Homeಕರ್ನಾಟಕಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

ಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

- Advertisement -
- Advertisement -

ಹಿರಿಯ ರಂಗಕರ್ಮಿ, ನಟ, ಚಿಂತಕ, ಬರಹಗಾರ, ನಾಡಿನ ಸಾಕ್ಷಿಪ್ರಜ್ಞೆಯಾಗಿದ್ದ ಪ್ರೊ.ಜಿ.ಕೆ ಗೋವಿಂದ ರಾವ್ (84) ಶುಕ್ರವಾರ (ಅ.15) ಮುಂಜಾನೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ವಿಚಾರವಾದಿ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಪ್ರೀತಿಯಿಂದ ಜಿಕೆಜಿ ಸರ್‌ ಎಂದು ಕರೆಸಿಕೊಳ್ಳುತ್ತಿದ್ದ ಅವರು ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ರಂಗಭೂಮಿ, ಸಿನಿಮಾರಂಗದಲ್ಲಿ ಸಕ್ರಿಯ ಒಡನಾಟ ಇಟ್ಟುಕೊಂಡಿದ್ದ ಇವರು ಕಥಾ ಸಂಗಮ, ಗ್ರಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ನಿಶ್ಯಬ್ದ, ಭೂಮಿ ತಾಯಿಯ ಚೊಚ್ಚಲ ಮಗ, ಅಜ್ಜು, ಶಾಸ್ತ್ರಿ, ರೇ ಮುಂತಾದ ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು.

ಜಿಕೆಜಿ ಅವರು ಸಮಕಾಲೀನ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸಿ ತಮ್ಮ ಜನಪರ ನಿಲುವು ಪ್ರಕಟಿಸಿದ್ದಾರೆ. ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಾ ಮಾಲಿಕೆ), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? ಮುಂತಾದ ಹಲವು ಕೃತಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನಕ್ಕೆ ಗಣ್ಯರು, ಸಾಮಾಜಿಕ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. “ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ” ಎಂದಿದ್ದಾರೆ.
Actor, literature, thinker G K Govindarao is no more
“ವಯಸ್ಸು, ಅನಾರೋಗ್ಯದಿಂದ ದೇಹ ಬಳಲಿದ್ದರೂ ಆಗಾಗ ತಮ್ಮ ಕಂಚಿನ ಕಂಠದಿಂದ ನಮ್ಮನ್ನೆಲ್ಲ ಬಡಿದೆಚ್ಚರಿಸುತ್ತಿದ್ದ, ಕೊನೆ ಉಸಿರಿನ ವರೆಗೆ ಸೈದ್ಧಾಂತಿಕವಾಗಿ ರಾಜಿ ಮಾಡಿಕೊಳ್ಳದೆ ನೇರ-ನಿಷ್ಠುರ ಮಾತು, ಬರಹಗಳ ಮೂಲಕ ನಾಡಿನ ನಿಜವಾದ ಸಾಕ್ಷಿ‌ಪ್ರಜ್ಞೆಯಂತಿದ್ದ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ. ಹಳೆಮರಗಳು ಉರುಳಿ ಬೀಳಲಿವೆ ಎನ್ನುವುದು ಅವರಿಗೆ ಗೊತ್ತಿತ್ತು, ಇದಕ್ಕಾಗಿಯೇ ಹೊಸ ಚಿಗುರು ಹುಟ್ಟಿಸುವ ಸತತ ಪ್ರಯತ್ನದಲ್ಲಿದ್ದರು. ಅವರ ನಿರೀಕ್ಷೆಯ ಹೊಸ ಕಾಲವನ್ನು ಕಾಣಲಾಗದೆ ಅಗಲಿ ಹೋದರು.
ಈ ‌ನಿರ್ವಾತ ಬಹಳ ದಿನ ನಮ್ಮನ್ನು ಕಾಡಲಿದೆ. ಹಿರಿಯ ಜೀವಕ್ಕೆ ಒಂದು ನಮಸ್ಕಾರ, ಇನ್ನೊಂದು Sorry” ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಬರೆದಿದ್ದಾರೆ.

 

ಪ್ರೊ. ಜಿ.ಕೆ ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು, ಸಾವಿರಾರೂ ಅಭಿಮಾನಿಗಳು ಮತ್ತು ಶಿಷ್ಯರನ್ನು ಅಗಲಿದ್ದಾರೆ.


ಇದನ್ನೂ ಓದಿ: ಮಹಿಳಾ ಚಳವಳಿಗೆ ದೊಡ್ಡ ನಷ್ಟ: ಪ್ರಖ್ಯಾತ ಸ್ತ್ರೀವಾದಿ ಕಮಲ ಭಾಸಿನ್‌ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....