Homeಮುಖಪುಟಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು - ತೀವ್ರ ಖಂಡನೆ

ಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು – ತೀವ್ರ ಖಂಡನೆ

- Advertisement -
- Advertisement -

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ಸರತಿ ಸಾಲಿನಲ್ಲಿ ನಿಂತ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಿಗರು ವಿಡಿಯೋವನ್ನು ಹಂಚಿಕೊಂಡು ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಕೆಲದಿನಗಳಿಂದ ಮಧ್ಯಪ್ರದೇಶ ಹಲವು ನಗರಗಳಲ್ಲಿ ರಸಗೊಬ್ಬರದ ಕೊರತೆ ಕಂಡುಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ DAP ಗೊಬ್ಬರ ಸರಬರಾಜು ಮಾಡುತ್ತಿದ್ದೇವೆ ಎಂದು ಹೇಳಿಕೊಂಡಿತ್ತು. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ಟ್ವೀಟ್ ಮಾಡಿ ನಾವು ಸಬ್ಸಿಡಿ ದರದಲ್ಲಿ ರೈತರಿಗೆ ರಸಗೊಬ್ಬರ ನೀಡುತ್ತಿದ್ದೇವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರದ ಬೆಲೆ ಹೆಚ್ಚಿದ್ದರೂ ಕಡಿಮೆ ಬೆಲೆ ರೈತರಿಗೆ ಒದಗಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು.

ಕೃಷಿ ಸಚಿವರ ಸ್ವಂತ ಜಿಲ್ಲೆ ಮೊರೆನಾದಲ್ಲಿಯೇ ರೈತರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಮಂಗಳವಾರ ಮಧ್ಯಾಹ್ನ ಮೊರೆನಾ ಜಿಲ್ಲೆಯ ಕೈಲಾರಸ್ ಪಟ್ಟಣದಲ್ಲಿ ಸಹಕಾರಿ ಸಂಘದ ಹೊರಗೆ ಜಮಾಯಿಸಿದ ರೈತರು ಒಬ್ಬರನ್ನೊಬ್ಬರು ತಳ್ಳುವ ರೀತಿ ರೈತರು ಸರತಿ ಸಾಲಿನಲ್ಲಿ ನಿಂತಿದ್ದರು. ಸಹಕಾರಿ ಸಂಘದ ಹೊರಗೆ ಕಾಲ್ತುಳಿತದಂತಹ ಪರಿಸ್ಥಿತಿ ಇತ್ತು. ಜನಜಂಗುಳಿಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಪೊಲೀಸರನ್ನು ಒತ್ತಾಯಿಸಿತು. ಹಾಗಾಗಿ ಪೊಲೀಸರು ಮನಬಂದತೆ ಲಾಠಿ ಬೀಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಘಟನೆಯನ್ನು ಖಂಡಿಸಿರುವ ಕಿಸಾನ್ ಏಕ್ತಾ ಮೋರ್ಚಾ, “ಸಚಿವರು ಟ್ವಿಟರ್‌ನಲ್ಲಿ ರಸಗೊಬ್ಬರ ಚೀಲಗಳನ್ನು ವಿತರಿಸಬಹುದೆನೋ. ಏಕೆಂದರೆ ಗೊಬ್ಬರ ಪಡೆಯಲು ಸರತಿ ಸಾಲಿನಲ್ಲಿ ನಿಂತ ರೈತ ದೊಣ್ಣೆಗಳಿಂದ ಏಟು ಪಡೆಯುತ್ತಿದ್ದಾರೆ” ಎಂದು ಕಿಡಿಕಾರಿದೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರ ಕೇಳಿದ ರೈತರಿಗೆ ಲಾಠೀಚಾರ್ಜ್ ಮಾಡಲಾಗುತ್ತಿದೆ. ಬಿಜೆಪಿಯು ಸಂಪೂರ್ಣ ರೈತ ವಿರೋಧಿಯಾಗಿದೆ. ದೇಶದ ಅನ್ನದಾತ ಸ್ವತಂತ್ರ ಭಾರತದಲ್ಲಿ ಎಂದಿಗೂ ಇಂತಹ ಕ್ರೌರ್ಯವನ್ನು ಎದುರಿಸಿಲ್ಲ ಎಂದು ಹಲವು ಕಾಂಗ್ರೆಸ್ ಮುಖಂಡರು ಟ್ವೀಟ್ ಮಾಡಿದ್ದಾರೆ.

ಮಧ್ಯ ಪ್ರದೇಶದ ಮೊರೆನಾದಲ್ಲಿ ರಸಗೊಬ್ಬರ ಕೊರತೆಯನ್ನು ಎದುರಿಸುತ್ತಿರುವ ಹಸಿದ ಮತ್ತು ಬಾಯಾರಿದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದರು. ಬೆಳಿಗ್ಗೆಯಿಂದ ಹಸಿದ ಮತ್ತು ಬಾಯಾರಿದ ರೈತರ ಮೇಲೆ ಪೊಲೀಸರು ಲಾಠಿ ಮಳೆಗೈದರು ಎಂದು ರಾಜ ಎಂಬ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...