Homeಮುಖಪುಟವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

ವೈದ್ಯವಿಜ್ಞಾನ ನೊಬೆಲ್ 2021; ನಮ್ಮ ಸುತ್ತಲಿನ ಜಗತ್ತನ್ನು ನಾವು ಹೇಗೆ ಗ್ರಹಿಸುತ್ತೇವೆ?

- Advertisement -
- Advertisement -

ಈ ವರ್ಷದ ಶರೀರಶಾಸ್ತ್ರ ಅಥವಾ ವೈದ್ಯವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪಾರಿತೋಷಕವನ್ನು ತಾಪಮಾನ ಮತ್ತು ಸ್ಪರ್ಶದ ಗ್ರಾಹಕಗಳ (ರಿಸೆಪ್ಟರ್‌ಗಳ) ಸಂಶೋಧನೆಗಾಗಿ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೋಷಿಯನ್ ಅವರುಗಳಿಗೆ ನೀಡಲಾಗಿದೆ.

ನಾವು ಶಾಖ, ತಂಪು ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತೇವೆ ಎಂಬುದು ಮನುಷ್ಯಜಗತ್ತಿನ ಅತಿದೊಡ್ಡ ವಿಸ್ಮಯಗಳಲ್ಲೊಂದು ಮತ್ತು ನಮ್ಮ ಉಳಿವಿಗೆ ಹಾಗೂ ನಮ್ಮ ಸುತ್ತಲಿನ ಪ್ರಪಂಚದೊಂದಿಗೆ ನಾವು ಹೇಗೆ ವ್ಯವಹರಿಸುತ್ತೇವೆಂಬುದಕ್ಕೆ ಅತಿಮುಖ್ಯ. ನಮ್ಮ ನಿತ್ಯದ ಬದುಕಿನಲ್ಲಿ ಈ ಅರಿವನ್ನು ನಾವು ಸಹಜವೆಂದು ಭಾವಿಸುತ್ತೇವೆ. ಆದರೆ, ತಾಪಮಾನ ಮತ್ತು ಒತ್ತಡವನ್ನು ಅರಿಯಲು ಸಾಧ್ಯವಾಗುವಂತೆ ನರಪ್ರಚೋದನೆಗಳು (ನರ್ವ್ ಇಂಪಲ್ಸಸ್) ಹೊರಡುವುದು ಹೇಗೆ? ಈ ಪ್ರಶ್ನೆಯನ್ನು ಈ ಬಾರಿಯ ನೊಬೆಲ್ ಪುರಸ್ಕೃತರು ಬಗೆಹರಿಸಿದ್ದಾರೆ.

ಕಣ್ಣುಗಳು ಹೇಗೆ ಬೆಳಕನ್ನು ಗುರುತಿಸುತ್ತವೆ, ಶಬ್ದತರಂಗಗಳು ನಮ್ಮ ಒಳಗಿವಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಹಾಗೂ ಹೇಗೆ ವಿವಿಧ ರಾಸಾಯನಿಕ ಸಂಯೋಜನೆಗಳು ನಮ್ಮ ಮೂಗು ಮತ್ತು ಬಾಯಿಯೊಳಗಿನ ರಿಸೆಪ್ಟರ್‌ಗಳೊಂದಿಗೆ ಪ್ರವರ್ತಿಸಿ ವಾಸನೆ ಹಾಗೂ ರುಚಿಯನ್ನು ಹುಟ್ಟಿಸುತ್ತವೆಂಬ ಪ್ರಶ್ನೆಗಳು ಶತಮಾನಗಳ ಕಾಲ ಮನುಷ್ಯರ ಮನಸ್ಸನ್ನು ದಿಗ್ಭ್ರಮೆಗೊಳಿಸಿವೆ.

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯುವ, ಗಾಳಿಯ ಬೀಸು ಮತ್ತು ಸೂರ್ಯನ ತಾಪದ ಸಂವೇದನೆಗಳನ್ನು ನಮ್ಮ ದೇಹ ಹೇಗೆ ಗ್ರಹಿಸುತ್ತದೆ; ಈ ಬದಲಾಗುವ ಪ್ರಚೋದಕಗಳು ಹಾಗೂ ತಾಪಮಾನ, ಸ್ಪರ್ಶ ಮತ್ತು ಚಲನೆಯ ಪರಿಣಾಮಗಳಿಗೆ ದೇಹ ಹೊಂದಿಕೊಳ್ಳುತ್ತದೆ ಎಂಬ ಪ್ರಶ್ನೆಗಳು ಕೂಡ.

ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಪೋಷಿಯನ್ ಅವರುಗಳ ಸಂಶೋಧನೆಗಿಂತ ಮೊದಲು, ನರವ್ಯವಸ್ಥೆ ಹೇಗೆ ಸುತ್ತಲಿನ ಪರಿಸರದ ಮತ್ತು ರಾಸಾಯನಿಕ ಪ್ರಚೋದಕಗಳನ್ನು ಗ್ರಹಿಸುತ್ತದೆ ಮತ್ತು ಅರ್ಥೈಸುತ್ತದೆ ಎಂಬುದರ ಕುರಿತ ನಮ್ಮ ತಿಳಿವಳಿಕೆಯಲ್ಲಿ ಒಂದು ಬಗೆಹರಿಯದ ಪ್ರಶ್ನೆ ಇತ್ತು; ತಾಪಮಾನ ಮತ್ತು ಯಾಂತ್ರಿಕ ಪ್ರಚೋದಕಗಳು ವಿದ್ಯುತ್ ಸಂದೇಶಗಳಾಗಿ ನಮ್ಮ ನರವ್ಯವಸ್ಥೆಯಲ್ಲಿ ಹೇಗೆ ಪರಿವರ್ತಿತವಾಗುತ್ತವೆ ಎಂಬುದು ತಿಳಿಯದ ಪ್ರಶ್ನೆಯಾಗಿ ಉಳಿದಿತ್ತು.

1990ರಲ್ಲಿ ಡೇವಿಡ್ ಜ್ಯೂಲಿಯಸ್ ಅವರು, ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಕ್ಯಾಲಿಫೊರ್ನಿಯಾ ವಿಶ್ವವಿದ್ಯಾಲಯದಲ್ಲಿ, ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕ ಸಂಯುಕ್ತವು ಉರಿಯುವ ಅನುಭವವನ್ನು ಯಾಕೆ ಉಂಟುಮಾಡುತ್ತದೆಂಬುದರ ಮೇಲೆ ಕೆಲಸ ಮಾಡುತ್ತಿದ್ದರು. ಕ್ಯಾಪ್ಸೈಸಿನ್ ನರಕೋಶಗಳನ್ನು ಸಕ್ರಿಯಗೊಳಿಸುತ್ತದೆಂಬುದು ಗೊತ್ತಿದ್ದ ಸಂಗತಿಯಾಗಿತ್ತು; ಆದರೆ ಆ ಕಾರ್ಯವಿಧಾನವೇನೆಂಬುದು ಒಗಟಾಗಿತ್ತು.

ಜ್ಯೂಲಿಯಸ್ ಮತ್ತು ಅವರ ಜೊತೆಗಾರರು, ನೋವು, ಉಷ್ಣಾಂಶ ಮತ್ತು ಸ್ಪರ್ಶಕ್ಕೆ ಪ್ರತಿಕ್ರಿಯಿಸುವ ನರಕೋಶಗಳನ್ನು ಪ್ರತಿನಿಧಿಸುವ ಡಿಎನ್‌ಎ ತುಣುಕುಗಳ ಒಂದು ಸಂಗ್ರಹವನ್ನು ಸಿದ್ಧಪಡಿಸಿದರು. ಕಠಿಣವಾದ ಸಂಶೋಧನೆಯ ನಂತರ, ಜೀವಕೋಶಗಳನ್ನು ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲಗೊಳಿಸುವ ಒಂದು ವಂಶವಾಹಿಯನ್ನು (ಜೀನ್) ಗುರುತಿಸುವುದು ಸಾಧ್ಯವಾಯಿತು. ಹೀಗೆ, ಕ್ಯಾಪ್ಸೈಸಿನ್‌ಗೆ ಸಂವೇದನಾಶೀಲವಾದ ವಂಶವಾಹಿ ದೊರಕಿತು! ಈ ವಂಶವಾಹಿಯ ಪ್ರೊಟೀನ್‌ನ್ನು ಟಿಆರ್‌ಪಿವಿ1 ಎಂದು ಕರೆಯಲಾಯಿತು. ಈ ರಿಸೆಪ್ಟರ್ ಉಷ್ಣಾಂಶವನ್ನು ಗ್ರಹಿಸುವ ರಿಸೆಪ್ಟರ್ ಆಗಿತ್ತು ಮತ್ತು ನೋವುಂಟುಮಾಡಬಲ್ಲವೆಂದು ಹೇಳಬಹುದಾದ ಉಷ್ಣಾಂಶಗಳಲ್ಲಿ ಇದು ಸಕ್ರಿಯಗೊಳ್ಳುತ್ತಿತ್ತು.

ಈ ಸಂಶೋಧನೆಯು ಅತಿ ಮಹತ್ವದ್ದಾಗಿತ್ತು. ಇದು, ತಣ್ಣಗಿರುವುದನ್ನು ಗ್ರಹಿಸುವ ಇನ್ನೂ ಅನೇಕ ತಾಪಮಾನದ ರಿಸೆಪ್ಟರ್‌ಗಳ ಶೋಧಕ್ಕೆ ದಾರಿಮಾಡಿಕೊಟ್ಟಿತು. ಅನೇಕ ಪ್ರಯೋಗಾಲಯಗಳು, ಜೀವವೈಜ್ಞಾನಿಕವಾಗಿ ಮಾರ್ಪಡಿಸಲ್ಪಟ್ಟು ಈ ಹೊಸದಾಗಿ ಕಂಡುಹಿಡಿಯಲಾದ ವಂಶವಾಹಿಗಳನ್ನು ಹೊಂದಿಲ್ಲದ ಇಲಿಗಳ ಮೇಲೆ, ಸಂಶೋಧಿಸಲ್ಪಟ್ಟಿದ್ದ ಗ್ರಾಹಕಗಳು ತಾಪಮಾನ ಸಂವೇದನೆಯ ಮೇಲೆ ಬೀರುವ ಪರಿಣಾಮವೇನು ಎಂಬುದರ ಕುರಿತ ಪ್ರಯೋಗಗಳನ್ನು ಆರಂಭಿಸಿದವು. ಡೇವಿಡ್ ಜ್ಯೂಲಿಯಸ್ ಅವರು ಟಿಆರ್‌ಪಿವಿ1ನ್ನು ಕಂಡುಹಿಡಿದ ಸಂಶೋಧನೆಯು, ತಾಪಮಾನದ ವ್ಯತ್ಯಾಸಗಳು ಹೇಗೆ ನರ ವ್ಯವಸ್ಥೆಯಲ್ಲಿ ವಿದ್ಯುತ್ ಸಂದೇಶಗಳನ್ನು ಹುಟ್ಟುಹಾಕಬಲ್ಲವು ಎಂಬ ಕುರಿತು ಪಥಪ್ರವರ್ತಕವಾದುದಾಗಿತ್ತು.

ಅಮೆರಿಕದ ಕ್ಯಾಲಿಫೋರ್ನಿಯಾದ ಲಹೋಯಾದಲ್ಲಿರುವ ಸ್ಕ್ರಿಪ್ಸ್ ರಿಸರ್ಚ್ ಸಂಸ್ಥೆಯಲ್ಲಿದ್ದ ಆರ್ಡೆಮ್ ಪಟಪೋಷಿಯನ್ ಅವರು, ಯಾಂತ್ರಿಕ ಪ್ರಚೋದಕಗಳಿಂದ ಸಕ್ರಿಯಗೊಳ್ಳುವ ಅಸ್ಪಷ್ಟ ರಿಸೆಪ್ಟರ್‌ಗಳನ್ನು ಕಂಡುಹಿಡಿಯಲು ಬಯಸಿದರು.

ಒಂದು ಮೈಕ್ರೋಪಿಪೆಟ್ (ದ್ರವಪದಾರ್ಥಗಳನ್ನು ಅಳೆಯುವುದಕ್ಕೆ ಬಳಸುವ ಒಂದು ಅತಿಸಣ್ಣ ಕೊಳವೆ)ನಿಂದ ತಟ್ಟಿದಾಗ ಅಳೆಯಲು ಸಾಧ್ಯವಿರುವಷ್ಟು ಪ್ರಮಾಣದ ವಿದ್ಯುತ್ ಸಂದೇಶವನ್ನು ಹೊರಡಿಸುವ ಜೀವಕೋಶಗಳ ಸಾಲೊಂದನ್ನು ಪಟಪೋಷಿಯನ್ ಮತ್ತು ಅವರ ಜೊತೆಗಾರರು ಮೊದಲು ಕಂಡುಹಿಡಿದರು. ಕಷ್ಟಕರವಾದ ಹುಡುಕಾಟದ ನಂತರ, ಪಟಪೋಷಿಯನ್ ಮತ್ತು ಅವರ ಜೊತೆಗಾರರಿಗೆ ಮೈಕ್ರೋಪಿಪೆಟ್‌ನ ಒತ್ತುವಿಕೆಯ ಪರಿಣಾಮವನ್ನು ಮೌನವಾಗಿಸುವಂತೆ ಜೀವಕೋಶಗಳನ್ನು ಅಸಂವೇದನಾಶೀಲಗೊಳಿಸುವ ವಂಶವಾಹಿಯನ್ನು ಶೋಧಿಸುವುದು ಸಾಧ್ಯವಾಯಿತು. ಈ ವಂಶವಾಹಿಗಳು ಈ ಹಿಂದೆ ನಮಗೆ ತಿಳಿಯದಿದ್ದ ಯಾಂತ್ರಿಕ ಸಂವೇದನಾಶೀಲ ಅಯಾನ್ ಚಾನಲ್‌ಅನ್ನು ಕೋಡ್ ಮಾಡುವಂಥವಾಗಿದ್ದವು.

ಇವುಗಳನ್ನು ’ಒತ್ತಡ’ ಎಂಬುದರ ಗ್ರೀಕ್ ಪದದ ಮೇಲೆ ಪೈಜ಼ೋ1 ಹಾಗೂ ಪೈಜ಼ೋ2 ಎಂದು ಹೆಸರಿಸಲಾಯಿತು. ಇನ್ನೂ ಮುಂದುವರೆದ ಅಧ್ಯಯನಗಳು, ಪೈಜ಼ೋ1 ಮತ್ತು ಪೈಜ಼ೋ2ಗಳು ಜೀವಕೋಶದ ಕೋಶಪದರದ ಮೇಲೆ ಉಂಟಾಗುವ ಒತ್ತಡದಿಂದ ನೇರವಾಗಿ ಸಕ್ರಿಯಗೊಳ್ಳುವ ಅಯಾನ್ ಚಾನಲ್‌ಗಳೆಂಬುದು ಖಚಿತವಾಯಿತು.

ಟಿಆರ್‌ಪಿವಿ1, ಟಿಆರ್‌ಪಿಎಂ8, ಪೈಜ಼ೋ ಚಾನಲ್‌ಗಳೆಲ್ಲವನ್ನು ಕಂಡುಹಿಡಿದ ವಿನೂತನ ಮತ್ತು ಅದ್ವಿತೀಯ ಸಂಶೋಧನೆಗಳ ಮೂಲಕ ಈ ಬಾರಿಯ ನೊಬೆಲ್ ಪಾರಿತೋಷಕದ ವಿಜೇತರು, ಶಾಖ, ತಂಪು ಮತ್ತು ಯಾಂತ್ರಿಕ ಶಕ್ತಿಗಳು ಉಂಟುಮಾಡುವ ನರ ಸಂವೇದನೆಗಳು ಹೇಗೆ ಸುತ್ತಲಿನ ಪರಿಸರವನ್ನು ಗ್ರಹಿಸಲು ಮತ್ತು ಅದಕ್ಕೆ ಹೊಂದಿಕೊಳ್ಳಲು ನಮಗೆ ನೆರವಾಗುತ್ತವೆಂಬುದನ್ನು ನಾವು ಅರಿಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಕನ್ನಡಕ್ಕೆ: ಮಲ್ಲಿಗೆ

ಡಾ. ಸ್ವಾತಿ ಶುಕ್ಲಾ

ಡಾ.ಸ್ವಾತಿ ಶುಕ್ಲಾ
ಜರ್ಮನಿಯಲ್ಲಿ ‘ರೋಗ ನಿರೋಧಕ’ ಶಾಸ್ತ್ರದಲ್ಲಿ ಪಿಎಚ್‌ಡಿಯನ್ನು ಮುಗಿಸಿದ್ದಾರೆ. ಸ್ವೀಡನ್‌ನಲ್ಲಿ ಪೋಸ್ಟ್ ಡಾಕ್ಟೋರಲ್ ಸಂಶೋಧನೆಯನ್ನೂ ಮುಗಿಸಿ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಗೌರಿಲಂಕೇಶ್‌ನ್ಯೂಸ್.ಕಾಮ್‌ನ ಸಹ ಸಂಪಾದಕರಾಗಿದ್ದಾರೆ.


ಇದನ್ನೂ ಓದಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...