Homeಮುಖಪುಟಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶರು ಈ ಪ್ರಕರಣವು 'ಅಪರೂಪದಲ್ಲಿ ಅಪರೂಪ' ಎಂದು ಕರೆದಿದ್ದಾರೆ

- Advertisement -
- Advertisement -

ತನ್ನ ಪತ್ನಿ ‘ಉತ್ರಾ’ ಅವರಿಗೆ ವಿಷಪೂರಿತ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೂರಜ್ ಎಸ್ ಕುಮಾರ್‌ಗೆ ಬುಧವಾರ ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು ಎರಡು ಬಾರಿ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ನ್ಯಾಯಾಧೀಶ ಎಂ.ಮನೋಜ್ ಅವರು ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಹೇಳಿದ್ದಾರೆ.

ಆರೋಪಿಗೆ ಮರಣ ದಂಡನೆ ನೀಡಬೇಕು ಎಂದು ಉತ್ರಾ ಪರವಾಗಿ ವಾದಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ಮೋಹನರಾಜ್ ನ್ಯಾಯಾಲಯಕ್ಕೆ ವಿನಂತಿಸಿದ್ದರು. ಆದರೆ ಆರೋಪಿಯ ವಯಸ್ಸು ಮತ್ತು ಕ್ರಿಮಿನಲ್ ಹಿನ್ನಲೆ ಇಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿ ತೀರ್ಪಿತ್ತಿದೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಪ್ರಾಸಿಕ್ಯೂಟರ್ ಪ್ರಕಾರ, ಕೊಲೆ ಮಾಡಿರುವುದಕ್ಕೆ ನೀಡಲಾಗಿರುವ ಜೀವಾವಧಿ ಅಲ್ಲದೆ, ಸೂರಜ್‌ ಕುಮಾರ್‌ಗೆ ಕೊಲೆ ಯತ್ನ ನಡೆಸಿದ ಅಪರಾಧಕ್ಕೆ ಜೀವಾವಧಿ ಘೋಷಿಸಲಾಗಿದೆ. ಜೊತೆಗೆ ಪತ್ನಿಗೆ ವಿಷದ ಮೂಲಕ ಹಾನಿ ಮಾಡಿದ್ದಕ್ಕೆ 10 ವರ್ಷ ಹಾಗೂ ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಏಳು ವರ್ಷಗಳ ಶಿಕ್ಷೆಯನ್ನು ಘೋಷಿಸಲಾಗಿದೆ. ಜೊತೆಗೆ ನ್ಯಾಯಾಲಯವು ಅಪರಾಧಿಗೆ ಒಟ್ಟು 5.85 ಲಕ್ಷ ದಂಡ ವಿಧಿಸಿದೆ.

“ಕೊಲೆ ಆರೋಪಿಗೆ ಶಿಕ್ಷೆ ವಿಧಿಸಲಾಗಿದ್ದು, ವೈಜ್ಞಾನಿಕವಾಗಿ ಮತ್ತು ವೃತ್ತಿಪರವಾಗಿ ಕೊಲೆ ಪ್ರಕರಣವನ್ನು ಭೇದಿಸಲಾಗಿದೆ. ಪ್ರಕರಣವೊಂದನ್ನು ಹೀಗೂ ತನಿಖೆ ಮಾಡಿ ಪತ್ತೆ ಮಾಡಬಹುದು ಎಂಬುದಕ್ಕೆ ಇದು ಒಂದು ಅತ್ಯುತ್ತಮ ಉದಾಹರಣೆಯಾಗಿದೆ” ಎಂದು ಕೇರಳ ಡಿಜಿಪಿ ಹೇಳಿದ್ದಾರೆ.

ಸೂರಜ್‌ ಕುಮಾರ್‌ ತನ್ನ 25 ವರ್ಷದ ಪತ್ನಿ ಉತ್ರಾ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ನಾಗರ ಹಾವು ಕಚ್ಚಿಸಿ ಕೊಲೆ ಮಾಡಿದ್ದ. ಅದಕ್ಕಿಂತಲೂ ಮುಂಚೆಯು ಆತ ಉತ್ರಾ ಅವರನ್ನು ಕೊಲೆ ಮಾಡಲು ಕೊಳಕು ಮಂಡಲ ಹಾವನ್ನು ಬಳಸಿದ್ದನು. ಆದರೆ ಕೊಲ್ಲಲಾಗಿರಲಿಲ್ಲ. ತದನಂತರ ಸೂರಜ್ ಕುಮಾರ್‌ ನಾಗರ ಹಾವನ್ನು ಹಲವು ದಿನಗಳ ಕಾಲ ಹಸಿವಿನಲ್ಲಿ ಕೆಡವಿದ್ದನು.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಹಾವು ಬಳಸಿ ಕೊಲೆ ಮಾಡಿದಂತಹ ಈ ಪ್ರಕರಣವು ಇಡೀ ದೇಶದಲ್ಲೆ ಮೊದಲು ಎಂದು ಲೈವ್ ಲಾ ವರದಿ ಮಾಡಿದೆ. ಇದೇ ರೀತಿ ಎರಡು ಪ್ರಕರಣಗಳು ಈ ಹಿಂದೆ ವರದಿಯಾಗಿತ್ತಾದರೂ, ಅದು ಸಾಬೀತಾಗದ ಕಾರಣ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ, ನಕಲಿ ಸರೀಸೃಪವನ್ನು ಬಳಸಿ ಮತ್ತು ಇಡೀ ಅಪರಾಧದ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಪೊಲೀಸರು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು.

ಪ್ರಕರಣದ ಹಿನ್ನೆಲೆ:

ದೇಶವನ್ನೆ ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, 25 ವರ್ಷದ ಗೃಹಿಣಿಯಾದ ಉತ್ರಾ 2020 ರ ಮೇ ತಿಂಗಳ 7 ರಂದು ಹಾವಿನ ಕಡಿತದಿಂದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ, ಅದನ್ನು ನೈಸರ್ಗಿಕ ಹಾವು ಕಡಿತ ಎಂದು ಹೇಳಲಾಗಿತ್ತಾದರೂ, ಉತ್ರಾ ಅವರ ಕುಟುಂಬ ಅದನ್ನು ಕೊಲೆ ಎಂದು ಆರೋಪಿಸಿದ್ದರು.

ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬ ಉತ್ರಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿತ್ತು ಆರೋಪಿಸಿದ್ದರು. ಅಲ್ಲದೆ, ಮುಚ್ಚಿದ ಹವಾನಿಯಂತ್ರಿತ ಕೋಣೆಗೆ ಹಾವು ಬರಲು ಸಾಧ್ಯವಿಲ್ಲ. ಜೊತೆಗೆ ಮನೆಯ ನೆಲವು ಟೈಲ್ಸ್‌ ಹಾಕಿರುವುದರಿಂದ ಅದು ಅಸಾಧ್ಯ ಎಂದು ವಾದಿಸಿದ್ದರು. ಚಿನ್ನ ಮತ್ತು ಆಸ್ತಿಯನ್ನು ಪಡೆಯಲು ಈ ಹತ್ಯೆಯನ್ನು ನಡೆಸಲಾಗಿದೆ, ಈ ಘಟನೆಗೂ ಒಂಬತ್ತು ವಾರದ ಮುಂಚೆ ಕೂಡಾ ಉತ್ರಾ ಅವರಿಗೆ ಹಾವೊಂದು ಕಚ್ಚಿದ್ದರಿಂದ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: SC/ST ಗಳ ವಿರುದ್ಧದ ಅಪರಾಧಗಳು 2020 ರಲ್ಲಿ 9% ಹೆಚ್ಚಳ – NCRB ಮಾಹಿತಿ

ಹಾವಿನ ಶಾಪ ಕುಟುಂಬದ ಮೇಲಿದೆ ಎಂದು ಅವರನ್ನು ನಂಬಿಸಲಾಗಿತ್ತಾದರೂ, ಅದನ್ನು ನಂಬದ ಕುಟುಂಬ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಅದರಂತೆ, ಪೋಲಿಸ್ ತನಿಖೆ ಪ್ರಾರಂಭವಾಗಿ ಸೂರಜ್ ಕುಮಾರ್ ವಿರುದ್ದ 1000 ಪುಟಗಳ ಚಾರ್ಜ್ ಶೀಟ್ ತಯಾರಿಸಿದ್ದರು. ಇದರಲ್ಲಿ ಅವನ ಕೃತ್ಯವನ್ನು ಪೊಲೀಸರು ಬಯಲಿಗೆಳೆದಿದ್ದರು.

ಸೂರಜ್ ಕುಮಾರ್‌ ಜೊತೆಗೆ ಅವನಿಗೆ ಎರಡು ಹಾವಗಳನ್ನು ಪಡೆಯಲು ಸಹಾಯ ಮಾಡಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡಾ ಪೊಲೀಸರು ಬಂದಿಸಿದ್ದರು. ಸೂರಜ್ ಅವನಿಗೆ 10 ಸಾವಿರ ನೀಡಿ ಹಾವುಗಳನ್ನು ಖರೀದಿಸಿದ್ದನು. ಹಾವು ಮಾರಾಟ ಮಾಡಿದ ವ್ಯಕ್ತಿಗೆ ಸೂರಜ್ ಯಾಕಾಗಿ ತನ್ನಿಂದ ಹಾವುಗಳನ್ನು ಕೊಂಡುಕೊಂಡಿದ್ದಾನೆ ಎಂಬ ವಿಷಯ ತಿಳಿದಿರಲಿಲ್ಲ.

ಪೊಲೀಸ್‌ ವಿಚಾರಣೆಯ ಸಮಯದಲ್ಲಿ ಸೂರಜ್ ಕುಮಾರ್‌ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದನು. ತನ್ನ ಹೆಂಡತಿಯನ್ನು ಕೊಲ್ಲುವ ಉದ್ದೇಶದಿಂದ ಎರಡು ಹಾವುಗಳನ್ನು ಹಸಿವಿನಲ್ಲಿ ಕೆಡವಿ ಜಾರ್‌ ಒಂದರಲ್ಲಿ ಸಂಗ್ರಹಿಸಿ ಇಟ್ಟಿದ್ದೆ ಎಂದು ಒಪ್ಪಿಕೊಂಡಿದ್ದನು. ಇದರ ನಂತರ, ಸೂರಜ್‌ನ ತಂದೆ, ತಾಯಿ ಮತ್ತು ಸಹೋದರಿಯನ್ನು ಬಂಧಿಸಲಾಗಿತ್ತು. ಅವರು ಉತ್ರಾ ಅವರ ಸುಮಾರು 38 ಪವನ್ ಚಿನ್ನವನ್ನು ಮನೆಯ ಹಿಂದಿನ ರಬ್ಬರ್‌ ಎಸ್ಟೇಟ್‌ನಲ್ಲಿ ಗುಂಡಿತೋಡಿ ಬಚ್ಚಿಟ್ಟಿದ್ದರು.

ಇದನ್ನೂ ಓದಿ: ವೇಶ್ಯಾವಾಟಿಕೆ ಸಂಘಟಿತ ಅಪರಾಧ, ಇದನ್ನು ತಡೆಯಲು ಮುಂದಾಗಬೇಕು- ಸ್ಟ್ಯಾನ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...