Homeಸಿನಿಮಾಕ್ರೀಡೆಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

- Advertisement -
- Advertisement -

ಹಲವು ವರ್ಷಗಳಿಂದ ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಬೇಕೆಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್‌ರವರನ್ನು ಕೇಳಿಕೊಳ್ಳಲಾಗುತ್ತಿತ್ತು. ಪ್ರತಿ ಬಾರಿಯೂ ನಿರಾಕರಿಸುತ್ತಿದ್ದ ಅವರು ಈಗ ಅದಕ್ಕೆ ಒಪ್ಪಿದ್ದು, ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿದ್ದಾರೆ ಎನ್ನಲಾಗಿದೆ.

ಈ ವರ್ಷದ ಟಿ-20 ವಿಶ್ವಕಪ್​ನೊಂದಿಗೆ ಪ್ರಸ್ತುತ ಕೋಚ್​ ಆಗಿರುವ ರವಿಶಾಸ್ತ್ರಿ ಅವರ ಒಪ್ಪಂದ ಅಂತ್ಯವಾಗಲಿದೆ. ಹಾಗಾಗಿ ಹೊಸ ಕೋಚ್ ಹುಡುಕಾಟದಲ್ಲಿರುವ ಬಿಸಿಸಿಐ ಅಧಿಕಾರಿಗಳು ದುಬೈನಲ್ಲಿ ರಾಹುಲ್ ದ್ರಾವಿಡ್ ನಡುವೆ ಮಾತುಕತೆ ನಡೆಸಿದ್ದಾರೆ. ರಾಹುಲ್ ಕೋಚ್ ಪ್ರಸ್ತಾಪಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ನವೆಂಬರ್ 14ಕ್ಕೆ ಮುಕ್ತಾಯವಾಗಲಿರುವ ಟಿ-20 ವಿಶ್ವಕಪ್ ನಂತರ ಭಾರತ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅದಕ್ಕಾಗಿ ಅರ್ಜಿ ಹಾಕುವುದು ಮತ್ತು ಸಂದರ್ಶನದ ಔಪಚಾರಿಕ ಪ್ರಕ್ರಿಯೆಗಳು ನಡೆಯಲಿವೆ.

2016 ರಲ್ಲಿ ಅನಿಲ್ ಕುಂಬ್ಳೆ ಕೋಚ್ ಆಗುವ ಮುನ್ನ ಮತ್ತು 2017ರಲ್ಲಿ ರವಿಶಾಸ್ತ್ರಿ ಕೋಚ್ ಆಗುವ ಮುನ್ನ ಬಿಸಿಸಿಐನ ಮೊದಲ ಆಯ್ಕೆ ರಾಹುಲ್ ದ್ರಾವಿಡ್ ಆಗಿತ್ತು. ಆದರೆ ಅದನ್ನು ರಾಹುಲ್ ದ್ರಾವಿಡ್ ನಯವಾಗಿಯೇ ತಿರಸ್ಕರಿದ್ದರು ಮತ್ತು ಅಂಡರ್​ 19 ರಾಷ್ಟ್ರೀಯ (Under-19 Team) ತಂಡದ ಕೋಚ್​ ಆಗಿ, NCA ಮುಖ್ಯಸ್ಥರಾಗಿ ಮುಂದುವರೆದಿದ್ದರು. ಈಗ ಅವರು ಒಪ್ಪಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ರಾಹುಲ್ ದ್ರಾವಿಡ್‌ ಒಪ್ಪದಿದ್ದ ಪಕ್ಷದಲ್ಲಿ ಕೋಚ್‌ಗಾಗಿ ಶ್ರೀಲಂಕಾದ ಮಹೇಲ ಜಯವರ್ಧನೆ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಕೂಡ ಬಿಸಿಸಿಐನ ಇತರ ಆಯ್ಕೆಗಳಾಗಿದ್ದವು ಎನ್ನಲಾಗಿದೆ. ಸದ್ಯಕ್ಕೆ ರಾಹುಲ್ ದ್ರಾವಿಡ್ ಒಪ್ಪಿರುವುದರಿಂದ ಈ ಸಮಸ್ಯೆ ಬಗೆಹರಿದಿದೆ ಎನ್ನಲಾಗಿದೆ.

ಮುಂದಿನ ಎರಡು ವರ್ಷಗಳು ಭಾರತ ಕ್ರಿಕೆಟ್ ತಂಡದ ಪಾಲಿಗೆ ಮಹತ್ವದ ದಿನಗಳಾಗಲಿವೆ. 2022 ರಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವಿಶ್ಟ ಟೆಸ್ಟ್ ಚಾಂಪಿಯನ್‌ಶಿಫ್ ನಡೆಯಲಿದೆ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...