Homeಕರ್ನಾಟಕಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ; ಕರವೇ ಎಚ್ಚರಿಕೆ

- Advertisement -
- Advertisement -

ಇತ್ತೀಚಿಗೆ ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗೀ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಕಡೆಗಣಿಸುತ್ತಿದ್ದು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಕಾರ್ಯಕ್ರಮ ನಡೆಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಕಡೆಗಣಿಸಿದರೆ ಸಹಿಸುವುದಿಲ್ಲ ಎಂದು ಕರವೇ ಎಚ್ಚರಿಕೆ ನೀಡಿದೆ.

ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಹಾಗೂ ರಾಜೀವ್ ಗಾಂಧಿ ಎದೆರೋಗ ಸಂಸ್ಥೆ ಹಾಗು ರಾಷ್ಟ್ರೀಯ ನರವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿ 10-10-2021ರಂದು ನಡೆದ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕಾರ್ಯಕ್ರಮದ ಬ್ಯಾನರ್ ಸೇರಿದಂತೆ ಎಲ್ಲವನ್ನು ಹಿಂದಿ, ಇಂಗ್ಲಿಷ್‌ನಲ್ಲಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಇಂದು ಆ ಸಂಸ್ಥೆಗಳಿಗೆ ಭೇಟಿ ನೀಡಿ ಮುಂದೆ ಕನ್ನಡವನ್ನೇ ಬಳಸುವಂತೆ ಒತ್ತಾಯಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ಸಾಮಾಜಿಕ‌ ಜಾಲತಾಣ ಮಖ್ಯಸ್ಥರಾದ ದಿನೇಶ್ ಕುಮಾರ್ ಎಸ್.ಸಿ, “ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಹಾಗು ರಾಜೀವ್ ಗಾಂಧಿ‌ ಆಸ್ಪತ್ರೆಯ ನಿರ್ದೇಶಕ‌‌ ಡಾ.ನಾಗರಾಜ್ ಅವರಿಗೆ ಖಂಡನಾ ಪತ್ರವನ್ನು ನೀಡಿದ್ದೇವೆ. ಆಗಿರುವ ಪ್ರಮಾದವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದೇವೆ. ಈ ಸಂದರ್ಭದಲ್ಲಿ ಕನ್ನಡ ಕಡೆಗಣನೆ ಆಗಿರುವುದನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು ಇನ್ನುಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದರು” ಎಂದಿದ್ದಾರೆ.

ನಿಮ್ಹಾನ್ಸ್ ಸಂಸ್ಥೆಗೆ ನೂರು ಎಕರೆ ಜಾಗ ನೀಡಿ, ಅಡಿಗಲ್ಲು ಹಾಕಿ ಸ್ಥಾಪಿಸಿದ್ದು ರಾಜರ್ಷಿ‌ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. 1936ರಲ್ಲಿ ನಿಮ್ಹಾನ್ಸ್ ಸಂಸ್ಥೆಯನ್ನು ಸ್ಥಾಪಿಸಿದಾಗ ಹಿಂದಿ ಎಂಬ ಭಾಷೆಯ ಪರಿಚಯವೇ ಕನ್ನಡಿಗರಿಗೆ ಇರಲಿಲ್ಲ. ಇಂಥ‌ ಸಂಸ್ಥೆಯಲ್ಲಿ ಹಿಂದಿ ನುಡಿಗೆ ಹೆಚ್ಚುಗಾರಿಕೆ ನೀಡಿ,‌ ಕನ್ನಡಕ್ಕೆ ಅಪಮಾನ ಎಸಗಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗದಲ್ಲಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಉಪಾಧ್ಯಕ್ಷ‌ ಬಿ.ಎಚ್.ಸತೀಶ್ ಗೌಡ,‌ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಎ.ಧರ್ಮರಾಜ್ ಗೌಡ, ಸಾಮಾಜಿಕ ಜಾಲತಾಣ ಬೆಂಗಳೂರು ನಗರ ಅಧ್ಯಕ್ಷ ನಿತೀಶ್ ಮನುಗೌಡ, ವಿಜಯನಗರ ಕ್ಷೇತ್ರ ಘಟಕದ ಅಧ್ಯಕ್ಷ ಬಾಲು, ಯುವ ಘಟಕದ ಬೆಂಗಳೂರು ನಗರ ಅಧ್ಯಕ್ಷ ಕಾರ್ತಿಕ್ ಸೇರಿದಂತೆ‌ ಹಲವರು ಪಾಲ್ಗೊಂಡಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಔದು ಕರ್ನಾಟಕದಲ್ಲಿ ಕನ್ನಡ ಭಾಷೆಯೆ ಸಾರ್ವಭೌಮ ,ಕನ್ನಡ ಮೊದಲು ನಂತರ ಹಿಂದಿ ,ಇಂಗ್ಲೀಷ್ ಭಾಷೆ ಸರಿಯಾದ ವಿಚಾರವೇ ,ಆದರೆ ಮೊದಲು ಈ ಹೋರಾಟ ಗಾರರು ಕನ್ನಡ ಭಾಷೆಯ ಇತಿಹಾಸ ,ವ್ಯಾಕರಣ ,ನಾಡಗೀತೆ ಗಳನ್ನ ಮೊದಲು ತಿಳಿದಿರಬೇಕು .

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...