Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...