Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

- Advertisement -
- Advertisement -

ಪಂಜಾಬ್‌‌ನ ನೂತನ ಮುಖ್ಯಮಂತ್ರಿಯಾಗಿರುವ ಚರಣ್‌‌ಜಿತ್‌‌ ಸಿಂಗ್ ಚನ್ನಿ ಅವರು ಮತಾಂತರವಾಗುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವೈರಲ್‌ ವಿಡಿಯೊದಲ್ಲಿ ಸಿಖ್‌ ವ್ಯಕ್ತಿಯಂತೆ ಕಾಣುತ್ತಿರುವ ವ್ಯಕ್ತಿಯೊಬ್ಬರು ಕ್ರೈಸ್ತ ಪಾದ್ರಿಯಿಂದ ಬ್ಯಾಪ್ಟಿಸಂ(ದೀಕ್ಷಾಸ್ನಾನ) ಆಗುತ್ತಿರುವುದನ್ನು ನೋಡಬಹುದಾಗಿದೆ.

ವೀಡಿಯೊದಲ್ಲಿರುವ ವ್ಯಕ್ತಿಯು ಪಂಜಾಬ್‌ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಹೋಲಿಕೆಯನ್ನು ಹೊಂದಿಲ್ಲ. ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯ ಚಿತ್ರದೊಂದಿಗೆ ಚರಣಜಿತ್ ಸಿಂಗ್ ಚನ್ನಿಯ ಚಿತ್ರವನ್ನು ಜೋಡಿಸಿ ನೋಡಿದಾಗ ಕೂಡಾ ನಮಗೆ ಯಾವುದೇ ಹೋಲಿಕೆಗಳನ್ನು ಕಂಡುಹಿಡಿಯಲಾಗಲಿಲ್ಲ.

ವೀಡಿಯೊದ 0:30 ಸಮಯದ ಸ್ಟಾಂಪ್‌ನಲ್ಲಿ, ಪಾದ್ರಿ ಅವರು ‘ಸಿಮ್ರಂಜೀತ್ ಸಿಂಗ್’ ಎಂದು ಉಚ್ಚರಿಸುವುದನ್ನು ನಾವು ಸ್ಪಷ್ಟವಾಗಿ ಕೇಳಬಹುದು. ಅವರ ಈ ಹೇಳಿಕೆ, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ಚರಣ್‌ಜಿತ್ ಸಿಂಗ್ ಚನ್ನಿ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ, ಅವರ ಧಾರ್ಮಿಕತೆಯನ್ನು ಪ್ರಶ್ನಿಸುವ ವೀಡಿಯೊಗಳು ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಹಿಂದೆ, “ಚನ್ನಿ ಅವರು ವಿಡಿಯೊವೊಂದರಲ್ಲಿ ಹಲ್ಲೆಲುಯಾ ಎಂದು ಹೇಳುತ್ತಿದ್ದಾರೆ, ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಏಸುಗೆ ಧನ್ಯವಾದ ಹೇಳಿದರು’ ಎಂದು ಪ್ರತಿಪಾದಿಸಿ ವಿಡಿಯೊ ಹಂಚಿಕೊಳ್ಳಲಾಗಿತ್ತು.

ಆದರೆ, ಆ ವಿಡಿಯೊ ಚನ್ನಿ ಅವರು ಪಂಜಾಬ್‌ನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಚರ್ಚ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ್ದಾಗಿದೆ. ಆ ವೀಡಿಯೋ ಬಗ್ಗೆ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಫ್ಯಾಕ್ಟ್‌ಚೆಕ್‌ ಮಾಡಿದೆ. ಅದನ್ನು ಇಲ್ಲಿ ಓದಬಹುದು.

ಇದನ್ನೂ ಓದಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಚನ್ನಿ ಸಿಖ್ ಧರ್ಮಿಯರಾಗಿದ್ದಾರೆ. ಒಂದು ವೇಳೆ ಚರಣಜಿತ್ ಸಿಂಗ್ ಚನ್ನಿ ಅವರು ದೀಕ್ಷಾಸ್ನಾನ ಪಡೆದಿದ್ದರೆ, ಮಾಧ್ಯಮಗಳು ಇದನ್ನು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಈ ವೀಡಿಯೋದಲ್ಲಿ ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯಲ್ಲ.

ಪ್ರತಿಪಾದನೆ: ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಕ್ರೈಸ್ತರ ದೀಕ್ಷಾಸ್ನಾನ ಪಡೆಯುವ ವಿಡಿಯೋ.
ವಾಸ್ತವ: ವೈರಲ್ ಆಗಿರುವ ವೀಡಿಯೋದಲ್ಲಿರುವ ವ್ಯಕ್ತಿ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಅವರೊಂದಿಗೆ ಯಾವುದೇ ಸಾಮ್ಯತೆಯನ್ನು ಹೊಂದಿಲ್ಲ. ವಿಡಿಯೋದಲ್ಲಿ ಇರುವ ಪಾದ್ರಿಯು, ದೀಕ್ಷಾಸ್ನಾನ ಪಡೆಯುತ್ತಿರುವ ವ್ಯಕ್ತಿಯ ಹೆಸರು ‘ಸಿಮ್ರಂಜೀತ್ ಸಿಂಗ್’ ಎಂದು ಹೇಳುವುದನ್ನು ಸ್ಪಷ್ಟವಾಗಿ ಕೇಳಬಹುದು. ಒಂದು ವೇಳೆ ಚರಣಜಿತ್ ಸಿಂಗ್ ಚನ್ನಿ ದೀಕ್ಷಾಸ್ನಾನ ಪಡೆದಿದ್ದರೆ, ಮಾಧ್ಯಮಗಳು ಇದನ್ನು ವ್ಯಾಪಕವಾಗಿ ವರದಿ ಮಾಡುತ್ತಿದ್ದವು. ಆದರೆ, ಅಂತಹ ಯಾವುದೇ ವರದಿಗಳು ಕಂಡುಬಂದಿಲ್ಲ. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...