Homeಮುಖಪುಟಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

ಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಮನ ಅವತಾರದಂತೆ ಉತ್ತರ ಪ್ರದೇಶದ ಬಿಜೆಪಿ ಬಿಂಬಿಸಿರುವ ವ್ಯಂಗ್ಯಚಿತ್ರ ಪ್ರಕಟಿಸಿದೆ.

ದಸರಾ ಸಂಭ್ರಮಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಬಿಜೆಪಿ ಟ್ವಿಟರ್‌‌ನಲ್ಲಿ ಹಂಚಿಕೊಂಡಿರುವ ವ್ಯಂಗ್ಯಚಿತ್ರದಲ್ಲಿ ಯೋಗಿ ಆದಿತ್ಯನಾಥ ಅವರನ್ನು ರಾಮನಂತೆ ಬಿಂಬಿಸಿ, ಅವರ ಕೈಗೆ ಬಿಲ್ಲು ಬಾಣವನ್ನು ನೀಡಲಾಗಿದೆ. ಆದಿತ್ಯನಾಥ ಅವರು ರಾವಣನ ಮೇಲೆ ಬಾಣ ಪ್ರಯೋಗಿಸುತ್ತಿದ್ದಾರೆ. ಹತ್ತು ತಲೆಯ ರಾವಣನ ಒಂಬತ್ತು ತಲೆಗಳು ಒಂದೊಂದು ಸಾಮಾಜಿಕ ಅನಿಷ್ಟವೆಂಬಂತೆ ಬಿಂಬಿಸಲಾಗಿದೆ.

“ಸಾಮಾಜಿಕ ಅನಿಷ್ಟಗಳು ಉತ್ತರ ಪ್ರದೇಶದಲ್ಲಿ ಅಳಿಯುತ್ತಿವೆ. ಭ್ರಷ್ಟಾಚಾರ, ಗುಂಡಾರಾಜ್ಯ, ಹಗರಣ, ಅಪರಾಧ, ಜಂಗಲ್‌ ರಾಜ್, ವಂಚನೆ, ಸಮಾಧಾನಪಡಿಸುವಿಕೆ, ಕೊರೊನಾ, ಮತಾಂತರದ ಮೇಲೆ ಬಿಜೆಪಿ ಸರ್ಕಾರ ದಾಳಿ ಮಾಡಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಕ್ತಾರ ಹರ್ಷ ಶ್ರೀನಿವಾಸ ಪ್ರತಿಕ್ರಿಯಿಸಿ, “ರಾವಣನನ್ನು ದುಷ್ಟತನದ ಪ್ರತೀಕವಾಗಿ ನೋಡಲಾಗುತ್ತದೆ. ಭ್ರಷ್ಟಾಚಾರ, ಅಪರಾಧ, ಗೂಂಡಾರಾಜ್‌ಗಳು ಕೂಡ ಸಮಾಜದ ದುಷ್ಟತನಗಳು. ಮುಖ್ಯಮಂತ್ರಿ ಆದಿತ್ಯನಾಥ ಅವರು ಸಾಂಕೇತಿಕವಾಗಿ ಅವುಗಳಿಗೆ ಗುರಿ ಇಟ್ಟಿದ್ದಾರೆ” ಎಂದು ಸಮರ್ಥಿಸಿದ್ದಾರೆ.

“ಭ್ರಷ್ಟಾಚಾರ, ಅಪರಾಧ ಕೃತ್ಯಗಳನ್ನು ರಾಜ್ಯದಲ್ಲಿ ತಡೆಯಲು ಮುಖ್ಯಮಂತ್ರಿ ಆದಿತ್ಯನಾಥ ಅವರು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಹೆಚ್ಚೇನು ಹೇಳದೆ ಸಾಮಾಜಿಕ ಮಾಧ್ಯಮಗಳ ಮೂಲಕ ಕಾರ್ಟೂನ್‌‌ ಬಳಸಿ ಹೇಳಬಹುದು” ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಭಗವಾನ್ ರಾಮನಿಗೆ ಹೋಲುವಂತೆಯೇ ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಯುಪಿ ಮುಖ್ಯಮಂತ್ರಿಯವರನ್ನು ರಾಮನಂತೆ ಪೋಸ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಮನು ನಂಬಿಕೆ, ಘನತೆ, ನ್ಯಾಯ ಮತ್ತು ಸತ್ಯದ ಸಂಕೇತ. ಯೋಗಿ ಆದಿತ್ಯನಾಥ್ ‌ಅವರು ಕಾರ್ಟೂನ್‌ನಲ್ಲಿ ಗುರಿ ಇಟ್ಟಿರುವ ವಿಚಾರಗಳು ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿವೆ” ಎಂದು ಶ್ರೀನಾಟೆ ಹೇಳಿದ್ದಾರೆ.

“ಅನ್ಯಾಯದಿಂದ ಅಧೀನದವರೆಗೂ, ಮಹಿಳೆಯರ ವಿರುದ್ಧದ ಅಪರಾಧದವರೆಗೆ, ಇಡೀ ರಾಜ್ಯದಲ್ಲಿ ಹಬ್ಬಿರುವ ಭಯ ಮತ್ತು ಭಯೋತ್ಪಾದನೆಯವರೆಗೆ ರಾಜ್ಯದ ಮುಖ್ಯಮಂತ್ರಿ ಉತ್ತರದಾಯಿ ಆಗುತ್ತಾರೆ. ಸಾರ್ವಜನಿಕ ಅಭಿಪ್ರಾಯವನ್ನು ಗೌರವಿಸುವ ಬದಲು, ಅವರು ಇಂದು ಯುಪಿಯಲ್ಲಿ ರೈತರನ್ನು ಸದೆಬಡಿಯಲು ನಿಂತಿದ್ದಾರೆ. ರಾಜ್ಯದ ಜನತೆ ಅವರ ದುರಾಡಳಿತಕ್ಕೆ ತಕ್ಕ ಉತ್ತರ ನೀಡುತ್ತಾರೆ ” ಎಂದು ಎಚ್ಚರಿಸಿದ್ದಾರೆ.

ಮುಂದಿನ ಚುನಾವಣೆಯ ಭಾಗವಾಗಿ ಕಾರ್ಟೂನ್‌ಗಳನ್ನು ಯುಪಿ ಬಿಜೆಪಿ ಪೋಸ್ಟ್‌ ಮಾಡುತ್ತಿದೆ. ಕೆಲವು ದಿನಗಳ ಹಿಂದೆ “ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಹಿಂದುತ್ವದ ವೇಷ ಧರಿಸುತ್ತಿದ್ದಾರೆ” ಎಂಬ ಕಾರ್ಟೂನ್‌ಅನ್ನು ಟ್ವಿಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...