Homeಕರ್ನಾಟಕಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌ ಫೋಟೋ ತೆಗೆಸಿಕೊಂಡಿದ್ದಾರೆ. ಹಿಂದೂಗಳ ಹೆಸರಲ್ಲಿ ಮತೀಯವಾದ, ಮತೀಯ ಗೂಂಡಾಗಿರಿ ನಡೆಸುತ್ತಿರುವವರು ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕೇಸರಿ ಸಮವಸ್ತ್ರ ಧರಿಸಿ ತಮ್ಮ ಅಂತರಂಗವನ್ನು ಹೊರಹಾಕಿದ್ದಾರೆ ಎಂದು ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹದ್ದೇ ಸಮವಸ್ತ್ರವನ್ನು ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಯ ಪೊಲೀಸರೂ ಧರಿಸಿ ಹಬ್ಬ ಆಚರಿಸಿದ್ದಾರೆ. ‘ಕನ್ಯ್ಪೂಜ್ ಆಗಬೇಡಿ…! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್…’ ಎಂದು ಜನರು ಟೀಕೆಗೆ ಒಳಪಡಿಸಿದ್ದಾರೆ.

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. “ಆಯುಧಪೂಜೆ ಅಂಗವಾಗಿ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ. ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ” ಎಂದು ಎಚ್.ಡಿ.ಆನಂದಕುಮಾರ್‌ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸರಣಿ ಟ್ವೀಟ್‌

ಸರಣಿ ಟ್ವೀಟ್‌ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪೊಲೀಸರ ಹೊಸ ಅವತಾರವನ್ನು ಸರಣಿ ಟ್ವೀಟ್‌ಗಳ ಮೂಲಕ ಖಂಡಿಸಿದ್ದಾರೆ.

“ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಯವರೇ, ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು” ಎಂದಿದ್ದಾರೆ.

ಪೊಲೀಸರು ಕೇಸರಿಧಾರಿಗಳಾಗಿರುವ ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಅವರು, “ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ…. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ರಾಜ್ಯದ ಮುಖ್ಯಮಂತ್ರಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’

“ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ರಾಜ್ಯದ ಮುಖ್ಯಮಂತ್ರಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ” ಎಂದು ಎಚ್ಚರಿಸಿದ್ದಾರೆ.

“ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ

ಲೇಖಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು, “ಪೊಲೀಸ್‌‌ ಸ್ಟೇಷನ್ ಮುಂದೆ ಹಿಂಗೇ ಫೋಟೋ ತೆಗೆಸಿಕೊಂಡಿರುವ ಈ ಗುಂಪಿನಲ್ಲಿ ಪೊಲೀಸಿನವರು ಇದ್ದರೆ ಅಂತಹ ಪೋಲಿಸರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಬೇಕು ಅಲ್ಲವೇ, ಕಾರ್ಯಾಂಗದೊಳಗೆ ಈ ರೀತಿಯ symbolism ಮತ್ತು ಮತಾಂಧತೆ ಇರುವುದು ಸಂವಿಧಾನಕ್ಕೆ ಮಾಡುವ ದ್ರೋಹ ಅಲ್ಲವೇ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಪೋಸ್ಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ.

“ಮುಖ್ಯಮಂತ್ರಿಗಳೇ ನೈತಿಕ ಪೊಲೀಸ್ ಗಿರಿ ಪರ ಇರುವಾಗ, ಪೊಲೀಸರು ಭಜರಂಗಿ ಯೂನಿಫಾರಂ ಹಾಕೋದರಲ್ಲಿ ತಪ್ಪೇನಿದೆ. ‘ಫಾಲೋ ದ ಬಾಸ್’ ಅಂದಿದಾರೆ ಅವರು ಅಷ್ಟೇ‌” ಎಂದು ಪತ್ರಕರ್ತ ಶಶಿ ಸಂಪಳ್ಳಿ ಕಮೆಂಟ್ ಮಾಡಿದ್ದಾರೆ.

“ನಾನೂ ಶೇಷಾದ್ರಿಪುರಂ ಪೋಲೀಸ್ ಸ್ಟೇಷನ್, ಉಪ್ಪಾರಪೇಟೆ ಮತ್ತು ಶ್ರೀ ರಾಂಪುರ ಪೋಲೀಸ್ ಸ್ಟೇಷನ್ ಮುಂದೆ ಹಾದು ಹೋಗುವಾಗ ಹೆಚ್ಚು ಕಡಿಮೆ ಇದೇ ಸಂಭ್ರಮ ಇತ್ತು ಅದರಲ್ಲೂ ಲೇಡಿ ಪೋಲಿಸಮ್ಮಂದಿರು ಸಾಕ್ಷಾತ್ ನವದುರ್ಗೆಯರ ಅವತಾರದಲ್ಲಿ ಕಂಗೊಳಿಸುತ್ತಿದ್ದರು…” ಎಂದು ಅನಿಲ್‌ಕುಮಾರ್‌ ಎಂ.ಎನ್. ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಹಾಗೆಯೇ ರಮ್ಝಾನ್ ಬಕ್ರೀದ್ ಕ್ರಿಸ್ಮಸ್ ಹಬ್ಬಗಳು ಸರ್ಕಾರದ ಇಲಾಖೆಯಲ್ಲಿ ಆಚರಿಸೋಕೆ ಬಿಡ್ತಾರಾ?” ಎಂದು ಅಮಾನ್‌ ಸಾಗರ್‌ ಪ್ರಶ್ನಿಸಿದ್ದಾರೆ.

“ಇಷ್ಟು ದಿನ ಮನಸಿನಲ್ಲಿ ಮಾತ್ರ ಇತ್ತು. ಈಗ ದಿರಿಸಿನಲ್ಲೂ ಬಂತು. ಜೈ ಕರ್ನಾಟಕ ಪೊಲೀಸ್” ಎಂದು ಚಿಂತಕ ಶ್ರೀನಿವಾಸ ಕಾರ್ಕಳ ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಗುಂಪಿನ ಮೇಲೆ ಕಾರು ಹತ್ತಿಸಿ ಅಪರಿಚಿತ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪೊಲೀಸರು ಈ ರೀತಿಯಲ್ಲಿ ಕೇಸರೀಕರಣಗೊಳ್ಳುತ್ತಿರುವುದು ಕಂಡನಾರ್ಹ.

  2. ಜಾತಿ, ಮತ-ಪಂತ ಮೀರಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾರ್ಯಾಂಗದ ಅಚ್ಚುಕಟ್ಟಿನ ಸ್ಥಳದಲ್ಲಿರುವ ಪೋಲಿಸರಿಗೆ ಹೀಗಿರಲು ಅವಕಾಶ ಇದೆಯೆ? ಇಲ್ಲ ಎಂದಾದರೆ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ? ಅಥವಾ ಇದು ಕೇಸರಿಬಾನ್ ಸರ್ಕಾರವೆ?

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...