Homeಮುಖಪುಟಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್

ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್

ಮುಖ್ಯಮಂತ್ರಿಗಳ ಹೇಳಿಕೆಗಳು ಧಾರ್ಮಿಕ ದ್ವೇಷ ಮತ್ತು ಹಿಂಸೆಗೆ ಬಲಿಯಾದ ಸಂತ್ರಸ್ತರನ್ನು ಖಂಡಿಸುವಂತಿವೆ ಮತ್ತು ಅವರ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಿವೆ. -AILAJ

- Advertisement -
- Advertisement -

ಕರ್ನಾಟಕದಲ್ಲಿ ಮಾರೆಲ್ ಪೊಲೀಸಿಂಗ್ ಘಟನೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮತೀಯ ಗೂಂಡಾಗಿರಿ ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್ ಸಂಘಟನೆ ನೋಟೀಸ್ ನೀಡಿದೆ.

“ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡುವ ಮೂಲಕ ತಾವು ತೆಗೆದುಕೊಂಡಿರುವ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದೀರಿ. ಕೋಮು ಹಿಂಸಾಚಾರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಮ್ಮ ಹೇಳಿಕೆಗಳು ಆಘಾತಕಾರಿಯಾಗಿವೆ ಮತ್ತು ಸಾಂವಿಧಾನಿಕ ಪ್ರತಿಜ್ಞೆಯನ್ನು ಉಲ್ಲಂಘಿಸಿವೆ. ಹಾಗಾಗಿ ಹೇಳಿಕೆಯನ್ನು ಹಿಂಪಡೆಯಿರಿ” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಮುಖ್ಯಮಂತ್ರಿಗಳ ಹೇಳಿಕೆಗಳು ಧಾರ್ಮಿಕ ದ್ವೇಷ ಮತ್ತು ಹಿಂಸೆಗೆ ಬಲಿಯಾದ ಸಂತ್ರಸ್ತರನ್ನು ಖಂಡಿಸುವಂತಿವೆ ಮತ್ತು ಅವರ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಿವೆ. ಅವರಿಗೆ ಕಾನೂನುಬದ್ಧ ರಕ್ಷಣೆಯನ್ನು ನಿರಾಕರಿಸುವುದು ಮತ್ತು ಕಾನೂನು ಸೌಲಭ್ಯಗಳನ್ನು ನೀಡದಿರುವುದು ಮಾತ್ರವಲ್ಲದೆ ಅವರನ್ನು ಸಂಪೂರ್ಣವಾಗಿ ಕಾನೂನುಬಾಹಿರ ಶಕ್ತಿಗಳಿಗೆ ಅಕ್ರಮವಾಗಿ ಹಸ್ತಾಂತರಿಸಿದಂತಿವೆ ಎಂದು ವಕೀಲರ ಸಂಘಟನೆ ಅಭಿಪ್ರಾಯಪಟ್ಟದೆ.

ಅವರ ಹೇಳಿಕೆಗಳು ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿವೆ. ಸಮಾಜದ ಬಲಿಷ್ಟ ಜಾತಿ – ಧರ್ಮಗಳ ಸಮುದಾಯಗಳ ಸಾಮಾಜಿಕ ನೈತಿಕತೆಗೆ ಪುಷ್ಠಿ ನೀಡುತ್ತವೆ. ಗುಂಪು ಹಿಂಸಾಚಾರವನ್ನು ನಿಯಂತ್ರಿಸಲು ಮತ್ತು ನಿಗ್ರಹಿಸಲು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್ ಸಂಘಟನೆ ಹೇಳಿದೆ.

ಕರಾವಳಿಯಲ್ಲಿ ಹೆಚ್ಚುತ್ತಿರುವ ಮಾರಲ್ ಪೊಲೀಸಿಂಗ್ ಕುರಿತ ಪ್ರಶ್ನೆಗೆ ಅಕ್ಟೋಬರ್ 13 ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ್ದ ಮುಖ್ಯಮಂತ್ರಿ ಬೊಮ್ಮಾಯಿಯವರು, “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. ಇಂಥ ಸಂದರ್ಭದಲ್ಲಿ ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕವಾಗಿಯೂ ಸಾಮರಸ್ಯ ಕಾಪಾಡಲು ನಾವೆಲ್ಲರೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು” ಎಂದಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ


ಮುಂದುವರಿದು ಕೆಲವು ಯುವಕರು ಏನಾದರೂ ಕೈಗೆತ್ತುಕೊಂಡು, ಈಗ ಅವರ ಒಂದು, ಈ ಸಮಾಜದ ಭಾವೆನೆಗಳಿಗೆ ಧಕ್ಕೆಯಾಗದಂತೆ ಅವರು ಕೂಡ ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಇದೊಂದು ಸಮಾಜಿಕವಾಗಿರುವ ಪ್ರಶ್ನೆ ಇದೆ. ಸಮಾಜದಲ್ಲಿ ಮೊರಾಲಿಟಿ ಇರಬೇಕು. ನೈತಿಕತೆ ಇಲ್ಲದೇ ನಾವು ಬದಕಲು ಸಾಧ್ಯವೇ? ಎಂದಿದ್ದರು.

ನಿಮ್ಮ ಶಾಸಕರೆ ಎಂದು ಪತ್ರಕರ್ತರ ಪ್ರಶ್ನೆಯನ್ನು ತುಂಡರಿಸಿದ ಅವರು, ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಇವತ್ತು ನಾವು ನಮ್ಮಲ್ಲ ಸಂಬಂಧಗಳು, ಶಾಂತಿ ಸುವ್ಯವಸ್ಥೇ ಇರುವುದು ನಮ್ಮ ಮೇಲೆ ನಾವು ನಿಯಂತ್ರಣವಿರುವುದರಿಂದ, ನೈತಿಕತೆಯಿಂದ. ನೈತಿಕತೆ ಇಲ್ಲದಾಗ ಎಲ್ಲಾ ಥರದ ಘಟನೆಗಳು ನಡೆಯುತ್ತವೆ ಎಂದಿದ್ದರು.

ಮುಖ್ಯಮಂತ್ರಿಗಳ ಹೇಳಿಕೆಗೆ ಸಮಾಜದ ಹಲವು ವಿಭಾಗಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಗಾದರೆ ಗೃಹ ಇಲಾಖೆ ಮತ್ತು ಸರ್ಕಾರ ಇರುವುದೇಕೆ ಎಂದು ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, “ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ” ಎಂದು ಒತ್ತಾಯಿಸಿದ್ದರು.

“ಅನೈತಿಕ ಪೊಲೀಸ್ ಗಿರಿಗೆ ಬಲಿಯಾಗುತ್ತಿರುವವರು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ಆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿಯುವುದೇ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ; ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...