Homeಮುಖಪುಟದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಲಖಿಂಪುರ್‌ ಖೇರಿಯಲ್ಲಿ ನಡೆದಂತಹ ಘಟನೆ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಲೆ ಇರುತ್ತವೆ. ಅದನ್ನು ಕೂಡಾ ಎಲ್ಲರೂ ಪ್ರಶ್ನಿಸಬೇಕು ಎಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡುತ್ತಿದ್ದರು.

ಲಖಿಂಪುರ್‌ ಖೇರಿಯಲ್ಲಿ ನಡೆದ ಘಟನೆ ಖಂಡನೀಯವಾಗಿದ್ದು, ಅದನ್ನು ಸಮರ್ಥಿಸುವುದಿಲ್ಲ. ಭಾರತದ ಇತರ ಭಾಗಗಳಲ್ಲಿಯೂ ಸಹಜವಾಗಿ ನಡೆಯುವ ಇಂತಹ ಘಟನೆಗಳ ಬಗ್ಗೆ ಯಾಕೆ ಚರ್ಚೆ ಆಗುತ್ತಿಲ್ಲ ಎಂದು ಕೇಳಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಅದನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರ ಹತ್ಯೆ ಮತ್ತು ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾ ಬಂಧನದ ಕುರಿತು ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. “ಘಟನೆಯ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಇತರ ಮಂತ್ರಿಯಾಗಲಿ ಯಾಕೆ ಮಾತನಾಡುತ್ತಿಲ್ಲ ಮತ್ತು ಘಟನೆಯ ಬಗ್ಗೆ ಪ್ರಶ್ನಿಸಿದಾಗ ಸಮರ್ಥನೆ ನೀಡುವಂತೆ ಪ್ರತಿಕ್ರಿಯೆ ಯಾಕೆ ನೀಡಲಾಗುತ್ತದೆ” ಎಂದು ಅವರನ್ನು ಪ್ರಶ್ನಿಸಲಾಗಿತ್ತು.

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು, “ಖಂಡಿತವಾಗಿ ಅಲ್ಲ…ನೀವು ಕೇಳಿರುವ ಈ ಘಟನೆ ಖಂಡಿತ ಸಂಪೂರ್ಣ ಖಂಡನೀಯವಾಗಿದೆ, ನಮ್ಮಲ್ಲಿ ಪ್ರತಿಯೊಬ್ಬರೂ ಅದನ್ನೆ ಹೇಳುತ್ತಾರೆ. ಅದೇ ರೀತಿ ಬೇರೆಡೆ ಕೂಡಾ ಇದೇ ರೀತಿಯ ಘಟನೆ ನಡೆಯುತ್ತದೆ, ಇದು ನನ್ನ ಕಾಳಜಿ” ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ರೀತಿಯ ಸಮಸ್ಯೆಗಳು ದೇಶದ ಅನೇಕ ಭಾಗಗಳಲ್ಲಿ ಸಮಾನವಾಗಿ ನಡೆಯುತ್ತಿದೆ. ನೀವು, ಇತರರು ಹಾಗೂ ಡಾ.ಅಮರ್ತ್ಯ ಸೇನ್‌ ಅವರು ಸೇರಿದಂತೆ ಭಾರತವನ್ನು ತಿಳಿದಿರುವ ಅನೇಕರಿಗೆ ಹೇಳಲು ಬಯಸುವುದು, ಇಂತಹ ಘಟನೆಗಳು ಪ್ರತಿ ಭಾರಿ ಸಂಭವಿಸಿದಾಗ ಪ್ರಶ್ನೆಗಳನ್ನು ಕೇಳಬೇಕು. ಕೇವಲ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಮಾತ್ರವೆ ನಡೆದಾಗ ಮತ್ತು ಅದರಲ್ಲಿ ನನ್ನ ಕ್ಯಾಬಿನೆಟ್ ಸಹೋದ್ಯೋಗಿಯ ಮಗನೊಬ್ಬ ಇದ್ದಾನೆಂಬುದನ್ನು ಊಹಿಸಿ ಪ್ರಶ್ನಿಸುವುದಲ್ಲ. ಘಟನೆಯ ಬಗ್ಗೆ ಸರಿಯಾದ ವಿಚಾರಣೆ ನಡೆಸಿ ನ್ಯಾಯವನ್ನು ಎತ್ತಿಹಿಡಿಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

“ಇದು ಕೇವಲ ನನ್ನ ಪಕ್ಷ ಅಥವಾ ನನ್ನ ಪ್ರಧಾನ ಮಂತ್ರಿಯ ಬಗ್ಗೆ ಸಮರ್ಥಿಸುವುದಲ್ಲ. ಇದು ಭಾರತವನ್ನು ಸಮರ್ಥಿಸುವುದು. ನಾನು ಭಾರತಕ್ಕಾಗಿ ಮಾತನಾಡುತ್ತೇನೆ, ಬಡವರ ನ್ಯಾಯಕ್ಕಾಗಿ ಮಾತನಾಡುತ್ತೇನೆ. ನನ್ನನ್ನು ಗೇಲಿ ಮಾಡಲಾಗುವುದಿಲ್ಲ, ಒಂದು ವೇಳೆ ಗೇಲಿ ಮಾಡುತ್ತಿದ್ದರೆ, ನಾನು ಎದ್ದು ನಿಂತು ‘ಕ್ಷಮಿಸಿ, ಸತ್ಯಗಳ ಬಗ್ಗೆ ಮಾತನಾಡೋಣ’ ಎಂದು ಸಮರ್ಥಿಸಿಕೊಳ್ಳುತ್ತೇನೆ. ಇದು ನಿಮಗೆ ನನ್ನ ಉತ್ತರ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...