Homeಕರ್ನಾಟಕಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

- Advertisement -
- Advertisement -

ವಿಜಯದಶಮಿಯಂದು (ಅ.15) ಯಾವುದೇ ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ದುರ್ಗಾ ದೌಡ್, ತಲವಾರು, ಆಯುಧಗಳ ಪ್ರದರ್ಶನ ಆಯೋಜಿಸಲಾಗಿತ್ತು. ಅನುಮತಿ ಪಡೆಯದೇ, ಕೊರೊನಾ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸಿದಕ್ಕಾಗಿ ಸಂಘಟನೆಯ ಪ್ರಮುಖರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯದಶಮಿಯಂದು ಆಡಳಿತದ ಅನುಮತಿಯಿಲ್ಲದೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಕಾರ್ಯಕ್ರಮ ಆಯೋಜನೆ ಮಾಡಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನಲೆ ಎಪಿಡೆಮಿಕ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಿಸಿದ್ದರು. ಕೊರೊನಾ ನಿಯಮ ಉಲ್ಲಂಘನೆ ಹಿನ್ನೆಲೆ ಉಡುಪಿ ನಗರದ ಪೌರಾಯುಕ್ತ ಡಾ.ಉದಯ್ ಕುಮಾರ್ ಶೆಟ್ಟಿ ದೂರಿನ ಮೇರೆಗೆ ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

 ಇದನ್ನೂ ಓದಿ: ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಾಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಗಿತ್ತು. ಸರ್ಕಾರದ ಆದೇಶದಂತೆ ಒಂದು ಸ್ಥಳದಲ್ಲಿ 400 ಕ್ಕೂ ಅಧಿಕ ಮಂದಿ ಸೇರುವಂತಿಲ್ಲ. ಅಲ್ಲದೇ ಧ್ವನಿವರ್ಧಕ, ಮೆರವಣಿಗೆಗೂ ಅವಕಾಶವಿಲ್ಲ. ನಿಷೇಧಿತ ಸ್ಥಳದಲ್ಲಿ ಮೆರವಣಿಗೆ ‌ಮಾಡುವಂತಿಲ್ಲ. ಆದರೆ, ಮೆರವಣಿಗೆಯಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಹಿಂದೂ ಜಾಗರಣ ವೇದಿಕೆ

ಮೆರವಣಿಗೆಯಲ್ಲಿ ತಲವಾರ ಆಯುಧ ಪ್ರದರ್ಶನ ಮಾಡಲಾಗಿತ್ತು. ವಾಹನ ಸಂಚಾರಕ್ಕೂ ತಡೆಯೊಡ್ಡಲಾಗಿತ್ತು. ಈ ಕಾರ್ಯಕ್ರಮದ ಮೆರವಣಿಗೆಯಲ್ಲಿ ಇಂಧನ ಸಚಿವ ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್, ಮಹೇಶ್ ಶೆಣೈ, ಪ್ರಕಾಶ್ ಕುಕ್ಕೆಹಳ್ಳಿ, ವಿಶು ಶೆಟ್ಟಿ ಅಂಬಲಪಾಡಿ ಸೇರಿ ಅನೇಕರು ಭಾಗವಹಿಸಿದ್ದರು.

ಇನ್ನು ನವರಾತ್ರಿಯ ಪೂಜೆಯ ದಿನದಂದು ‘ತ್ರಿಶೂಲ ದೀಕ್ಷೆ’ ಹೆಸರಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ತಮ್ಮ ಕಾರ್ಯಕರ್ತರಿಗೆ ಮಾರಕ ಶಸ್ತ್ರಗಳನ್ನು ಹಂಚಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು ಮತ್ತು ಉಡುಪಿ ಜಿಲ್ಲೆಯ ಮಲ್ಪೆ, ಕುಂದಾಪುರದಲ್ಲಿ, ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ಯುವಕ-ಯುವತಿಯರ ಕೈಗೆ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...