Homeಕರ್ನಾಟಕಬೆಂಗಳೂರಿನಲ್ಲೂ ಶತಕ ಬಾರಿಸಿದ ಡೀಸೆಲ್ ಬೆಲೆ: ಜನಸಾಮಾನ್ಯರು ಕಂಗಾಲು

ಬೆಂಗಳೂರಿನಲ್ಲೂ ಶತಕ ಬಾರಿಸಿದ ಡೀಸೆಲ್ ಬೆಲೆ: ಜನಸಾಮಾನ್ಯರು ಕಂಗಾಲು

- Advertisement -
- Advertisement -

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿನ ನಿರಂತರ ಏರಿಕೆ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಮೇಲೆ 37 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ಬೆಲೆ 100.37 ಪೈಸೆಗೆ ತಲುಪುವ ಮೂಲಕ ಶತಕ ಬಾರಿಸಿದೆ. ಇದೇ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 109.53 ರೂಗೆ ತಲುಪಿದೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆಗಳು ದಿನನಿತ್ಯ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಮತ್ತು ರುಪಾಯಿ ಡಾಲರ್ ವಿನಿಮಯ ದರದ ಆಧಾರದಲ್ಲಿ ಬೆಲೆ ನಿಗಧಿಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ತರಲಾಗುತ್ತದೆ.


ಇದನ್ನೂ ಓದಿ: ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?


ಇಂಧನ ದರ ಏರಿಕೆಯಿಂದ ಎಲ್ಲಾ ವರ್ಗದ ಜನರ ಮೇಲೆಯೂ ಹೊರೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,314ರೂ ತಗುಲುತ್ತಿದೆ (109.53ರೂ-12ಲೀ). ಅಂದರೆ 432ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 864ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ಇಂಧನಗಳ ಮೇಲೆ ಅತಿ ಹೆಚ್ಚು ತೆರಿಗೆ ಭಾರ

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 37 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 35.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 28 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 109ರೂ ದಾಟುತ್ತದೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...