Homeಮುಖಪುಟ200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

- Advertisement -
- Advertisement -

ಕಾನ್ ಕಲಾವಿದರಾದ (con artists) ಸುಕೇಶ್ ಚಂದ್ರಶೇಖರ್ ಮತ್ತು ಲೀನಾ ಪೌಲ್ ವಿರುದ್ಧದ 200 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಫೋರ್ಟಿಸ್ ಹೆಲ್ತ್‌ಕೇರ್ ( Fortis Healthcare) ಪ್ರಮೋಟರ್‍ಸ್ ಶಿವಿಂದರ್ ಸಿಂಗ್ ಅವರ ಕುಟುಂಬವನ್ನು ಸುಮಾರು 200 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಚಂದ್ರಶೇಖರ್ ಮತ್ತು ಪಾಲ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಸುಕೇಶ್ ಚಂದ್ರಶೇಖರ್ ಮತ್ತು ಲೀನಾ ಪೌಲ್ ಅವರ ಮೇಲೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಸುಲಿಗೆ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ಇದಾದ ಬಳಿಕ ಬಾಲಿವುಡ್ ನಟಿ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯ  ಸಮನ್ಸ್ ನೀಡಿದೆ. ಆರೋಪಿಗಳ ಜೊತೆಗಿನ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಫತೇಹಿಗೆ ಫತೇಹಿ ಅವರಿಗೆ ಸಮನ್ಸ್ ನೀಡಿಲಾಗಿದೆ ಎಂದು ಏಜೆನ್ಸಿ ಮೂಲಗಳು ಹೇಳಿವೆ.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

 

ಶಿವಿಂದರ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರ ದೂರಿನ ಆಧಾರದ ಮೇಲೆ 200 ಕೋಟಿ ರೂಪಾಯಿ ವಂಚನೆ ಪ್ರಕರಣ ದಾಖಲಾಗಿದೆ.

ಘಟನೆಯ ಸಮಯದಲ್ಲಿ, 21 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಚಂದ್ರಶೇಖರ್ ದೆಹಲಿಯ ರೋಹಿಣಿ ಜೈಲಿನಲ್ಲಿ ಬಂಧಿಯಾಗಿದ್ದರು. ಬಂಧನದ ಬಳಿಕವೂ ಜೈಲಿನಿಂದ ಸುಲಿಗೆ ದಂಧೆಯನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಚಂದ್ರಶೇಖರ್ ಬಂಧನವನ್ನು 11 ದಿನಗಳು ಮತ್ತು ಲೀನಾ ಪೌಲ್ ಅವರ ಬಂಧನವನ್ನು 16 ದಿನಗಳವರೆಗೆ ವಿಸ್ತರಿಸಲಾಗಿದೆ.

“ಸುಕೇಶ್ ಚಂದ್ರಶೇಖರ್ ಈ ವಂಚನೆಯ ಸೂತ್ರಧಾರ. ಅವರು 17 ನೇ ವಯಸ್ಸಿನಿಂದಲೂ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಸ್ತುತ ಅವರನ್ನು ರೋಹಿಣಿ ಜೈಲಿನಲ್ಲಿ ಇರಿಸಲಾಗಿದೆ” ಎಂದು ಜಾರಿ ನಿರ್ದೇಶನಾಲಯ ತಿಳಿಸಿತ್ತು.

ಆಗಸ್ಟ್ 24 ರಂದು, ತನಿಖಾ ಸಂಸ್ಥೆ ಚಂದ್ರಶೇಖರ್ ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಬಂಗಲೆಯಿಂದ 82.5 ಲಕ್ಷ ನಗದು ಮತ್ತು ಒಂದು ಡಜನ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಾಕ್ಷಿಯಾಗಿ 36 ವರ್ಷದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆಗಸ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....