ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಸಚಿವ ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ’’ ಎಂದಿದ್ದರು.

“ಇಂದು ಇದನ್ನು ಹೇಳಲು ನನಗೆ ಬೇಸರವಾಗುತ್ತಿದೆ. ಭಾರತದ ಬಹಳಷ್ಟು ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಅವರು ಮದುವೆಯಾಗಿದ್ದರೂ ಜನ್ಮ ನೀಡಲು ಬಯಸುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಿದ್ದಾರೆ. ನಮ್ಮ ಆಲೋಚನೆಯಲ್ಲಿ ಗಮನಾರ್ಹ ಬದಲಾವಣೆಯಾಗಿದ್ದು, ಇದು ಒಳ್ಳೆಯದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಇಂದೋರ್‌ ಕಾಲೇಜಿನಲ್ಲಿ ಲವ್‌ ಜಿಹಾದ್‌ ನಡೆದಿದೆ: ಬಜರಂಗ ದಳ ಆರೋಪ

ಭಾರತೀಯ ಸಮಾಜದ ಮೇಲೆ “ಪಾಶ್ಚಿಮಾತ್ಯ ಪ್ರಭಾವ” ಹೆಚ್ಚಾಗಿದೆ ಎಂದಿದ್ದ ಸುಧಾಕರ್‌, ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದರು.

“ದುರದೃಷ್ಟವಶಾತ್, ಇಂದು ನಾವು ಪಾಶ್ಚಿಮಾತ್ಯ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಅಜ್ಜ-ಅಜ್ಜಿಯರು ನಮ್ಮೊಂದಿಗೆ ಇರುವುದನ್ನು ಬಿಡಿ, ಹೆತ್ತವರೇ ನಮ್ಮೊಂದಿಗೆ ಇರುವುದನ್ನು ನಾವು ಬಯಸುತ್ತಿಲ್ಲ” ಎಂದಿದ್ದರು.

ರಾಜ್ಯದಲ್ಲಿ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದ ಸುಧಾಕರ್‌, “ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಒಂದು ರೀತಿಯ ಮಾನಸಿಕ ಸಮಸ್ಯೆ ಹೊಂದಿದ್ದಾರೆ. ಅದು ಸೌಮ್ಯ, ಮಧ್ಯಮ ಮತ್ತು ತೀವ್ರವಾಗಿರಬಹುದು. ಒತ್ತಡ ನಿರ್ವಹಣೆ ಒಂದು ಕಲೆಯಾಗಿದ್ದು, ಈ ಕಲೆಯನ್ನು ಭಾರತೀಯರಾದ ನಾವು ಕಲಿಯಬೇಕಾಗಿಲ್ಲ. ನಾವು ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಜಗತ್ತಿಗೆ ಬೋಧಿಸಬೇಕಾಗಿದೆ. ಯಾಕೆಂದರೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳು ಸಾವಿರಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ಜಗತ್ತಿಗೆ ಕಲಿಸಿದ ಅದ್ಭುತ ಸಾಧನಗಳಾಗಿವೆ” ಎಂದು ಹೇಳಿದ್ದರು.

ಸುಧಾಕರ್‌ ಅವರು ಮಹಿಳೆಯರ ವಿರುದ್ದ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತೆ ಸಂಜ್ಯೋತಿ ಅವರು, “ಮಾನ್ಯ ಆರೋಗ್ಯ ಸಚಿವರೇ ನಿಮಗೆ ಉತ್ತಮವಾದ ಗಂಭೀರ ಚಿಕಿತ್ಸೆಯ ಅಗತ್ಯವಿದೆ. ಅದೃಷ್ಟವಶಾತ್ ನಮ್ಮಲ್ಲಿ ವಿಶ್ವದ ಅತ್ಯುತ್ತಮ ಮಾನಸಿಕ ಆರೋಗ್ಯ ವ್ಯವಸ್ಥೆಯಾಗಿರುವ ಬೆಂಗಳೂರಿನ ನಿಮ್ಹಾನ್ಸ್ ಇದೆ” ಎಂದು ಕಿಡಿ ಕಾರಿದ್ದಾರೆ.

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದರು.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿದ್ದ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...