Homeಮುಖಪುಟಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

ಕೇಂದ್ರ ಆರೋಗ್ಯ ಸಚಿವರ ವರ್ತನೆಗೆ ಮನಮೋಹನ್‌ ಸಿಂಗ್‌ ಕುಟುಂಬ ಬೇಸರ

- Advertisement -
- Advertisement -

ನವದೆಹಲಿಯಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ಏಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರನ್ನು ನೋಡಲು ಬಂದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯ ಅವರ ವರ್ತನೆಗೆ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಿಂಗ್‌ ಅವರ ಆರೋಗ್ಯ ವಿಚಾರಿಸಲು ಗುರುವಾರ ಏಮ್ಸ್‌‌ಗೆ ಬಂದಿದ್ದ ಮಾಂಡವಿಯ ಅವರು ಕುಟುಂಬದ ಅನುಮತಿಗೆ ವಿರುದ್ಧವಾಗಿ ಫೋಟೋಗ್ರಾಫರ್‌‌ನನ್ನು ಕೊಠಡಿಯ ಒಳಗೆ ಕರೆದುಕೊಂಡು ಹೋದರು” ಎಂದು ದಮನ್‌‌ ಹೇಳಿದ್ದಾರೆ.

ದಮನ್‌ ಅವರು ‘ದಿಪ್ರಿಂಟ್‌’ ಜಾಲತಾಣಕ್ಕೆ ಹೇಳಿಕೆ ನೀಡಿದ್ದು, “ಸಚಿವರೊಂದಿಗೆ ಫೋಟೋಗ್ರಾಫರ್‌‌ ಕೂಡ ಕೊಠಡಿಯೊಳಗೆ ಪ್ರವೇಶಿಸಿದ್ದರಿಂದ ನಮ್ಮ ತಾಯಿ ಬೇಸರಗೊಂಡಿದ್ದರು. ಕೊಠಡಿಯನ್ನು ಬಿಟ್ಟು ಹೊರಹೋಗುವಂತೆ ಕೇಳಿಕೊಂಡರೂ ನಮ್ಮ ತಾಯಿಯ ಕೋರಿಕೆಯನ್ನು ಅವರು ಸ್ವೀಕರಿಸಲೇ ಇಲ್ಲ” ಎಂದಿದ್ದಾರೆ.

ಡಾ.ಮನಮೋಹನ್‌ ಸಿಂಗ್‌ ಅವರ ಪುತ್ರಿ ದಮನ್‌ ಸಿಂಗ್‌.

“ಆಕೆ ತುಂಬಾ ನೊಂದುಕೊಂಡಿದ್ದಾಳೆ. ಅತ್ಯಂತ ಕಠಿಣ ಸಂದರ್ಭದಲ್ಲಿ ನಮ್ಮ ಪೋಷಕರಿದ್ದಾರೆ. ಅವರು ಹಿರಿಯ ಜೀವಗಳು. ಮೃಗಾಲಯದಲ್ಲಿರುವ ಪ್ರಾಣಿಗಳಲ್ಲ” ಎಂದು ದಮನ್‌ ಹೇಳಿಕೆ ನೀಡಿದ್ದಾರೆ.

ಮಾಂಡವಿಯ ಅವರ ಪ್ರತಿಕ್ರಿಯೆಗೆ ವಾಟ್ಸ್‌ಆಪ್‌, ಇಮೇಲ್‌ ಮೂಲಕ ಸಂಪರ್ಕಿಸಲು ಪ್ರಯತ್ನಿಸಿರುವುದಾಗಿ ದಿಪ್ರಿಂಟ್‌‌ ಹೇಳಿದ್ದು, “ಈ ಸುದ್ದಿ ಪ್ರಕಟವಾಗುವವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದಿದೆ.

“ನಮ್ಮ ತಂದೆಯು ಡೆಂಗ್ಯೂನಿಂದ ಬಳಲುತ್ತಿದ್ದಾರೆ. ಅವರ ರೋಗ ನಿರೋಧಕಶಕ್ತಿಯೂ ಕುಂದಿದೆ. ಹೀಗಾಗಿ ಅವರನ್ನು ಭೇಟಿ ಮಾಡಲು ಯಾರಿಗೂ ನಮ್ಮ ಪೋಷಕರು ಅವಕಾಶ ನೀಡುತ್ತಿಲ್ಲ” ಎಂದು ದಮನ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿದ್ದಾಗ ಏಪ್ರಿಲ್‌ ತಿಂಗಳಲ್ಲಿ ಡಾ.ಸಿಂಗ್‌ ಸೋಂಕಿಗೆ ಒಳಗಾಗಿ, ಬಳಿಕ ಚೇತರಿಸಿಕೊಂಡಿದ್ದರು.

“ಆರೋಗ್ಯ ಸಚಿವರು ಭೇಟಿ ನೀಡಿ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ್ದು ಸ್ವಾಗತಾರ್ಹ ಸಂಗತಿ” ಎಂದಿರುವ ದಮನ್, “ಆ ಸಮಯದಲ್ಲಿ ನನ್ನ ಹೆತ್ತವರು ಛಾಯಾಚಿತ್ರ ತೆಗೆಯುವ ಸ್ಥಿತಿಯಲ್ಲಿರಲಿಲ್ಲ” ಎಂದೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ( Manmohan Singh ) ಅವರಿಗೆ ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸುಧಾರಿಸಲೆಂದು ಹಲವು ರಾಜಕೀಯ ನಾಯಕರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಢ: ಭಕ್ತರ ಮೇಲೆ ಹರಿದ ಕಾರು, 4 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುರ್ಬಲ ವ್ಯಕ್ತಿತ್ವ ಮತ್ತು ಹೀನ ಪ್ರೊಪಗ್ಯಾಂಡ ಆಸೆ ಇರುವವರು ಮಾತ್ರ ಆಸ್ಪತ್ರೆಗೆ ಬಂದು ಹಾಗೆ ಮಾಡಬಹುದು. ನಮ್ಮ ಜನರು ಇಂತಹವರಿಗೂ ಅಧಿಕಾರ ಕೊಡುತ್ತಿರುವುದು ಇನ್ನೂ ಹೆಚ್ಚಿನ ಸಾರ್ವಜನಿಕ ಕೆಡುಕಿಗೆ ಕಾರಣವಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...