Homeಮುಖಪುಟನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. - ಬೊಮ್ಮಾಯಿ

- Advertisement -
- Advertisement -

ಕರ್ನಾಟಕದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿದ್ದು ಅವುಗಳನ್ನು ಸರ್ಕಾರ ನಿಗ್ರಹಿಸಬೇಕು ಎಂಬ ಹಕ್ಕೊತ್ತಾಯ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೈತಿಕ ಪೊಲೀಸ್‌ ಗಿರಿಯನ್ನು ಸಮರ್ಥಿಸಿವಂತೆ ಮಾತಾನಾಡಿದ್ದಾರೆ.

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗಾಗಿ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದಿದ್ದಾರೆ.

ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. ಇಂಥ ಸಂದರ್ಭದಲ್ಲಿ ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕವಾಗಿಯೂ ಸಾಮರಸ್ಯ ಕಾಪಾಡಲು ನಾವೆಲ್ಲರೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು” ಎಂದಿದ್ದಾರೆ.

ಮುಂದುವರಿದು ಕೆಲವು ಯುವಕರು ಏನಾದರೂ ಕೈಗೆತ್ತುಕೊಂಡು, ಈಗ ಅವರ ಒಂದು, ಈ ಸಮಾಜದ ಭಾವೆನೆಗಳಿಗೆ ಧಕ್ಕೆಯಾಗದಂತೆ ಅವರು ಕೂಡ ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಇದೊಂದು ಸಮಾಜಿಕವಾಗಿರುವ ಪ್ರಶ್ನೆ ಇದೆ. ಸಮಾಜದಲ್ಲಿ ಮೊರಾಲಿಟಿ ಇರಬೇಕು. ನೈತಿಕತೆ ಇಲ್ಲದೇ ನಾವು ಬದಕಲು ಸಾಧ್ಯವೇ? ಎಂದಿದ್ದಾರೆ.

ನಿಮ್ಮ ಶಾಸಕರೆ ಎಂದು ಪತ್ರಕರ್ತರ ಪ್ರಶ್ನೆಯನ್ನು ತುಂಡರಿಸಿದ ಅವರು, ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಇವತ್ತು ನಾವು ನಮ್ಮಲ್ಲ ಸಂಬಂಧಗಳು, ಶಾಂತಿ ಸುವ್ಯವಸ್ಥೇ ಇರುವುದು ನಮ್ಮ ಮೇಲೆ ನಾವು ನಿಯಂತ್ರಣವಿರುವುದರಿಂದ, ನೈತಿಕತೆಯಿಂದ. ನೈತಿಕತೆ ಇಲ್ಲದಾಗ ಎಲ್ಲಾ ಥರದ ಘಟನೆಗಳು ನಡೆಯುತ್ತವೆ ಎಂದಿದ್ದಾರೆ.

ಸಿಎಂರವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸದ್ದಾರೆ.

ಮಾನ್ಯ ಬಸವರಾಜ ಬೊಮ್ಮಾಯಿಯವರೆ, ರಾಜ್ಯದ ಮುಖ್ಯಮಂತ್ರಿಯಾಗಿ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿರುವುದು ಎಷ್ಟು ಸರಿ? ಜನರ ಭಾವನೆಗಳಿಗೆ ಧಕ್ಕೆಯಾದಾಗ ಅವರಿಗೆ ಕಾನೂನನ್ನು ಕೈಗೆತ್ತಿಕೊಳ್ಳುವ ಅವಕಾಶ ತಮ್ಮ ಆಡಳಿತದಲ್ಲಿಇದೆಯೇ? ಹಾಗಾದರೆ ಗೃಹ ಇಲಾಖೆ ಇರುವುದಾದರೂ ಯಾಕಾಗಿ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಲ್ ಪಿರಾಜೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮುಸಲ್ಮಾನ ಅನೈತಿಕ ಗೂಂಡಾಗಳು ಭಿನ್ನ ಧರ್ಮದ ಗಂಡು ಹೆಣ್ಣಿನ ಮೇಲೆ ಹಲ್ಲೆ ನಡೆಸಿದಾಗ ಸಿಡಿದೆದ್ದು ಕಾನೂನಿನ ಪಾಠ ಮಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನ ಸಂಘಪರಿವಾರದ ಅನೈತಿಕ ಗೂಂಡಾಗಿರಿಯ ವಿಷಯದಲ್ಲಿ ಉಲ್ಟಾ ಹೊಡೆದಿದ್ದಾರೆ. ಭಾವನೆಗಳಿಗೆ ಧಕ್ಕೆ, ಕ್ರಿಯೆಗೆ ಪ್ರತಿಕ್ರಿಯೆ ಎಂಬುದು ಎಲ್ಲಾ ಮತೀಯವಾದಿಗಳ ರೆಡಿಮೇಡ್ ಡೈಲಾಗ್. ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿಯೊಬ್ಬ ಅದೇ ಡೈಲಾಗ್ ಹೊಡೆಯುತ್ತಾರೆ, ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುತ್ತಾರೆ ಅಂತಾದರೆ ಗತಿಯೇನು? ಎಂದು ಡಿವೈಎಫ್‌ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯ ಈ ಮಾತಿನಿಂದ ಈಗಾಗಲೇ ಹೆಂಡ ಕುಡಿದ ಕಪಿಗಳಂತೆ ಆಡುತ್ತಿರುವ ಮತೀಯವಾದಿ ಸಂಘಟನೆಗಳ ಕಾರ್ಯಕರ್ತರು ಮತ್ತಷ್ಟು ಪ್ರಚೋದಿತರಾಗಿ ಬೀದಿಗಿಳಿಯುವುದು ಖಂಡಿತ. ಕ್ರಿಯೆಗೆ ಪ್ರತಿಕ್ರಿಯೆ ಎಂದು ಮತ್ತೊಂದು ಕೋಮಿನ ಅನೈತಿಕ ಪೊಲೀಸರೂ ಸ್ಪರ್ಧೆಗೆ ಬಿದ್ದರೆ ಪರಿಸ್ಥಿತಿ ಎಲ್ಲಿಗೆ ತಲುಪುತ್ತದೆ ? ಮುಖ್ಯಮಂತ್ರಿಯೊಬ್ಬ ಇಷ್ಟು ಬೇಜವಾಬ್ದಾರಿತನ ಮೆರೆಯುವುದು ನಾಚಿಕೆಗೇಡು. ಪ್ರಜಾಪ್ರಭುತ್ವ ದೇಶದ ದುರಂತ. ತನ್ನ ಈ ನಾಚಿಕೆಗೇಡಿನ ಮಾತಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಯೋಜಕಿ ಲಾವಣ್ಯ ಬಲ್ಲಾಳ್, “ನಿಮ್ಮ ಮಾತಿನ ಅರ್ಥವೇನು ಬೊಮ್ಮಾಯಿಯವರೆ, ರಾಜ್ಯದ ಮುಖ್ಯಮಂತ್ರಿಗಳೆ ಮಾರಲ್ ಪೊಲೀಸಿಂಗ್ ಅನ್ನು ಬೆಂಬಲಿಸಿದರೆ ಇನ್ನು ಗುಲಾಮರಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ? ದಯವಿಟ್ಟು ಕರ್ನಾಟಕದ ನಾಗರಿಕರು ತಮ್ಮ ಸುರಕ್ಷತೆಯನ್ನು ತಾವೇ ಕಾಪಾಡಿಕೊಳ್ಳಬೇಕು ಹೊರತು ಸರ್ಕಾರದಿಂದ ಏನನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...