Homeಮುಖಪುಟಪಟಾಕಿ ಬ್ಯಾನ್: 4 ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

ಪಟಾಕಿ ಬ್ಯಾನ್: 4 ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ದೆಹಲಿ, ಒಡಿಶಾ, ರಾಜಸ್ಥಾನ ಮತ್ತು ಹರಿಯಾಣದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಈ ರಾಜ್ಯಗಳು ಜಾರಿಗೆ ತಂದಿರುವ ಪಟಾಕಿ ನಿಷೇಧದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೂಚಿಸಿರುವ ನಿರ್ದೇಶನಗಳಿಗೆ ಅನುಸಾರವಾಗಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವಂತೆ ಸ್ಟಾಲಿನ್ ಕೇಳಿಕೊಂಡಿದ್ದಾರೆ.

ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ವಲಯದ ಮೇಲೆ ಕೋವಿಡ್ -19 ಸಾಂಕ್ರಾಮಿಕ ಬೀರಿರುವ ಕೆಟ್ಟ ಪರಿಣಾಮದ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿದ ಸ್ಟಾಲಿನ್, ಪಟಾಕಿ ಉದ್ಯಮವನ್ನು ಅವಲಂಬಿಸಿರುವ ಸುಮಾರು ಎಂಟು ಲಕ್ಷ ಕಾರ್ಮಿಕರ ಜೀವನವು ಪಟಾಕಿ ನಿಷೇಧದಿಂದಾಗಿ ಸಂಕಷ್ಟದಲ್ಲಿದೆ ಎಂದಿದ್ದಾರೆ.

ಪಟಾಕಿ ಬ್ಯಾನ್ ಮಾಡಿರುವ ದೆಹಲಿ, ಒಡಿಶಾ, ರಾಜಸ್ಥಾನ ಮತ್ತು ಹರಿಯಾಣ ರಾಜ್ಯಗಳ ವಾಯುಮಾಲಿನ್ಯದ ಕಾಳಜಿ ನನಗೆ ಅರ್ಥವಾಗುತ್ತದೆ. ಮಾನ್ಯ ಸುಪ್ರೀಂ ಕೋರ್ಟ್ ಈಗಾಗಲೇ ಕೆಲವು ವರ್ಗಗಳ ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧಿಸಿದೆ. ಹಾಗಾಗಿ ಈಗ, ಕಡಿಮೆ ಪ್ರಮಾಣದ ಹೊರಸೂಸುವಿಕೆಯ ಹಸಿರು ಪಟಾಕಿಗಳನ್ನು ತಯಾರಿಸಲಾಗುತ್ತಿದೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಆದ್ದರಿಂದ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವು ಸಮಂಜಸವಲ್ಲ ಎಂದು ಸ್ಟಾಲಿನ್ ಬರೆದಿದ್ದಾರೆ.

ಇದೇ ರೀತಿಯಾಗಿ ಉಳಿದ ರಾಜ್ಯಗಳು ಸಹ ಬ್ಯಾನ್ ಮಾಡಿದರೆ ಇಡೀ ಉದ್ಯಮವನ್ನೆ ಮುಚ್ಚಬೇಕಾದ ಪರಿಸ್ಥಿತಿ ಬರುತ್ತದೆ. ಇದರಿಂದ ಸುಮಾರು 8 ಲಕ್ಷ ಜನರ ಜೀವನೋಪಾಯ ಅಪಾಯಕ್ಕೆ ಸಿಲುಕಲಿದೆ. ಪಟಾಕಿಗಳನ್ನು ಸಿಡಿಸುವುದು ಭಾರತೀಯ ಹಬ್ಬಗಳ, ವಿಶೇಷವಾಗಿ ದೀಪಾವಳಿಯ ಅವಿಭಾಜ್ಯ ಅಂಗವಾಗಿದೆ ಎಂದು ನೀವು ಕೂಡ ಒಪ್ಪುತ್ತೀರಿ. ಪರಿಸರ, ಜೀವನೋಪಾಯ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಸಮರ್ಪಕ ಗೌರವ ನೀಡುವ ಸಮತೋಲಿತ ವಿಧಾನವು ಸಾಧ್ಯವಿದೆ ಮತ್ತು ಅಗತ್ಯವಾಗಿದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ.

ನಗರಗಳಲ್ಲಿ ಕೋವಿಡ್ -19 ಕಾರಣಕ್ಕೆ ಎಲ್ಲಾ ಪಟಾಕಿಗಳ ಸಂಪೂರ್ಣ ನಿಷೇಧಿಸಿರುವ ಎನ್‌ಜಿಟಿಯ ನಿಲುವು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜುಲೈನಲ್ಲಿ ವಜಾಗೊಳಿಸಿತ್ತು. ಜೊತೆಗೆ ಆಯಾ ನಗರಗಳಲ್ಲಿ ಗಾಳಿಯ ಗುಣಮಟ್ಟದ ಸೂಚ್ಯಂಕದ (AQI) ವರ್ಗವನ್ನು ಆಧರಿಸಿ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ಅಧಿಕಾರಿಗಳು ಅವಕಾಶ ನೀಡಬಹುದು ಎಂದು ಹೇಳಿತ್ತು. ಆದರೂ ಪಟಾಕಿ ಉತ್ಪಾದನೆಗೆ ಅನುಮತಿ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಟಾಕಿ ಸಿಡಿಸುವ ಮೂಲಕ ಆಚರಿಸಲು ಬಯಸುವ ಜನರು AQI ಆಧರಿಸಿ ಅಧಿಕಾರಿಗಳ ಅನುಮತಿಯೊಂದಿಗೆ ಸಿಡಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ತಮಿಳುನಾಡಿನ ಶಿವಕಾಶಿ ನಗರವು ಅತಿ ಹೆಚ್ಚು ಪಟಾಕಿ ತಯಾರಿಸುವ ಕಾರ್ಖಾನೆಗಳನ್ನು ಹೊಂದಿದೆ. ಇಲ್ಲಿ ತಯಾರಾಗುವ ಪಟಾಕಿಗಳು ದೇಶದ ಹಲವು ರಾಜ್ಯಗಳಿಗೆ ರಫ್ತಾಗುತ್ತವೆ.


ಇದನ್ನೂ ಓದಿ: ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...