Homeಕರ್ನಾಟಕರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

- Advertisement -
- Advertisement -

ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಬುಧವಾರದಂದು ಮಂಗಳೂರಿನಲ್ಲಿ ಮಾತನಾಡಿದ್ದ ಸಿಎಂ ನೈತಿಕ ಪೊಲೀಸ್‌ ಗಿರಿಯನ್ನು ಸಮರ್ಥಿಸಿಕೊಂಡಿದ್ದರು. “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯ ಹೇಳಿಕೆಯನ್ನು ವಿರೋಧಿಸಿರುವ ಸಿದ್ದರಾಮಯ್ಯ, “ಮುಖ್ಯಮಂತ್ರಿ ಬೊಮ್ಮಾಯಿಯವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ” ಎಂದು ಹೇಳಿದ್ದಾರೆ.

‘‘ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವವರು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ಆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುವುದೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

“ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ,ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಮುಖ್ಯಮಂತ್ರಿಗಳೇ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“ಆ್ಯಕ್ಷನ್‌ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ.? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ?” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಆರೋಗ್ಯ ಸಚಿವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು. ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ.
ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿದ್ದರಾಮಯ್ಯ ನವರ ಸರ್ಕಾರವು ಇದ್ದಾಗ ,ಹಿಂಧೂ ಕಾರ್ಯಕರ್ತರ ಕೊಲೆ,ನಿಷ್ಠಾವಂತ ಅಧಿಕಾರಿಗಳ ಮಾರಣ ಹೋಮ ,ಲೋಕಾಯುಕ್ತದ ನಿರ್ನಾಮ ,ಜಾರ್ಜ್ ,ಡಿಕೆಶಿ ಅವರ ಭ್ರಷ್ಟಾಚಾರ ,ಸಿದ್ದರಾಮಯ್ಯ ರ ವಾಚ್ ಹಗರಣ ಹೀಗೆ ಹನುಮಂತನ ಬಾಲದ ತರ ದುರಾಡಳಿತ ದ ಪಟ್ಟಿಯೇ ಇದೆ . ಇಂಥವರಿಗೆ ಬಿಜೆಪಿಯ ಬಗ್ಗೆ ಮಾತಾಡೋ ಯೋಗ್ಯತೆ ಇದಿಯಾ ಸಿದ್ದರಾಮಯ್ಯ ನವರೇ…..

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...