Homeಕರ್ನಾಟಕಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

ಹಿರಿಯ ರಂಗಕರ್ಮಿ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ (84) ನಿಧನ

- Advertisement -
- Advertisement -

ಹಿರಿಯ ರಂಗಕರ್ಮಿ, ನಟ, ಚಿಂತಕ, ಬರಹಗಾರ, ನಾಡಿನ ಸಾಕ್ಷಿಪ್ರಜ್ಞೆಯಾಗಿದ್ದ ಪ್ರೊ.ಜಿ.ಕೆ ಗೋವಿಂದ ರಾವ್ (84) ಶುಕ್ರವಾರ (ಅ.15) ಮುಂಜಾನೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ವಿಚಾರವಾದಿ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಪ್ರೀತಿಯಿಂದ ಜಿಕೆಜಿ ಸರ್‌ ಎಂದು ಕರೆಸಿಕೊಳ್ಳುತ್ತಿದ್ದ ಅವರು ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ರಂಗಭೂಮಿ, ಸಿನಿಮಾರಂಗದಲ್ಲಿ ಸಕ್ರಿಯ ಒಡನಾಟ ಇಟ್ಟುಕೊಂಡಿದ್ದ ಇವರು ಕಥಾ ಸಂಗಮ, ಗ್ರಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ನಿಶ್ಯಬ್ದ, ಭೂಮಿ ತಾಯಿಯ ಚೊಚ್ಚಲ ಮಗ, ಅಜ್ಜು, ಶಾಸ್ತ್ರಿ, ರೇ ಮುಂತಾದ ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು.

ಜಿಕೆಜಿ ಅವರು ಸಮಕಾಲೀನ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ಭಾಗವಹಿಸಿ ತಮ್ಮ ಜನಪರ ನಿಲುವು ಪ್ರಕಟಿಸಿದ್ದಾರೆ. ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಾ ಮಾಲಿಕೆ), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? ಮುಂತಾದ ಹಲವು ಕೃತಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನಕ್ಕೆ ಗಣ್ಯರು, ಸಾಮಾಜಿಕ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. “ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ” ಎಂದಿದ್ದಾರೆ.
Actor, literature, thinker G K Govindarao is no more
“ವಯಸ್ಸು, ಅನಾರೋಗ್ಯದಿಂದ ದೇಹ ಬಳಲಿದ್ದರೂ ಆಗಾಗ ತಮ್ಮ ಕಂಚಿನ ಕಂಠದಿಂದ ನಮ್ಮನ್ನೆಲ್ಲ ಬಡಿದೆಚ್ಚರಿಸುತ್ತಿದ್ದ, ಕೊನೆ ಉಸಿರಿನ ವರೆಗೆ ಸೈದ್ಧಾಂತಿಕವಾಗಿ ರಾಜಿ ಮಾಡಿಕೊಳ್ಳದೆ ನೇರ-ನಿಷ್ಠುರ ಮಾತು, ಬರಹಗಳ ಮೂಲಕ ನಾಡಿನ ನಿಜವಾದ ಸಾಕ್ಷಿ‌ಪ್ರಜ್ಞೆಯಂತಿದ್ದ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ. ಹಳೆಮರಗಳು ಉರುಳಿ ಬೀಳಲಿವೆ ಎನ್ನುವುದು ಅವರಿಗೆ ಗೊತ್ತಿತ್ತು, ಇದಕ್ಕಾಗಿಯೇ ಹೊಸ ಚಿಗುರು ಹುಟ್ಟಿಸುವ ಸತತ ಪ್ರಯತ್ನದಲ್ಲಿದ್ದರು. ಅವರ ನಿರೀಕ್ಷೆಯ ಹೊಸ ಕಾಲವನ್ನು ಕಾಣಲಾಗದೆ ಅಗಲಿ ಹೋದರು.
ಈ ‌ನಿರ್ವಾತ ಬಹಳ ದಿನ ನಮ್ಮನ್ನು ಕಾಡಲಿದೆ. ಹಿರಿಯ ಜೀವಕ್ಕೆ ಒಂದು ನಮಸ್ಕಾರ, ಇನ್ನೊಂದು Sorry” ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಬರೆದಿದ್ದಾರೆ.

 

ಪ್ರೊ. ಜಿ.ಕೆ ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು, ಸಾವಿರಾರೂ ಅಭಿಮಾನಿಗಳು ಮತ್ತು ಶಿಷ್ಯರನ್ನು ಅಗಲಿದ್ದಾರೆ.


ಇದನ್ನೂ ಓದಿ: ಮಹಿಳಾ ಚಳವಳಿಗೆ ದೊಡ್ಡ ನಷ್ಟ: ಪ್ರಖ್ಯಾತ ಸ್ತ್ರೀವಾದಿ ಕಮಲ ಭಾಸಿನ್‌ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...