Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...