Homeಮುಖಪುಟಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

- Advertisement -
- Advertisement -

2020ರಲ್ಲಿ ಬಿಡುಗಡೆಯಾದ ಮಲಯಾಳಂ ಸಿನಿಮಾಗಳಿಗೆ ಸಂಬಂಧಿಸಿದಂತೆ 51ನೇ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜಿಯೋ ಬೇಬಿ ಅವರು ನಿರ್ದೇಶಿಸಿರುವ ‘ದಿ ಗ್ರೇಟ್ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಆಯ್ಕೆಯಾಗಿದೆ.

‘ದಿ ಗ್ರೇಟ್‌ ಇಂಡಿಯನ್‌ ಕಿಚನ್‌’ ಸಿನಿಮಾವು ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾಗಿತ್ತು. ಮಹಿಳಾ ಸ್ವಾವಲಂಬನೆ, ಮಹಿಳಾ ಸ್ವತಂತ್ರಕ್ಕೆ ಅಡುಗೆ ಮನೆಯೇ ಅತಿದೊಡ್ಡ ಸಂಕೋಲೆಯಾಗಿರುವುದನ್ನು ಈ ಸಿನಿಮಾದಲ್ಲಿ ಕಟ್ಟಿಕೊಡಲಾಗಿತ್ತು. ದೃಶ್ಯಗಳೇ ಮಾತನಾಡುವಂತೆ ಚಿತ್ರಕತೆಯನ್ನು ಜಿಯೋ ಬೇಬಿ ಎಣೆದಿದ್ದು, ಚಿತ್ರಕತೆ ಪ್ರಶಸ್ತಿಗೆ ಅವರು ಆಯ್ಕೆಯಾಗಿದ್ದಾರೆ.

‘ವೆಲ್ಲಮ್‌’ ಚಿತ್ರದ ನಟನೆಗಾಗಿ ಜಯಸೂರ್ಯ ಅತ್ಯುತ್ತಮ ನಟ, ‘ಕಪ್ಪೆಲ’ ಸಿನಿಮಾ ನಟನೆಗಾಗಿ ಅನ್ನಾ ಬೆನ್‌ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಯಸೂರ್ಯ
ಅನ್ನ ಬೆನ್‌

‘ಅಯ್ಯಪ್ಪನ್ನುಮುಂ ಕೋಶಿಯುಂ’ ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಆಯ್ಕೆಯಾಗಿದೆ. ಈ ಸಿನಿಮಾದ ನಿರ್ದೇಶಕ ಸಚ್ಚಿ (ಸಚ್ಚಿದಾನಂದ) 2020ರ ಜೂನ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಖ್ಯಾತ ನಟಿ ಸುಹಾಸಿನಿ ಮಣಿರತ್ನಂ ಅಧ್ಯಕ್ಷತೆಯಲ್ಲಿ ರೂಪಿಸಿದ್ದ ಪ್ರಶಸ್ತಿ ಸಮಿತಿಯಲ್ಲಿ ಕನ್ನಡ ಚಿತ್ರನಿರ್ದೇಶಕ ಪಿ.ಶೇಷಾದ್ರಿ ಅವರೂ ಇದ್ದರು. ಒಟ್ಟು ಎಂಬತ್ತು ಸಿನಿಮಾಗಳು ಪ್ರಶಸ್ತಿ ಸುತ್ತಿನಲ್ಲಿದ್ದವು.

ಪ್ರಶಸ್ತಿ ಪಟ್ಟಿ

ಅತ್ಯುತ್ತಮ ನಟ : ಜಯಸೂರ್ಯ (ವೆಲ್ಲಮ್‌), ಅತ್ಯುತ್ತಮ ನಟಿ : ಅನ್ನಾ ಬೆನ್‌ (ಕಪ್ಪೆಲ), ಅತ್ಯುತ್ತಮ ಸಿನಿಮಾ: ದಿ ಗ್ರೇಟ್‌ ಇಂಡಿಯನ್ ಕಿಚನ್‌ (ನಿರ್ದೇಶನ – ಜಿಯೋ ಬೇಬಿ), ಅತ್ಯುತ್ತಮ ಮನರಂಜನಾತ್ಮಕ ಸಿನಿಮಾ: ಅಯ್ಯಪ್ಪನುಮ್‌ ಕೋಶಿಯುಂ (ನಿರ್ದೇಶನ : ಸಚಿ), ಅತ್ಯುತ್ತಮ ನಿರ್ದೇಶಕ: ಸಿದ್ಧಾರ್ಥ ಶಿವ (ಎನ್ನಿವರ್‌), ಅತ್ಯುತ್ತಮ ಚೊಚ್ಚಲ ನಿರ್ದೇಶನ: ಮೊಹಮ್ಮದ್ ಮುಸ್ತಾಫಾ (ಕಪ್ಪೆಲಾ), ಅತ್ಯುತ್ತಮ ಚಿತ್ರಕಥೆ : ಜಿಯೋ ಬೇಬಿ (ದಿ ಗ್ರೇಟ್ ಇಂಡಿಯನ್ ಕಿಚನ್‌), ಅತ್ಯುತ್ತಮ ಸಂಕಲನ : ಮಹೇಶ್ ನಾಯಾಯಣನ್‌ (ಸಿ ಯೂ ಸೂನ್‌), ಅತ್ಯುತ್ತಮ ಸಂಗೀತ ನಿರ್ದೇಶಕ : ಎಂ.ಜಯಚಂದ್ರನ್‌ (ಸೂಫಿಯಂ ಸುಜಾತಯಂ), ಅತ್ಯುತ್ತಮ ಗಾಯಕ : ಶಾಬಾಝ್ ಅಮಾನ್‌, ಅತ್ಯುತ್ತಮ ಗಾಯಕಿ : ನಿತ್ಯಾ ಮಮ್ಮೆನ್‌, ಅತ್ಯುತ್ತಮ ಗೀತರಚನೆ : ಅನ್ವರ್ ಅಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಯ್ಯಪ್ಪನುಂ ಕೋಶಿಯುಂ ಸಿನಿಮಾ ನಿರ್ದೇಶಕರಾದ ಸಚ್ಚಿದಾನಂದ ಮರಣಹೊಂದಿದ್ದು 2020 ಜೂನ್ ತಿಂಗಳಲ್ಲಿ.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...