Homeಮುಖಪುಟಲಖಿಂಪುರ್‌ ಹತ್ಯಾಕಾಂಡದ ಹಿಂದೆ ಸಚಿವ ಅಜಯ್ ಮಿಶ್ರಾ: ಯುಪಿ ಬಿಜೆಪಿ ನಾಯಕನ ಆರೋಪ

ಲಖಿಂಪುರ್‌ ಹತ್ಯಾಕಾಂಡದ ಹಿಂದೆ ಸಚಿವ ಅಜಯ್ ಮಿಶ್ರಾ: ಯುಪಿ ಬಿಜೆಪಿ ನಾಯಕನ ಆರೋಪ

- Advertisement -
- Advertisement -

ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಹಿಂದೆ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಇದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಗುರುವಾರ ಆರೋಪಿಸಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೋರಿದ್ದಾರೆ.

ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದ ಕಾರಣಕ್ಕಾಗಿ ಪ್ರಧಾನಿಯ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅವರ “ಉದ್ರೇಕಕಾರಿ ಹೇಳಿಕೆ” ಬೆಂಕಿಗೆ ತುಪ್ಪ ಸುರಿದಂತಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ಪಕ್ಷ ನನಗೆ ದ್ರೋಹ ಮಾಡುತ್ತಿದೆ’: ರಾಜೀನಾಮೆಗೆ ಸಜ್ಜಾದ ಬಿಜೆಪಿ ಶಾಸಕ ಮಸಾಲೆ ಜಯರಾಮ

“ಘಟನೆ ಬಗ್ಗೆ ಅವರು ರೈತರಲ್ಲಿ ಕ್ಷಮೆ ಕೇಳಬೇಕಿತ್ತು. ಆದರೆ ಅವರು ತಮ್ಮ ಮಗನನ್ನು ರಕ್ಷಿಸಲು ಮಾತ್ರ ಪ್ರಯತ್ನಿಸಿದರು. ಘಟನೆಯ ಬಗ್ಗೆ ಅವರು ಇನ್ನೂ ವಿಷಾದಿಸಿಲ್ಲ. ಈ ಘಟನೆಯು ಮಾನವೀಯತೆಗೆ ಕಳಂಕವಾಗಿದೆ” ಎಂದು ರಾಮ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಅವರ ಮಗ ತನ್ನ ಕಾರಿನ ಅಡಿಗೆ ರೈತರನ್ನು ಹಾಕಿ ಹತ್ಯೆ ಮಾಡಿದ್ದಾನೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ನಂತರ ಆತನನ್ನು ಬಂಧಿಸಲಾಯಿತು. ಆದರೆ ಇಂದಿಗೂ ಸಚಿವರು ಕುರ್ಚಿಯಲ್ಲಿ ಕುಳಿತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸಚಿವರನ್ನು ತಕ್ಷಣವೇ ವಜಾಗೊಳಿಸಬೇಕು” ಎಂದು ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಮ್ ಸಿಂಗ್, ಲಖಿಂಪುರ್ ಘಟನೆ ಮತ್ತು ಗೋರಖ್‌ಪುರ್ ಉದ್ಯಮಿ ಕೊಲೆ ಪ್ರಕರಣದಿಂದಾಗಿ ಬಿಜೆಪಿ ಸರ್ಕಾರದ ಇಮೇಜ್ ಹಾಳಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆತಂದ ಪೊಲೀಸರು

ಲಖಿಂಪುರ್ ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಸಾವನ್ನಪ್ಪಿದ್ದಾರೆ. ಅವರನ್ನೂ ಸರ್ಕಾರ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

“ಈ ಘಟನೆಯ ಬಗ್ಗೆ ಸರ್ಕಾರದ ನಿಷ್ಠುರತೆಯಿಂದಾಗಿ ರಾಜ್ಯದಾದ್ಯಂತ ಕಾರ್ಯಕರ್ತರು ಕೋಪಗೊಂಡಿದ್ದಾರೆ. ರೈತರಿಗೆ ನೀಡಿದಂತೆ ಮೃತ ಕಾರ್ಯಕರ್ತರ ಸಂಬಂಧಿಕರಿಗೆ ಆರ್ಥಿಕ ನೆರವನ್ನು ಸರ್ಕಾರ ನೀಡಬೇಕು. ಜೊತೆಗೆ ಅವರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಬಿಜೆಪಿಯಲ್ಲಿರುವ ಕಾರ್ಯಕರ್ತರ ಸ್ಥಿತಿ “ಬಂಧಿಸಲ್ಪಟ್ಟ ಕಾರ್ಯಕರ್ತ”ರಂತೆ ಆಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರಶಾಹಿಗಳು ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ಟೀಕಿಸಿದ್ದರು. ಜೊತೆಗೆ ಕೊರೊನಾ ಅಲೆಯನ್ನು ನಿರ್ವಹಿಸಿರುವ ಬಗ್ಗೆಯು ಅವರು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...