Homeಮುಖಪುಟಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

ಬ್ರಿಟಿಷರಿಗೆ ಸಾವರ್ಕರ್‌ ಕ್ಷಮಾಪಣೆ ಪತ್ರ ಬರೆಯಲು ಗಾಂಧೀಜಿಯೇ ಸೂಚಿಸಿದ್ದರು: ರಾಜನಾಥ್‌ ಸಿಂಗ್‌‌

"ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ"

- Advertisement -
- Advertisement -

ಹಿಂದುತ್ವದ ಪ್ರತಿಪಾದನೆಯ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ವಿ.ಡಿ.ಸಾವರ್ಕರ್‌‌ ಅವರು ಅಂಡಮಾನ್‌ ಜೈಲಿನಿಂದ ಹೊರಬರಲು ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆಯುವಂತೆ ಮಹಾತ್ಮ ಗಾಂಧೀಜಿಯವರು ಸಲಹೆ ನೀಡಿದ್ದರು. ಆದರೆ ಸಾವರ್ಕರ್‌ ಅವರನ್ನು ವಿರೋಧಿಸುವ ಸಿದ್ಧಾಂತಿಗಳು ಸಾವರ್ಕರ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನೀಡಿದ ಕೊಡುಗೆಯನ್ನು ನಿಂದಿಸಿದ್ದು, ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಉದಯ್‌ ಮಹೂರ್‌ಕರ್‌‌ ಮತ್ತು ಚಿರಾಯು ಪಂಡಿತ್‌ ಅವರು ಬರೆದಿರುವ “ದಿ ಮ್ಯಾನ್‌ ವೂ ಕುಡ್‌ ಹ್ಯಾವ್‌ ಪ್ರಿವೆಂಟೆಂಡ್‌ ಪಾರ್ಟಿಷನ್‌‌” ಕೃತಿಯನ್ನು ರೂಪಾ ಪಬ್ಲಿಕೇಷನ್‌ ಪ್ರಕಟಿಸಿದ್ದು, ಮಂಗಳವಾರ ಬಿಡುಗಡೆಯಾಗಿದೆ. ನವದೆಹಲಿಯ ಅಂಬೇಡ್ಕರ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ, ಆರ್‌‌ಎಸ್‌ಎಸ್‌‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಪಾಲ್ಗೊಂಡಿದ್ದ ಸಾವರ್ಕರ್‌ ಕುರಿತ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ರಮದಲ್ಲಿ ರಕ್ಷಣಾ ಸಚಿವರು ಮಾತನಾಡಿದ್ದಾರೆ.

ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಗಿದೆ. ಅವರು ಬ್ರಿಟಿಷ್ ಸರ್ಕಾರದ ಮುಂದೆ ಹಲವು ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದರು ಎಂದು ಪದೇ ಪದೇ ಹೇಳಲಾಗುತ್ತಿದೆ. ಸತ್ಯವೆಂದರೆ ಸಾವರ್ಕರ್‌ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಸಾವರ್ಕರ್‌ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದರು. ನಾವು ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ಶಾಂತಿಯುತವಾಗಿ ನಡೆಸುತ್ತಿದ್ದೇವೆ ಎಂದು ಗಾಂಧೀಜಿ ಹೇಳಿದ್ದರು, ಸಾವರ್ಕರ್‌ ನಂಬಿಕೆಯೂ ಇದೇ ಆಗಿತ್ತು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರು ಗುಲಾಮಗಿರಿಯ ಸಂಕೋಲೆಗಳನ್ನು ಮುರಿಯಲು ಜನರನ್ನು ಪ್ರೇರೇಪಿಸಿದರು. ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳನ್ನು ಪ್ರಶ್ನಿಸಿದರು. ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು ಎಂದ ಅವರು, “ದೇಶದ ಸಾಂಸ್ಕೃತಿಕ ಏಕತೆಯಲ್ಲಿ ಅವರ ಕೊಡುಗೆಯನ್ನು ಕಡೆಗಣಿಸಲಾಗಿದೆ” ಎಂದರು.

ಸಾವರ್ಕರ್‌ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗಿದೆ. 2003ರಲ್ಲಿ ಸಾವರ್ಕರ್ ಅವರ ಚಿತ್ರವನ್ನು ಸಂಸತ್ತಿನಲ್ಲಿ ಇರಿಸಲಾಗಿದ್ದಾಗ ಹೆಚ್ಚಿನ ರಾಜಕೀಯ ಪಕ್ಷಗಳು ಬಹಿಷ್ಕರಿಸಿದವು. ಆದರೆ ಅಂಡಮಾನ್ ಮತ್ತು ನಿಕೋಬಾರ್ ಜೈಲಿನಲ್ಲಿ ಅವರ ಹೆಸರಿನಲ್ಲಿದ್ದ ಫಲಕವನ್ನು ಸರ್ಕಾರ ಬದಲಾದ ಬಳಿಕ ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದರು.

“ನೀವು ಸಾವರ್ಕರ್‌ ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಬಹುದು. ಆದರೆ ಅವರನ್ನು ಅಸಹ್ಯವಾಗಿ ನೋಡುವುದು ಸರಿಯಲ್ಲ. ಅವರ ರಾಷ್ಟ್ರೀಯ ಕೊಡುಗೆಗಳನ್ನು ಅವಹೇಳನ ಮಾಡುವ ಕ್ರಮವನ್ನು ಸಹಿಸಲಾಗುವುದಿಲ್ಲ” ಎಂದು ಸಿಂಗ್ ಎಚ್ಚರಿಸಿದ್ದಾರೆ.

“ಸಾವರ್ಕರ್‌ ಅವರನ್ನು ನಾಜಿ ಹಾಗೂ ಫಾಸಿಸ್ಟ್‌ ರೀತಿ ಬಿಂಬಿಸಿ ಟೀಕಿಸಲಾಗುತ್ತದೆ. ಅದು ಕೂಡ ಸರಿಯಲ್ಲ. ಅವರು ಹಿಂದುತ್ವದೊಂದಿಗೆ ನಂಬಿಕೆ ಇಟ್ಟಿದ್ದರು. ವಾಸ್ತವವಾದಿಯಾಗಿದ್ದರು. ಏಕತೆಗೆ ಸಂಸ್ಕೃತಿಯ ಏಕರೂಪತೆ ಮುಖ್ಯ ಎಂದು ಅವರು ನಂಬಿದ್ದರು. ಅವರೊಬ್ಬ ವ್ಯಕ್ತಿಯಲ್ಲ, ಒಂದು ಸಿದ್ಧಾಂತ. ಅವರ ಅನುಯಾಯಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ” ಎಂದು ಹೇಳಿದರು.

 ಸಾವರ್ಕರ್‌- ವಿವೇಕಾನಂದರ ನಡುವೆ ವ್ಯತ್ಯಾಸವಿಲ್ಲ: ಭಾಗವತ್‌‌

ಮೋಹನ್‌ ಭಾಗವತ್‌ ಮಾತನಾಡಿ, “ಸಾವರ್ಕರ್‌ ಕುರಿತ ಅಪಪ್ರಚಾರ ಸ್ವಾತಂತ್ರ್ಯ ನಂತರದಲ್ಲಿ ಆರಂಭವಾಯಿತು. ಸ್ವಾಮಿ ವಿವೇಕಾನಂದ, ಸ್ವಾಮಿ ದಯಾನಂದ ಸರಸ್ವತಿ ಮತ್ತು ಯೋಗಿ ಅರವಿಂದ್ ಅವರ ಖ್ಯಾತಿಯನ್ನು ಕೆಡಿಸುವುದು ಈ ವಿರೋಧಿಗಳ ಗುರಿಯಾಗಿತ್ತು. ಏಕೆಂದರೆ ಅವರು ಭಾರತೀಯ ರಾಷ್ಟ್ರೀಯತೆಯನ್ನು ಮುನ್ನೆಲೆಗೆ ತಂದವರಾಗಿದ್ದರು. ಸಾವರ್ಕರ್‌ ಮತ್ತು ವಿವೇಕಾನಂದರ ರಾಷ್ಟ್ರೀಯತೆಯ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ಪ್ರತಿಪಾದಿಸಿದರು.

ಪುಸ್ತಕವನ್ನು ಪರಿಚಯಿಸುವಾಗ, ಔರಂಗಜೇಬನಂತಹ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡಬಾರದೆಂದು ವಾದಿಸಿದ ಮಹೂರ್ಕರ್ ಅವರ ಮಾತನ್ನು ಒಪ್ಪಿಕೊಂಡ ಭಾಗವತ್, “ಮಹೂರ್ಕರ್ ಹೇಳಿದ್ದನ್ನು, ನಾನು ಅವರನ್ನು 100 ಪ್ರತಿಶತ ಬೆಂಬಲಿಸುತ್ತೇನೆ” ಎಂದಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಹಿಂದೂ-ಮುಸ್ಲಿಂ ಏಕತೆಗೆ ಮೂಲಭೂತವಾದ ಮತ್ತು ವಹಾಬಿಸಂನಿಂದ ಅಪಾಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು. “ಬ್ರಿಟಿಷರು ತಮ್ಮ ವೈವಿಧ್ಯತೆಯ ಹೊರತಾಗಿಯೂ ಭಾರತೀಯರು ಒಗ್ಗೂಡಿ ನಮ್ಮನ್ನು ಹೊರಹಾಕಬಹುದು ಎಂದು ಅರಿತುಕೊಂಡರು. ಆದ್ದರಿಂದ ಅವರು ಮೂಲಭೂತವಾದದಿಂದಾಗಿ ರೂಪುಗೊಳ್ಳಲು ಆರಂಭಿಸಿದ ಬಿರುಕನ್ನು ವಿಸ್ತರಿಸಿದರು. ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿರುವಾಗ ಇದನ್ನು ಅನುಭವಿಸಿದರು. ಅವರು ಅಂಡಮಾನ್‌ನಿಂದ ಹಿಂದಿರುಗಿದ ನಂತರ ಅವರ ಹಿಂದುತ್ವ ಮಹಾಕಾವ್ಯವನ್ನು ಬರೆಯಲಾಗಿದೆ” ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಮುಖ್ಯಸ್ಥರು ಭಾರತದಲ್ಲಿ ಯಾವಾಗ ಧರ್ಮದ ಆಧಾರದ ಮೇಲೆ ಎರಡು ರಾಷ್ಟ್ರಗಳಿವೆ ಎಂಬ ಧ್ವನಿಗಳು ಏಳಲಾರಂಭಿಸಿದವು, ಆಗ ಸಾವರ್ಕರ್‌‌, ರಾಷ್ಟ್ರೀಯತೆಯು ಧಾರ್ಮಿಕ ಭಿನ್ನತೆಗಳನ್ನು ಮೀರಿದ್ದು ಮತ್ತು ನಾವು ಭಿನ್ನವಾಗಿಲ್ಲ ಎಂದು ಕೂಗಬೇಕಾಯಿತು ಎಂದರು.

ರಾಜನಾಥ್‌ ಸಿಂಗ್‌ ಹೇಳಿಕೆಗೆ ಟೀಕೆ

ರಾಜನಾಥ್‌ ಸಿಂಗ್‌ ಅವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಹಿರಿಯ ನ್ಯಾಯವಾಧಿ ಪ್ರಶಾಂತ್ ಭೂಷನ್‌ ಟ್ಟೀಟ್‌ ಮಾಡಿದ್ದು, “ತನ್ನನ್ನು ಶೂಟ್ ಮಾಡುವಂತೆ ಗೋಡ್ಸೆಯನ್ನು ಗಾಂಧೀಜಿ ಕೇಳಿದರು, ರಾಜ್‌ನಾಥ್‌ ಸಿಂಗ್‌ ಜೀ” ಎಂದಿದ್ದಾರೆ.

ಸಮೀನ್‌ ಅಖ್ತರ್‌ ಪ್ರತಿಕ್ರಿಯಿಸಿ, ” ಗಾಂಧಿ ಆಕಸ್ಮಿಕವಾಗಿ ಗುಂಡೇಟಿಗೆ ಬಲಿಯಾದರು ಮತ್ತು ಗಾಡ್ಸೆ ಗಾಂಧಿಯ ಸಶಸ್ತ್ರ ಅಂಗರಕ್ಷಕರಾಗಿದ್ದರು ಎಂಬುದು ನನಗೆ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

“ಗಾಂಧೀಜಿ ಸತ್ತಿದ್ದು, ಆಟೋರಿಕ್ಷಾ ಅಪಘಾತದಲ್ಲಿ ಎಂಬುದು ಸತ್ಯವಾಗಿದೆ” ಎಂದು ವಿಶಾಲ್‌ ಎಂಬುವವರು ಕುಟುಕಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...