Homeಮುಖಪುಟಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡೇಟಿಗೆ ಬಿಹಾರಿ ಕಾರ್ಮಿಕರು ಬಲಿ

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡೇಟಿಗೆ ಬಿಹಾರಿ ಕಾರ್ಮಿಕರು ಬಲಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡೇಟಿಗೆ ಇಬ್ಬರು ಬಿಹಾರಿ ಕಾರ್ಮಿಕರು ಬಲಿಯಾಗಿದ್ದಾರೆ. ಈ ತಿಂಗಳಲ್ಲಿ ಭಯೋತ್ಪಾದಕರಿಗೆ ಬಲಿಯಾದ ನಾಗರಿಕರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಲ್ಗುಮ್‌ ಜಿಲ್ಲೆಯ ವಾನ್ಪೋವ್‌‌ನಲ್ಲಿ ಭಾನುವಾರ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾನೆ.

ಕಣಿವೆ ಪ್ರಾಂತ್ಯದಲ್ಲಿ ಬಿಹಾರದ ಗೋಲ್‌ಗುಪ್ಪ ವ್ಯಾಪಾರಿ ಹಾಗೂ ಉತ್ತರ ಪ್ರದೇಶದ ಬಡಗಿಯ ಹತ್ಯೆಯ ಒಂದು ದಿನದ ಬಳಿಕ ಮತ್ತೊಮ್ಮೆ ಭಯೋತ್ಪಾದಕರಿಂದ ದಾಳಿಯಾಗಿದೆ.

ಗೋಲ್‌ಗುಪ್ಪ ವ್ಯಾಪಾರಿ ಅರ್ಬಿನ್‌ ಕುಮಾರ್‌ ಶಾ ಅವರು ಶ್ರೀನಗರದಲ್ಲಿ, ಬಡಗಿ ಸಗೀರ್‌ ಅಹಮದ್‌ ಅವರು ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿಗೆ ತುತ್ತಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗರಿಕರ ಮೇಲೆ ನಡೆದ ದಾಳಿಯಲ್ಲಿ ಜೀವ ಕಳೆದುಕೊಂಡ 11 ಮಂದಿಯಲ್ಲಿ ಐವರು ಹೊರರಾಜ್ಯಗಳಿಂದ ಬಂದವರಾಗಿದ್ದಾರೆ. ಕಾಶ್ಮೀರದಿಂದ ಇತರ ರಾಜ್ಯಗಳ ಜನರನ್ನು ಹೊರಗೆ ಓಡಿಸಲು ಭಯೋತ್ಪಾದಕರು ಬಯಸಿದಂತಿದೆ ಎಂದು ಮೂಲಗಳು ಹೇಳಿವೆ.

ಈ ಹತ್ಯೆಗಳು ಕಣಿವೆಯಲ್ಲಿ ಭಯವನ್ನು ಹುಟ್ಟುಹಾಕಿದ್ದು, ಸಂಚಾರಿ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತ್ ಕುಟುಂಬಗಳು ಹೊರಹೋಗಲು ಉತ್ತೇಜಿಸಿವೆ. ಕಾಶ್ಮೀರಿ ವಲಸಿಗರಿಗಾಗಿ ಜಾರಿಗೊಳಿಸಲಾಗಿದ್ದ ಪ್ರಧಾನ ಮಂತ್ರಿಯವರ ವಿಶೇಷ ಯೋಜನೆಯಡಿ ಕೆಲಸಗಳನ್ನು ಪಡೆದು ಕಣಿವೆಗೆ ಮರಳಿದ್ದ ಸರ್ಕಾರಿ ನೌಕರರ ಕುಟುಂಬಗಳು ಸೇರಿದಂತೆ ಹತ್ತಾರು ಕುಟುಂಬಗಳು ಹೊರಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಹಾರಿ ಕಾರ್ಮಿಕರ ಹತ್ಯೆಯ ಬಳಿಕ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಕರೆ ಮಾಡಿದ್ದಾರೆ.

“ಈ ಹತ್ಯೆಗಳಲ್ಲಿ ಪಾಕ್‌ ಕಮಾಂಡೋಗಳ ಕೈವಾಡವಿದೆ” ಎಂದು ಶಂಕಿಸಲಾಗಿದೆ ಎಂದು ಮೂಲಗಳು ಹೇಳಿವೆ. “ನಾವು ಭಯೋತ್ಪಾದಕರನ್ನು ಸದೆಬಡಿಯುತ್ತೇವೆ” ಎಂದು ಲೆಫ್ಟಿನೆಂಟ್‌ ಗವರ್ನರ್‌ ತಿಳಿಸಿದ್ದಾರೆ.

ದಾಳಿಗಳ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರತ್ಯೇಕತಾವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಕೇಂದ್ರಾಡಳಿತ ಪ್ರದೇಶದಾದ್ಯಂತ ಸುಮಾರು 900 ಜನರನ್ನು ಬಂಧಿಸಿದ್ದಾರೆ.

ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪೊಲೀಸರ ಪ್ರಕಾರ, ಕಳೆದ ಒಂದು ವಾರದಲ್ಲಿ 13 ಭಯೋತ್ಪಾದಕರು ಹತರಾಗಿದ್ದಾರೆ.

“ನಾಗರಿಕರ ಹತ್ಯೆಗಳ ನಂತರ ಒಂಬತ್ತು ಎನ್‌ಕೌಂಟರ್‌ಗಳಲ್ಲಿ 13 ಭಯೋತ್ಪಾದಕರನ್ನು ಸಾಯಿಸಿದ್ದೇವೆ. ಶ್ರೀನಗರದಲ್ಲಿ ಐವರು ಭಯೋತ್ಪಾದಕರಲ್ಲಿ ಮೂವರನ್ನು 24 ಗಂಟೆಗಳಲ್ಲಿ ನಾವು ಸಾಯಿಸಿದ್ದೇವೆ” ಎಂದು ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...