Homeಕರ್ನಾಟಕಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿ.ವಿ: ಒಳಜಗಳದ ಒಳಸುಳಿಗಳು

ಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿ.ವಿ: ಒಳಜಗಳದ ಒಳಸುಳಿಗಳು

- Advertisement -
- Advertisement -

ಮುತ್ತುರಾಜ್ |

ಶೈಕ್ಷಣಿಕವಾಗಿ ಹಿಂದುಳಿದಿರುವ ಬಳ್ಳಾರಿ ಜಿಲ್ಲೆಯಲ್ಲಿ ಹೊಸ ಶಿಕ್ಷಣ ಕ್ರಾಂತಿಯನ್ನು ಮಾಡಬೇಕೆಂಬ ಆಶಯದೊಂದಿಗೆ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವನ್ನು 2010ರಲ್ಲಿ ಆರಂಭಿಸಲಾಯಿತು. ಕೊಪ್ಪಳ ಮತ್ತು ಬಳ್ಳಾರಿ ಎರಡು ಜಿಲ್ಲೆಗಳಲ್ಲಿ ಅಧಿಕಾರ ವ್ಯಾಪ್ತಿ ಹೊಂದಿರುವ, ಬಳ್ಳಾರಿಯ ವಿನಾಯಕನಗರದಲ್ಲಿ 100 ಎಕರೆ ವಿಶಾಲ ಪ್ರದೇಶದಲ್ಲಿ ಸ್ಥಾಪಿತವಾಗಿರುವ ಈ ವಿ.ವಿಯು ಶುರುವಾಗಿ 9 ವರ್ಷ ಆದರೂ ತನ್ನ ಮಹತ್ವಾಕಾಂಕ್ಷೆಯನ್ನು ಈಡೇರಿಸಲು ಸಫಲವಾಗಿಲ್ಲ. ಅಷ್ಟರಲ್ಲಾಗಲೇ ವಿ.ವಿಯು ನೇಮಕಾತಿ ಗೊಂದಲದಿಂದ ನಲುಗುತ್ತಿದ್ದು ಇಲ್ಲಿನ ಒಳಜಗಳ ಬೀದಿಗೆ ಬಂದುನಿಂತಿದೆ. ಗುಣಮಟ್ಟದ ಉನ್ನತ ಶಿಕ್ಷಣದ ಕನಸೊತ್ತು ಬರುವ ವಿದ್ಯಾರ್ಥಿಗಳ ಪಾಲಿಗೆ ಇದು ನಿಜವಾಗಲೂ ಸಮಗ್ರ ವಿ.ವಿ ಅನಿಸಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.
ಕಳೆದ ಹದಿನೈದು ದಿನಗಳಿಂದ ಕೃಷ್ಣದೇವರಾಯ ವಿ.ವಿಯಲ್ಲಿ ನಡೆಯುವ ಜಗಳಗಳು ದಿನಪತ್ರಿಕೆ, ಟಿವಿಗಳಿಗೆ ಆಹಾರವಾಗತೊಡಗಿವೆ. ಕುಲಪತಿ ಪ್ರೊ.ಎಂ.ಎಸ್ ಸುಭಾಷ್‍ರವರು ಕುಲಸಚಿವರಾದ ಪ್ರೊ.ಬಿ.ಕೆ ತುಳಸಿಮಾಲರವರನ್ನು ಪತ್ರಿಕಾಗೋಷ್ಠಿಯಿಂದ ಎದ್ದು ನಡಿಯಿರಿ ಎಂದದ್ದು ಇನ್ನು ಚರ್ಚೆಯಾಗುತ್ತಲೆ ಇದೆ. ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯ ನೇಮಕಾತಿ ವಿಚಾರದಲ್ಲಿ ದೊಡ್ಡ ಮಾರಾಮಾರಿಯೆ ನಡೆಯುತ್ತಿದೆ.

ಏನಿದು ವಿವಾದ?
ವಿ.ವಿಯು 2012 ರಲ್ಲಿ 134 ಬೋಧಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಮುಂದಾಗಿತ್ತು. 80% ಹೈದರಾಬಾದ್ ಕರ್ನಾಟಕದವರಿಗೆ ಮತ್ತು ಉಳಿದ ಹುದ್ದೆಗಳು ಜನರಲ್ ಮೆರಿಟ್ ಎಂದು ನಿರ್ಧರಿಸಲಾಗಿತ್ತು. ಶೇ.20 ಜನರಲ್ ಹುದ್ದೆಗಳು ನೇಮಕಗೊಂಡವೇ ಹೊರತು ಹೈ.ಕ ಭಾಗದವರಿಗೆ ದಕ್ಕಬೇಕಾಗಿದ್ದ 80% ಹುದ್ದೆಗಳು ಹಾಗೆ ಉಳಿದವು. ಹೈ.ಕ ದವರಿಗೆ ದಕ್ಕಬೇಕಿದ್ದ ಜೊತೆಗೆ 45 ಬೋಧಕೇತರ ಸಿಬ್ಬಂದಿ ನೇಮಕಾತಿಯೂ ನೆನೆಗುದಿಗೆ ಬಿದ್ದಿತ್ತು. ಪ್ರಸ್ತುತ ಕುಲಪತಿಗಳು ಈ ಹುದ್ದೆಗಳ ಭರ್ತಿಗೆ ಮುಂದಾಗಿದ್ದು 2018ರಲ್ಲೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದರು. ಆಗ ಮಧ್ಯ ಪ್ರವೇಶಿಸಿದ ಕೆಲವರು ಕುಲಪತಿಗಳ ಹುದ್ದೆ ಇನ್ನೇನು ಮುಗಿಯಲಿದೆ, ಚುನಾವಣೆ ಹತ್ತಿರ ಬಂದಿರುವಾಗ ನೇಮಕಾತಿ ನಡೆಯಬಾರದೆಂದು ಕೊಕ್ಕು ಹಾಕಿದರು.
ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದ ಕುಲಪತಿಗಳು ಸರ್ಕಾರಕ್ಕೆ ಪತ್ರ ಬರೆದು 371ಜೆ ಮೀಸಲಾತಿಗೆ ಅನ್ಯಾಯವಾಗುತ್ತಿದೆ, ಹಾಗಾಗಿ ತುರ್ತು ನೇಮಕಾತಿ ನಡೆಯಬೇಕೆಂದು ಕೋರಿದರು. ಇದಕ್ಕೆ ನೇಮಕಾತಿ ಪ್ರಕ್ರಿಯೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಸಿರು ನಿಶಾನೆ ತೋರಿದ್ದರು. ಅಷ್ಟು ಮಾತ್ರವಲ್ಲ ಈ ವಿಷಯಕ್ಕೆ ಚುನಾವಣಾ ಆಯೋಗ ಸಲ್ಲಿಸಿದ್ದ ನೀತಿಸಂಹಿತೆ ಉಲ್ಲಂಘನೆಯ ಅರ್ಜಿಯನ್ನು ಹೈ ಕೋರ್ಟ್ ವಜಾ ಮಾಡಿ ನೇಮಕಾತಿಗೆ ಚುನಾವಣಾ ನೀತಿಸಂಹಿತೆ ಅಡ್ಡಿ ಬರುವುದಿಲ್ಲ ಎಂದು ತೀರ್ಪು ನೀಡಿತ್ತು. ಇದರಿಂದ ಬೋಧಕ ಸಿಬ್ಬಂದಿಯ ನೇಮಕಾತಿಯು ನಡೆಯಿತು. ಈಗ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯೂ ಚಾಲನೆಯಲ್ಲಿದ್ದು ಇನ್ನೊಂದು ವಾರದಲ್ಲಿ ಮುಗಿಯಲಿದೆ. ತಾನು ಕುಲಪತಿ ಹುದ್ದೆಯಿಂದ ನಿರ್ಗಮಿಸುವುದರೊಳಗೆ ನೇಮಕಾತಿ ಮುಗಿಸಲೇಬೇಕೆಂದು ಪ್ರೊ.ಸುಭಾಷ್‍ರವರು ಹಠತೊಟ್ಟರೆ, ಕುಲಸಚಿವೆ ಪ್ರೊ.ಬಿ.ಕೆ ತುಳಸಿಮಾಲರವರು ನಿಯಮಾವಳಿಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಆರೋಪ ಮಾಡಿದರು. ಜೊತೆಗೆ ತಾನು ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿಯುವುದಾಗಿ ಘೋಷಿಸಿದ್ದರು. ಇನ್ನೊಂದಿಷ್ಟು ಜನ ನೇಮಕಾತಿಯಲ್ಲಿ ಭ್ರಷ್ಟಾಚಾರವೂ ನಡೆಯುತ್ತಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಟಿಯೆಂಬ ಡ್ರಾಮ
ವಿ.ವಿಯ 7 ಘಟಿಕೋತ್ಸವದ ನಿಮಿತ್ತ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು. ಕುಲಪತಿ ಪ್ರೊ.ಎಂ.ಎಸ್ ಸುಭಾಷ್ ಮತ್ತು ಕುಲಸಚಿವೆ ಪ್ರೊ.ಬಿ.ಕೆ ತುಳಸಿಮಾಲ ಉಪಸ್ಥಿತರಿದ್ದರು. ಪತ್ರಕರ್ತರೊಬ್ಬರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕದ ಕುರಿತು ಪ್ರಶ್ನೆ ಎತ್ತಿದ್ದರು. ಆಗ ಪ್ರೊ.ಬಿ.ಕೆ ತುಳಸಿಮಾಲರವರು ಉತ್ತರಿಸಿ ನೇಮಕಾತಿಯಲ್ಲಿ ಹಲವು ಗೊಂದಲಗಳಾಗಿವೆ, ಹಾಗಾಗಿ ನಾನು ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿದಿದ್ದೆ ಎನ್ನುತ್ತಿದ್ದಂತೆ ಪ್ರೊ.ಎಂ.ಎಸ್ ಸುಭಾಷ್‍ರವರು ಮಾತನಾಡಿ “ದಯವಿಟ್ಟು ನೀವು ಇಲ್ಲಿಂದ ಎದ್ದು ಹೋಗಿ, ನಿಮ್ಮ ಬಗ್ಗೆಯೇ ನಾನೊಂದಿಷ್ಟು ಮಾತಾಡಬೇಕಿದೆ. ನೀವಿದ್ದರೆ ಅದು ಸಾಧ್ಯವಿಲ್ಲ” ಎಂದು ಖಾರವಾಗಿ ನುಡಿದಿದ್ದಾರೆ. ನೊಂದ ತುಳಿಸಿಮಾಲರವರು ತಕ್ಷಣವೇ ಸುದ್ದಿಗೋಷ್ಠಿಯಿಂದ ಹೊರನಡೆದಿದ್ದು ಆ ಫೋಟೋ ಎಲ್ಲಾ ಕಡೆ ವೈರಲ್ ಆಗಿದೆ.
ನೇಮಕಾತಿ ಪ್ರಕ್ರಿಯೆಗೆ ನನಗೆ ಯಾವುದೇ ಆಕ್ಷೇಪವಿಲ್ಲ, ಕುಲಪತಿಗಳು ನನ್ನನ್ನು ಕುಲಸಚಿವೆಯನ್ನಾಗಿ ನೋಡುತ್ತಿಲ್ಲ. ತರಾತುರಿಯಲ್ಲಿ 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವುದು ಸರಿಯಲ್ಲ ಎಂದು ಪ್ರೊ.ಬಿ.ಕೆ ತುಳಸಿಮಾಲ ಹೇಳುತ್ತಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು, ಮೈಸೂರು ಸೇರಿ ದಕ್ಷಿಣ ಕರ್ನಾಟಕದವರಿಗೆ ಉತ್ತರ ಕರ್ನಾಟಕದ ಜನರ ಕಷ್ಟಗಳು ಅರ್ಥವಾಗುತ್ತಿಲ್ಲ. ಒಂದು ವೇಳೆ ನೇಮಕಾತಿ ಪ್ರಕ್ರಿಯೆ ನಿಂತರೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ದೊಡ್ಡ ಅನ್ಯಾಯವಾಗುತ್ತದೆ. ನನ್ನ ಅವಧಿಯಲ್ಲಿ ಈ ಕೆಲಸ ಮುಗಿದು ಹೈ.ಕ ಭಾಗದವರಿಗೆ ಉದ್ಯೋಗ ಸಿಗಬೇಕೆಂಬುದು ನನ್ನ ಆಶಯ ಎಂದು ಪ್ರೊ.ಎಂ.ಎಸ್ ಸುಭಾಷ್ ಹೇಳುತ್ತಾರೆ.
ಇನ್ನು ಈ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಸಿರಿಗೇರಿ ಪನ್ನರಾಜ್‍ರವರು 371ಜೆ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುತ್ತಾರೆ. ಹಿಂದೆ ಕುಲಪತಿಯಾಗಿದ್ದ ಮೈಸೂರು ಭಾಗದ ಮಂಜಪ್ಪ ಹೊಸಮನಿಯವರು 371ಜೆ ಮೀಸಲಾತಿಯನ್ನು ಪಾಲಿಸದೇ ಸ್ಥಳಿಯೇತರರನ್ನು ಮಾತ್ರ ನೇಮಕಾತಿ ಮಾಡಿದ್ದರು. ಆಗ ಹೈ.ಕ ದ ಅಭ್ಯರ್ಥಿಗಳು ಆಯ್ಕೆಯಾಗಿದ್ದರೆ ಇಂದಿಗೆ ಅವರಿಗೆ 7 ವರ್ಷಗಳ ಸೇವಾ ಹಿರಿತನ ಲಭಿಸುತ್ತಿತ್ತು. ಅವರು ಮಾಡಿದ ಅನ್ಯಾಯದಿಂದ 7 ವರ್ಷಗಳ ಸೇವಾ ಹಿರಿತನವನ್ನು ಕಳೆದುಕೊಂಡಿರುವ ಈ ಭಾಗದ ಅರ್ಹ ಅಭ್ಯರ್ಥಿಗಳಿಗೆ ಈಗಲಾದರೂ ನ್ಯಾಯ ಸಿಗಬೇಕು ಹಾಗಾಗಿ ನೇಮಕಾತಿ ಪ್ರಕ್ರಿಯೆ ಬೇಗ ಮುಗಿಯಬೇಕೆಂದು ಹೇಳಿದ್ದಾರೆ. ಇದೇ ವೇಳೆ ಭ್ರಷ್ಟಾಚಾರಕ್ಕೆ ಅವಕಾಶವಿರಬಾರದು ಈ ಕುರಿತು ತನಿಖೆಯೂ ನಡೆಯಬೇಕೆಂದು ಅಭಿಪ್ರಾಯಪಡುತ್ತಾರೆ.

ಮರೀಚಿಕೆಯಾದ ಗುಣಮಟ್ಟದ ಶಿಕ್ಷಣ
ಬಳ್ಳಾರಿ ನಗರದಲ್ಲಿದ್ದರೂ ಬಹುತೇಕ ವಿದ್ಯಾರ್ಥಿಗಳು ವಿ.ವಿ ಸೇರಲು ಹಿಂದೇಟು ಹಾಕುತ್ತಿದ್ದಾರೆ. ನೂರು ಎಕರೆಗಳ ವಿಶಾಲತೆಯಿದ್ದರೂ ಇದು ಒಂದು ಸಾಮಾನ್ಯ ಪದವಿ ಕಾಲೇಜಿಗಿಂತಲೂ ಕಳಪೆಯಾಗಿ ಕಾಣುತ್ತಿದೆ ಎಂಬುದು ಅವರ ಆರೋಪ. ಆರೋಪಕ್ಕೆ ಸಾಕ್ಷಿಯೆಂಬಂತೆ ವಿವಿಯಲ್ಲಿ ಅತ್ಯುತ್ತಮ ಬೋಧನೆ, ಪಾರದರ್ಶಕ ಪರೀಕ್ಷೆ, ಉತ್ತಮ ಫಲಿತಾಂಶವೂ ಕಂಡುಬರುತ್ತಿಲ್ಲ. ಮೂಲಭೂತ ಸೌಲಭ್ಯಗಳ ಕೊರತೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕೊರತೆ, ಅಸಮರ್ಪಕ ಆಡಳಿತ, ಕೆಟ್ಟು ನಿಂತ ಹಾಸ್ಟೆಲ್‍ಗಳು, ಇಚ್ಛಾಶಕ್ತಿಯ ಕೊರತೆ ಇದಕ್ಕೆ ಕಾರಣವಾಗಿದೆ. ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿಯಲ್ಲಿರುವ ಹಂಪಿ ಕನ್ನಡ ವಿ.ವಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದರೆ ಬಳ್ಳಾರಿ ಕೃಷ್ಣದೇವರಾಯ ವಿ.ವಿ ಮಾತ್ರ ಅರಾಜಕತೆಗೆ ಕುಖ್ಯಾತಿಯಾಗುತ್ತಿದೆ.

ಕಳಪೆ ಆಹಾರದ ಕೊಂಪೆಗಳಾದ ಹಾಸ್ಟೆಲ್‍ಗಳು
ಇನ್ನು ಕಾಲೇಜಿಗೆ ಸೇರಿದರೂ ಕೂಡ ಯಾವುದೇ ಕಾರಣಕ್ಕೂ ಹಾಸ್ಟೆಲ್‍ಗಳಿಗೆ ಸೇರುವುದಿಲ್ಲ ಎಂಬುದು ಎಲ್ಲಾ ವಿದ್ಯಾರ್ಥಿಗಳ ಸಾಮಾನ್ಯ ದೂರು. ಅಪರಿಮಿತ ಭ್ರಷ್ಟಾಚಾರದ ಕಾರಣಕ್ಕೆ ಇಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ. ಶುಚಿತ್ವದ ಬಗ್ಗೆ ಕೇಳಲೇಬೇಕಿಲ್ಲ. ಈ ಕಷ್ಟವನ್ನು ಸಹಿಸಿಕೊಳ್ಳಲಾಗದೇ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಸೇರಿ ನಂತರ ಬಿಟ್ಟು ಬಿಟ್ಟಿದ್ದಾರೆ. ಹಾಸ್ಟೆಲ್ ಸರಿಯಿಲ್ಲದ್ದಕ್ಕೆ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜು ತೊರೆದಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಿದ ಎಸ್‍ಎಫ್‍ಐ ವಿದ್ಯಾರ್ಥಿಯೊಬ್ಬನಿಗೆ ಪ್ರಾಧ್ಯಾಪಕರೊಬ್ಬರು ಹಲ್ಲೆ ನಡೆಸಿದ ಘಟನೆ ನಡೆದು ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಡಾ.ಮೋಹನ್ ದಾಸ್ ಎಂಬ ಪ್ರಾಧ್ಯಾಪಕರು ಎಸ್‍ಎಫ್‍ಐ ಪದಾಧಿಕಾರಿ ಬಸವರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಮತ್ತು ಹಾಸ್ಟೆಲ್‍ಗಳನ್ನು ಸಂಬಂಧಿಸಿದ ಇಲಾಖೆಗಳೆ ನಡೆಸುವಂತೆ ಆಗ್ರಹಿಸಿ ಕಳೆದ ವರ್ಷ ಸೆಪ್ಟಂಬರ್‍ನಲ್ಲಿ ವಿ.ವಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಹೋರಾಟ ನಡೆಸಿದ್ದರು.
ಒಟ್ಟಾರೆಯಾಗಿ ದಿನದಿಂದ ದಿನಕ್ಕೆ ಅಭಿವೃದ್ದಿಯತ್ತ ಸಾಗಬೇಕಿದ್ದ ವಿ.ವಿ ಕೆಲವು ವ್ಯಕ್ತಿಗಳ ನಡುವಿನ ವೈಯಕ್ತಿಕ ಇಗೋ, ಅಧಿಕಾರದ ಮದ, ಭ್ರಷ್ಟಾಚಾರ, ಸರ್ಕಾರದ ನಿರ್ಲಕ್ಷ್ಯದ ಕಾರಣಕ್ಕಾಗಿ ದಿನೇ ದಿನೇ ಕುಸಿಯುತ್ತಿದೆ. ಇದರಿಂದ ಸಾವಿರಾರು ಅಮಾಯಕ ವಿದ್ಯಾರ್ಥಿಗಳ ಭವಿಷ್ಯ ಕಮರಿಹೋಗುತ್ತಿದೆ. ಅತಿಹೆಚ್ಚು ಬಡತನವಿರುವ, ಅನಕ್ಷರತೆ ಇರುವ, ನಿರುದ್ಯೋಗವಿರುವ ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಈ ಪರಿಸ್ಥಿತಿ ಇರುವುದು ನಾಡಿನ ದುರಂತವಾಗಿದೆ. ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ವಿ.ವಿಯನ್ನು ಗುಣಮಟ್ಟದತ್ತ ತೆಗೆದುಕೊಂಡು ಹೋಗಬೇಕಿದೆ. ಅದಕ್ಕಾಗಿ ಜನಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಅಲ್ಲಿನ ವಿದ್ಯಾರ್ಥಿಗಳು ದನಿಯೆತ್ತಬೇಕಿದೆ, ದಿಟ್ಟ ಹೋರಾಟ ನಡೆಯಬೇಕಿದೆ. ಅಂತಹ ಹೋರಾಟದ ಸಂದರ್ಭ ಬೇಗ ಬರಲೆಂದು ಪತ್ರಿಕೆ ಆಶಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...