Homeಕರ್ನಾಟಕಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿ.ವಿ: ಒಳಜಗಳದ ಒಳಸುಳಿಗಳು

ಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿ.ವಿ: ಒಳಜಗಳದ ಒಳಸುಳಿಗಳು

- Advertisement -
- Advertisement -

ಮುತ್ತುರಾಜ್ |

ಶೈಕ್ಷಣಿಕವಾಗಿ ಹಿಂದುಳಿದಿರುವ ಬಳ್ಳಾರಿ ಜಿಲ್ಲೆಯಲ್ಲಿ ಹೊಸ ಶಿಕ್ಷಣ ಕ್ರಾಂತಿಯನ್ನು ಮಾಡಬೇಕೆಂಬ ಆಶಯದೊಂದಿಗೆ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವನ್ನು 2010ರಲ್ಲಿ ಆರಂಭಿಸಲಾಯಿತು. ಕೊಪ್ಪಳ ಮತ್ತು ಬಳ್ಳಾರಿ ಎರಡು ಜಿಲ್ಲೆಗಳಲ್ಲಿ ಅಧಿಕಾರ ವ್ಯಾಪ್ತಿ ಹೊಂದಿರುವ, ಬಳ್ಳಾರಿಯ ವಿನಾಯಕನಗರದಲ್ಲಿ 100 ಎಕರೆ ವಿಶಾಲ ಪ್ರದೇಶದಲ್ಲಿ ಸ್ಥಾಪಿತವಾಗಿರುವ ಈ ವಿ.ವಿಯು ಶುರುವಾಗಿ 9 ವರ್ಷ ಆದರೂ ತನ್ನ ಮಹತ್ವಾಕಾಂಕ್ಷೆಯನ್ನು ಈಡೇರಿಸಲು ಸಫಲವಾಗಿಲ್ಲ. ಅಷ್ಟರಲ್ಲಾಗಲೇ ವಿ.ವಿಯು ನೇಮಕಾತಿ ಗೊಂದಲದಿಂದ ನಲುಗುತ್ತಿದ್ದು ಇಲ್ಲಿನ ಒಳಜಗಳ ಬೀದಿಗೆ ಬಂದುನಿಂತಿದೆ. ಗುಣಮಟ್ಟದ ಉನ್ನತ ಶಿಕ್ಷಣದ ಕನಸೊತ್ತು ಬರುವ ವಿದ್ಯಾರ್ಥಿಗಳ ಪಾಲಿಗೆ ಇದು ನಿಜವಾಗಲೂ ಸಮಗ್ರ ವಿ.ವಿ ಅನಿಸಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.
ಕಳೆದ ಹದಿನೈದು ದಿನಗಳಿಂದ ಕೃಷ್ಣದೇವರಾಯ ವಿ.ವಿಯಲ್ಲಿ ನಡೆಯುವ ಜಗಳಗಳು ದಿನಪತ್ರಿಕೆ, ಟಿವಿಗಳಿಗೆ ಆಹಾರವಾಗತೊಡಗಿವೆ. ಕುಲಪತಿ ಪ್ರೊ.ಎಂ.ಎಸ್ ಸುಭಾಷ್‍ರವರು ಕುಲಸಚಿವರಾದ ಪ್ರೊ.ಬಿ.ಕೆ ತುಳಸಿಮಾಲರವರನ್ನು ಪತ್ರಿಕಾಗೋಷ್ಠಿಯಿಂದ ಎದ್ದು ನಡಿಯಿರಿ ಎಂದದ್ದು ಇನ್ನು ಚರ್ಚೆಯಾಗುತ್ತಲೆ ಇದೆ. ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯ ನೇಮಕಾತಿ ವಿಚಾರದಲ್ಲಿ ದೊಡ್ಡ ಮಾರಾಮಾರಿಯೆ ನಡೆಯುತ್ತಿದೆ.

ಏನಿದು ವಿವಾದ?
ವಿ.ವಿಯು 2012 ರಲ್ಲಿ 134 ಬೋಧಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಮುಂದಾಗಿತ್ತು. 80% ಹೈದರಾಬಾದ್ ಕರ್ನಾಟಕದವರಿಗೆ ಮತ್ತು ಉಳಿದ ಹುದ್ದೆಗಳು ಜನರಲ್ ಮೆರಿಟ್ ಎಂದು ನಿರ್ಧರಿಸಲಾಗಿತ್ತು. ಶೇ.20 ಜನರಲ್ ಹುದ್ದೆಗಳು ನೇಮಕಗೊಂಡವೇ ಹೊರತು ಹೈ.ಕ ಭಾಗದವರಿಗೆ ದಕ್ಕಬೇಕಾಗಿದ್ದ 80% ಹುದ್ದೆಗಳು ಹಾಗೆ ಉಳಿದವು. ಹೈ.ಕ ದವರಿಗೆ ದಕ್ಕಬೇಕಿದ್ದ ಜೊತೆಗೆ 45 ಬೋಧಕೇತರ ಸಿಬ್ಬಂದಿ ನೇಮಕಾತಿಯೂ ನೆನೆಗುದಿಗೆ ಬಿದ್ದಿತ್ತು. ಪ್ರಸ್ತುತ ಕುಲಪತಿಗಳು ಈ ಹುದ್ದೆಗಳ ಭರ್ತಿಗೆ ಮುಂದಾಗಿದ್ದು 2018ರಲ್ಲೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದರು. ಆಗ ಮಧ್ಯ ಪ್ರವೇಶಿಸಿದ ಕೆಲವರು ಕುಲಪತಿಗಳ ಹುದ್ದೆ ಇನ್ನೇನು ಮುಗಿಯಲಿದೆ, ಚುನಾವಣೆ ಹತ್ತಿರ ಬಂದಿರುವಾಗ ನೇಮಕಾತಿ ನಡೆಯಬಾರದೆಂದು ಕೊಕ್ಕು ಹಾಕಿದರು.
ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದ ಕುಲಪತಿಗಳು ಸರ್ಕಾರಕ್ಕೆ ಪತ್ರ ಬರೆದು 371ಜೆ ಮೀಸಲಾತಿಗೆ ಅನ್ಯಾಯವಾಗುತ್ತಿದೆ, ಹಾಗಾಗಿ ತುರ್ತು ನೇಮಕಾತಿ ನಡೆಯಬೇಕೆಂದು ಕೋರಿದರು. ಇದಕ್ಕೆ ನೇಮಕಾತಿ ಪ್ರಕ್ರಿಯೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಸಿರು ನಿಶಾನೆ ತೋರಿದ್ದರು. ಅಷ್ಟು ಮಾತ್ರವಲ್ಲ ಈ ವಿಷಯಕ್ಕೆ ಚುನಾವಣಾ ಆಯೋಗ ಸಲ್ಲಿಸಿದ್ದ ನೀತಿಸಂಹಿತೆ ಉಲ್ಲಂಘನೆಯ ಅರ್ಜಿಯನ್ನು ಹೈ ಕೋರ್ಟ್ ವಜಾ ಮಾಡಿ ನೇಮಕಾತಿಗೆ ಚುನಾವಣಾ ನೀತಿಸಂಹಿತೆ ಅಡ್ಡಿ ಬರುವುದಿಲ್ಲ ಎಂದು ತೀರ್ಪು ನೀಡಿತ್ತು. ಇದರಿಂದ ಬೋಧಕ ಸಿಬ್ಬಂದಿಯ ನೇಮಕಾತಿಯು ನಡೆಯಿತು. ಈಗ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯೂ ಚಾಲನೆಯಲ್ಲಿದ್ದು ಇನ್ನೊಂದು ವಾರದಲ್ಲಿ ಮುಗಿಯಲಿದೆ. ತಾನು ಕುಲಪತಿ ಹುದ್ದೆಯಿಂದ ನಿರ್ಗಮಿಸುವುದರೊಳಗೆ ನೇಮಕಾತಿ ಮುಗಿಸಲೇಬೇಕೆಂದು ಪ್ರೊ.ಸುಭಾಷ್‍ರವರು ಹಠತೊಟ್ಟರೆ, ಕುಲಸಚಿವೆ ಪ್ರೊ.ಬಿ.ಕೆ ತುಳಸಿಮಾಲರವರು ನಿಯಮಾವಳಿಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಆರೋಪ ಮಾಡಿದರು. ಜೊತೆಗೆ ತಾನು ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿಯುವುದಾಗಿ ಘೋಷಿಸಿದ್ದರು. ಇನ್ನೊಂದಿಷ್ಟು ಜನ ನೇಮಕಾತಿಯಲ್ಲಿ ಭ್ರಷ್ಟಾಚಾರವೂ ನಡೆಯುತ್ತಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಟಿಯೆಂಬ ಡ್ರಾಮ
ವಿ.ವಿಯ 7 ಘಟಿಕೋತ್ಸವದ ನಿಮಿತ್ತ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು. ಕುಲಪತಿ ಪ್ರೊ.ಎಂ.ಎಸ್ ಸುಭಾಷ್ ಮತ್ತು ಕುಲಸಚಿವೆ ಪ್ರೊ.ಬಿ.ಕೆ ತುಳಸಿಮಾಲ ಉಪಸ್ಥಿತರಿದ್ದರು. ಪತ್ರಕರ್ತರೊಬ್ಬರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕದ ಕುರಿತು ಪ್ರಶ್ನೆ ಎತ್ತಿದ್ದರು. ಆಗ ಪ್ರೊ.ಬಿ.ಕೆ ತುಳಸಿಮಾಲರವರು ಉತ್ತರಿಸಿ ನೇಮಕಾತಿಯಲ್ಲಿ ಹಲವು ಗೊಂದಲಗಳಾಗಿವೆ, ಹಾಗಾಗಿ ನಾನು ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿದಿದ್ದೆ ಎನ್ನುತ್ತಿದ್ದಂತೆ ಪ್ರೊ.ಎಂ.ಎಸ್ ಸುಭಾಷ್‍ರವರು ಮಾತನಾಡಿ “ದಯವಿಟ್ಟು ನೀವು ಇಲ್ಲಿಂದ ಎದ್ದು ಹೋಗಿ, ನಿಮ್ಮ ಬಗ್ಗೆಯೇ ನಾನೊಂದಿಷ್ಟು ಮಾತಾಡಬೇಕಿದೆ. ನೀವಿದ್ದರೆ ಅದು ಸಾಧ್ಯವಿಲ್ಲ” ಎಂದು ಖಾರವಾಗಿ ನುಡಿದಿದ್ದಾರೆ. ನೊಂದ ತುಳಿಸಿಮಾಲರವರು ತಕ್ಷಣವೇ ಸುದ್ದಿಗೋಷ್ಠಿಯಿಂದ ಹೊರನಡೆದಿದ್ದು ಆ ಫೋಟೋ ಎಲ್ಲಾ ಕಡೆ ವೈರಲ್ ಆಗಿದೆ.
ನೇಮಕಾತಿ ಪ್ರಕ್ರಿಯೆಗೆ ನನಗೆ ಯಾವುದೇ ಆಕ್ಷೇಪವಿಲ್ಲ, ಕುಲಪತಿಗಳು ನನ್ನನ್ನು ಕುಲಸಚಿವೆಯನ್ನಾಗಿ ನೋಡುತ್ತಿಲ್ಲ. ತರಾತುರಿಯಲ್ಲಿ 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವುದು ಸರಿಯಲ್ಲ ಎಂದು ಪ್ರೊ.ಬಿ.ಕೆ ತುಳಸಿಮಾಲ ಹೇಳುತ್ತಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು, ಮೈಸೂರು ಸೇರಿ ದಕ್ಷಿಣ ಕರ್ನಾಟಕದವರಿಗೆ ಉತ್ತರ ಕರ್ನಾಟಕದ ಜನರ ಕಷ್ಟಗಳು ಅರ್ಥವಾಗುತ್ತಿಲ್ಲ. ಒಂದು ವೇಳೆ ನೇಮಕಾತಿ ಪ್ರಕ್ರಿಯೆ ನಿಂತರೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ದೊಡ್ಡ ಅನ್ಯಾಯವಾಗುತ್ತದೆ. ನನ್ನ ಅವಧಿಯಲ್ಲಿ ಈ ಕೆಲಸ ಮುಗಿದು ಹೈ.ಕ ಭಾಗದವರಿಗೆ ಉದ್ಯೋಗ ಸಿಗಬೇಕೆಂಬುದು ನನ್ನ ಆಶಯ ಎಂದು ಪ್ರೊ.ಎಂ.ಎಸ್ ಸುಭಾಷ್ ಹೇಳುತ್ತಾರೆ.
ಇನ್ನು ಈ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಸಿರಿಗೇರಿ ಪನ್ನರಾಜ್‍ರವರು 371ಜೆ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುತ್ತಾರೆ. ಹಿಂದೆ ಕುಲಪತಿಯಾಗಿದ್ದ ಮೈಸೂರು ಭಾಗದ ಮಂಜಪ್ಪ ಹೊಸಮನಿಯವರು 371ಜೆ ಮೀಸಲಾತಿಯನ್ನು ಪಾಲಿಸದೇ ಸ್ಥಳಿಯೇತರರನ್ನು ಮಾತ್ರ ನೇಮಕಾತಿ ಮಾಡಿದ್ದರು. ಆಗ ಹೈ.ಕ ದ ಅಭ್ಯರ್ಥಿಗಳು ಆಯ್ಕೆಯಾಗಿದ್ದರೆ ಇಂದಿಗೆ ಅವರಿಗೆ 7 ವರ್ಷಗಳ ಸೇವಾ ಹಿರಿತನ ಲಭಿಸುತ್ತಿತ್ತು. ಅವರು ಮಾಡಿದ ಅನ್ಯಾಯದಿಂದ 7 ವರ್ಷಗಳ ಸೇವಾ ಹಿರಿತನವನ್ನು ಕಳೆದುಕೊಂಡಿರುವ ಈ ಭಾಗದ ಅರ್ಹ ಅಭ್ಯರ್ಥಿಗಳಿಗೆ ಈಗಲಾದರೂ ನ್ಯಾಯ ಸಿಗಬೇಕು ಹಾಗಾಗಿ ನೇಮಕಾತಿ ಪ್ರಕ್ರಿಯೆ ಬೇಗ ಮುಗಿಯಬೇಕೆಂದು ಹೇಳಿದ್ದಾರೆ. ಇದೇ ವೇಳೆ ಭ್ರಷ್ಟಾಚಾರಕ್ಕೆ ಅವಕಾಶವಿರಬಾರದು ಈ ಕುರಿತು ತನಿಖೆಯೂ ನಡೆಯಬೇಕೆಂದು ಅಭಿಪ್ರಾಯಪಡುತ್ತಾರೆ.

ಮರೀಚಿಕೆಯಾದ ಗುಣಮಟ್ಟದ ಶಿಕ್ಷಣ
ಬಳ್ಳಾರಿ ನಗರದಲ್ಲಿದ್ದರೂ ಬಹುತೇಕ ವಿದ್ಯಾರ್ಥಿಗಳು ವಿ.ವಿ ಸೇರಲು ಹಿಂದೇಟು ಹಾಕುತ್ತಿದ್ದಾರೆ. ನೂರು ಎಕರೆಗಳ ವಿಶಾಲತೆಯಿದ್ದರೂ ಇದು ಒಂದು ಸಾಮಾನ್ಯ ಪದವಿ ಕಾಲೇಜಿಗಿಂತಲೂ ಕಳಪೆಯಾಗಿ ಕಾಣುತ್ತಿದೆ ಎಂಬುದು ಅವರ ಆರೋಪ. ಆರೋಪಕ್ಕೆ ಸಾಕ್ಷಿಯೆಂಬಂತೆ ವಿವಿಯಲ್ಲಿ ಅತ್ಯುತ್ತಮ ಬೋಧನೆ, ಪಾರದರ್ಶಕ ಪರೀಕ್ಷೆ, ಉತ್ತಮ ಫಲಿತಾಂಶವೂ ಕಂಡುಬರುತ್ತಿಲ್ಲ. ಮೂಲಭೂತ ಸೌಲಭ್ಯಗಳ ಕೊರತೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕೊರತೆ, ಅಸಮರ್ಪಕ ಆಡಳಿತ, ಕೆಟ್ಟು ನಿಂತ ಹಾಸ್ಟೆಲ್‍ಗಳು, ಇಚ್ಛಾಶಕ್ತಿಯ ಕೊರತೆ ಇದಕ್ಕೆ ಕಾರಣವಾಗಿದೆ. ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿಯಲ್ಲಿರುವ ಹಂಪಿ ಕನ್ನಡ ವಿ.ವಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದರೆ ಬಳ್ಳಾರಿ ಕೃಷ್ಣದೇವರಾಯ ವಿ.ವಿ ಮಾತ್ರ ಅರಾಜಕತೆಗೆ ಕುಖ್ಯಾತಿಯಾಗುತ್ತಿದೆ.

ಕಳಪೆ ಆಹಾರದ ಕೊಂಪೆಗಳಾದ ಹಾಸ್ಟೆಲ್‍ಗಳು
ಇನ್ನು ಕಾಲೇಜಿಗೆ ಸೇರಿದರೂ ಕೂಡ ಯಾವುದೇ ಕಾರಣಕ್ಕೂ ಹಾಸ್ಟೆಲ್‍ಗಳಿಗೆ ಸೇರುವುದಿಲ್ಲ ಎಂಬುದು ಎಲ್ಲಾ ವಿದ್ಯಾರ್ಥಿಗಳ ಸಾಮಾನ್ಯ ದೂರು. ಅಪರಿಮಿತ ಭ್ರಷ್ಟಾಚಾರದ ಕಾರಣಕ್ಕೆ ಇಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ. ಶುಚಿತ್ವದ ಬಗ್ಗೆ ಕೇಳಲೇಬೇಕಿಲ್ಲ. ಈ ಕಷ್ಟವನ್ನು ಸಹಿಸಿಕೊಳ್ಳಲಾಗದೇ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಸೇರಿ ನಂತರ ಬಿಟ್ಟು ಬಿಟ್ಟಿದ್ದಾರೆ. ಹಾಸ್ಟೆಲ್ ಸರಿಯಿಲ್ಲದ್ದಕ್ಕೆ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜು ತೊರೆದಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಿದ ಎಸ್‍ಎಫ್‍ಐ ವಿದ್ಯಾರ್ಥಿಯೊಬ್ಬನಿಗೆ ಪ್ರಾಧ್ಯಾಪಕರೊಬ್ಬರು ಹಲ್ಲೆ ನಡೆಸಿದ ಘಟನೆ ನಡೆದು ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಡಾ.ಮೋಹನ್ ದಾಸ್ ಎಂಬ ಪ್ರಾಧ್ಯಾಪಕರು ಎಸ್‍ಎಫ್‍ಐ ಪದಾಧಿಕಾರಿ ಬಸವರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಮತ್ತು ಹಾಸ್ಟೆಲ್‍ಗಳನ್ನು ಸಂಬಂಧಿಸಿದ ಇಲಾಖೆಗಳೆ ನಡೆಸುವಂತೆ ಆಗ್ರಹಿಸಿ ಕಳೆದ ವರ್ಷ ಸೆಪ್ಟಂಬರ್‍ನಲ್ಲಿ ವಿ.ವಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಹೋರಾಟ ನಡೆಸಿದ್ದರು.
ಒಟ್ಟಾರೆಯಾಗಿ ದಿನದಿಂದ ದಿನಕ್ಕೆ ಅಭಿವೃದ್ದಿಯತ್ತ ಸಾಗಬೇಕಿದ್ದ ವಿ.ವಿ ಕೆಲವು ವ್ಯಕ್ತಿಗಳ ನಡುವಿನ ವೈಯಕ್ತಿಕ ಇಗೋ, ಅಧಿಕಾರದ ಮದ, ಭ್ರಷ್ಟಾಚಾರ, ಸರ್ಕಾರದ ನಿರ್ಲಕ್ಷ್ಯದ ಕಾರಣಕ್ಕಾಗಿ ದಿನೇ ದಿನೇ ಕುಸಿಯುತ್ತಿದೆ. ಇದರಿಂದ ಸಾವಿರಾರು ಅಮಾಯಕ ವಿದ್ಯಾರ್ಥಿಗಳ ಭವಿಷ್ಯ ಕಮರಿಹೋಗುತ್ತಿದೆ. ಅತಿಹೆಚ್ಚು ಬಡತನವಿರುವ, ಅನಕ್ಷರತೆ ಇರುವ, ನಿರುದ್ಯೋಗವಿರುವ ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಈ ಪರಿಸ್ಥಿತಿ ಇರುವುದು ನಾಡಿನ ದುರಂತವಾಗಿದೆ. ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ವಿ.ವಿಯನ್ನು ಗುಣಮಟ್ಟದತ್ತ ತೆಗೆದುಕೊಂಡು ಹೋಗಬೇಕಿದೆ. ಅದಕ್ಕಾಗಿ ಜನಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಅಲ್ಲಿನ ವಿದ್ಯಾರ್ಥಿಗಳು ದನಿಯೆತ್ತಬೇಕಿದೆ, ದಿಟ್ಟ ಹೋರಾಟ ನಡೆಯಬೇಕಿದೆ. ಅಂತಹ ಹೋರಾಟದ ಸಂದರ್ಭ ಬೇಗ ಬರಲೆಂದು ಪತ್ರಿಕೆ ಆಶಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...