Homeಕರ್ನಾಟಕಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ: ಯತ್ನಾಳ್‌‌ ಪ್ರತಿಕ್ರಿಯೆ

ಕಾಂಗ್ರೆಸ್‌, ಬಿಜೆಪಿ ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ.

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರ ಸಿ.ಡಿ.ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ ಹಲವರು ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯವರ ಸಿ.ಡಿ. ಮೊದಲು ಬಿಡುಗಡೆಯಾಗಿತ್ತು. ನಂತರದಲ್ಲಿ ಹಲವು ನಾಯಕರು ಕೋರ್ಟ್ ಮೆಟ್ಟಿಲೇರಿ ಎಚ್ಚರಿಕೆ ವಹಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು. “ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ” ಎಂದು ಸದಾನಂದಗೌಡರು ಹೇಳಿದ್ದರು. ಈಗ ಯತ್ನಾಳ್ ಅವರ ಭಾವಚಿತ್ರವನ್ನು ಹೋಲುವ ಫೋಟೋವೊಂದು ವೈರಲ್‌ ಆಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ಇದನ್ನೂ ಓದಿರಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

“ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲ ಪಕ್ಷದವರಿದ್ದಾರೆ ” ಎಂದು ಯತ್ನಾಳ್‌ ಆರೋಪಿಸಿದ್ದಾರೆ.

ಸಿ.ಡಿ. ಮಾಡುವಂತಹದ್ದು ಬಿಜೆಪಿ, ಕಾಂಗ್ರೆಸ್‌ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿಯೂ ಸಿ.ಡಿ. ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಸಿ.ಡಿ. ಇದ್ದರೆ ಬಿಡುಗಡೆ ‌ಆಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡುತ್ತೇನೆ. ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ ಎಂದಿದ್ದಾರೆ.

ಪೊಲೀಸರು ಫೋಟೋ ಪ್ರಕರಣವನ್ನು ತನಿಖೆ ಮಾಡುತ್ತಾರೆ. ಇಂತಹ ನೂರು ಆರೋಪ ಬಂದರೂ ಎದುರಿಸುವ ತಾಕತ್ತಿದೆ. ಕಳ್ಳರು ಇನ್ನೊಂದು ಸ್ವಲ್ಪ ದಿನದಲ್ಲಿ ಸಿಗುತ್ತಾರೆ. ಜನರ ಮುಂದೆ ಬೆತ್ತಲಾಗುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕುರಿತು ಕಾಂಗ್ರೆಸ್ ಮುಖಂಡ ಸಲೀಂ ಹಾಗೂ ಉಗ್ರಪ್ಪ ನಡುವಿನ ಸಂಭಾಷಣೆ ವಿಚಾರಕ್ಕೆ ಸಂಬಂಧಿಸಿ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಜಲಸಂಪನ್ಮೂಲ ಇಲಾಖೆ ಭ್ರಷ್ಟಾಚಾರ ಪ್ರಕರಣ ನಿಜ. ಅದು ಸತ್ಯವೇ ಇದೆ, ಆ ಕಾರಣಕ್ಕೆ ರೇಡ್ ಆಗಿದೆ. ಸಾವಿರಾರು ಕೋಟಿ ಮೌಲ್ಯದ ಆಸ್ತಿ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರದ್ದೇ ರೇಡ್ ಆಗಿದೆ. ಅದರಲ್ಲಿ ಎಲ್ಲ ಪಕ್ಷದವರಿದ್ದಾರೆ, ಯಾವುದೇ ಒಂದು ಪಕ್ಷದವರಿಲ್ಲ. ಇನ್‌ಕಮ್‌ ಟ್ಯಾಕ್ಸ್‌ನವರು ರೇಡ್ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರದ ಹಣವನೆಲ್ಲ ವಸೂಲಿ ಮಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಮನೆಗಳು ಅರ್ಧಕ್ಕೆ ನಿಂತಿವೆ. ಬಡವರಿಗೆ ಹೋಗಿ ಅದು ಮುಟ್ಟಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಿಡಿ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತರಲಿರುವ ಶಾಸಕ ರೇಣುಕಾಚಾರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...