Homeಕರ್ನಾಟಕಚಿತ್ರದುರ್ಗ: ಅಪ್ಪ, ಅಮ್ಮ, ಅಜ್ಜಿ, ಅಣ್ಣ, ತಂಗಿಗೆ ವಿಷವಿಟ್ಟ ವಾತ್ಸಲ್ಯ ವಂಚಿತ ಬಾಲಕಿ

ಚಿತ್ರದುರ್ಗ: ಅಪ್ಪ, ಅಮ್ಮ, ಅಜ್ಜಿ, ಅಣ್ಣ, ತಂಗಿಗೆ ವಿಷವಿಟ್ಟ ವಾತ್ಸಲ್ಯ ವಂಚಿತ ಬಾಲಕಿ

- Advertisement -
- Advertisement -

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯಲ್ಲಿ ಜುಲೈ 12 ರಂದು ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಮನೆ ಮಗಳೇ ಮುದ್ದೆಯಲ್ಲಿ ವಿಷವಿಟ್ಟಿರುವ ವಿಷಯ ಬೆಳಕಿಗೆ ಬಂದಿದೆ.

ಮನೆಯ ಮೂವರು ಮಕ್ಕಳಲ್ಲಿ ಎರಡನೇ ಮಗಳಾದ 17 ವರ್ಷದ ಅಪ್ರಾಪ್ತೆ ಮನೆಯಲ್ಲಿ ಇನ್ನಿಬ್ಬರು ಮಕ್ಕಳಿಗೆ ನೀಡುತ್ತಿದ್ದ ಪ್ರೀತಿಗೂ ತನಗೆ ದೊರೆಯುತ್ತಿದ್ದ ಪ್ರೀತಿ-ವಾತ್ಸಲ್ಯದ ತಾರತಮ್ಯದಿಂದ ಬೇಸತ್ತು ಇಂತಹ ಕೃತ್ಯಕ್ಕೆ ಕೈ ಹಾಕಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಜುಲೈ 12 ರಂದು ಭರಮಸಾಗರ ಹೋಬಳಿಯ ಇಸಾಮುದ್ರ ಗ್ರಾಮದ ಗೊಲ್ಲರಹಟ್ಟಿಗೆ ಹೊಂದಿಕೊಂಡಿರುವ ಲಂಬಾಣಿಹಟ್ಟಿಯಲ್ಲಿ ಮುದ್ದೆ ಊಟ ಮಾಡಿದ್ದ ಮನೆಯ ಮುಖ್ಯಸ್ಥ ತಿಪ್ಪನಾಯ್ಕ (45), ಪತ್ನಿ ಸುಧಾಬಾಯಿ (40) ತಾಯಿ ಗುಂಡಿಬಾಯಿ (80), ಮಗಳು ರಮ್ಯಾ (16) ಸಾವನ್ನಪ್ಪಿದ್ದರು. ಅಸ್ವಸ್ಥರಾಗಿದ್ದ ಮಗ ರಾಹುಲ್ (19) ರನ್ನು  ದಾವಣಗೆರೆಯ ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರಾಹುಲ್ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ’ಹಿಂದೂಗಳಿಗೆ ಮಾತ್ರ’: ವಿವಾದ ಸೃಷ್ಟಿಸಿದ ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಜಾಹೀರಾತು

ಮುದ್ದೆ ಊಟ ಮಾಡಿದ್ದವರು ಮಾತ್ರ ಸಾವನ್ನಪ್ಪಿದ್ದು, ಪೊಲೀಸರು ಊಟದಲ್ಲಿ ವಿಷ ಬೆರೆತಿರುವ ಶಂಕೆ ವ್ಯಕ್ತಪಡಿಸಿ, ಉಳಿದಿದ್ದ ಅಡುಗೆಯನ್ನು ದಾವಣಗೆರೆಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದರು. ಎಸ್‌ಎಫ್‌ಎಲ್‌ ವರದಿಯಲ್ಲಿ ಮುದ್ದೆಯಲ್ಲಿ ಕೀಟನಾಶಕ ಬೆರೆತಿರುವುದು ತಿಳಿದು ಬಂದಿತ್ತು.

ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ಅಂದು ಮನೆಯಲ್ಲಿ ಬರಿ ಅನ್ನ-ಸಾಂಬರ್‌ ಊಟ ಮಾಡಿ ಆರೋಗ್ಯವಾಗಿದ್ದ ಬಾಲಕಿಯನ್ನು ವಿಚಾರಣೆ ಒಳಪಡಿಸಿದ್ದಾರೆ. ಘಟನೆಯ ದಿನದಂದು ಮುದ್ದೆ ತಯಾರಿಸಿದ್ದ ಬಾಲಕಿ ಮುದ್ದೆಯಲ್ಲಿ ಕೀಟನಾಶಕ ಬೆರೆಸಿದದ್ದು ಬೆಳಕಿಗೆ ಬಂದಿದೆ. ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ಮನೆಯಲ್ಲಿ ರಮ್ಯಾ ಮತ್ತು ರಾಹುಲ್‌ಗೆ ಸಿಗುವ ಪ್ರೀತಿ ತನಗೆ ಸಿಗುತ್ತಿಲ್ಲ. ಅಜ್ಜಿ ಮನೆಯಿಂದ ಕರೆದುಕೊಂಡು ಬಂದು ಕೂಲಿ ಕೆಲಸಕ್ಕೆ ಆಕೆಯನ್ನು ಕಳುಹಿಸಲಾಗುತ್ತಿತ್ತು. ಜೊತೆಗೆ ಪೋಷಕರು ವಿನಾಕಾರಣ ಬೈಯುವುದು, ತಾತ್ಸಾರದಿಂದ ಕಾಣುವುದರಿಂದ ಬೇಸತ್ತು ಕೊಲೆಗೆ ಸಂಚು ಮಾಡಿದ್ದೆ ಎಂದು ಬಾಲಕಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಅನುಮಾನಸ್ಪದ ಸಾವು ಗ್ರಾಮದಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿತ್ತು. ಹಲವರ ಮೇಲೆ ಸಂಶಯ ವ್ಯಕ್ತವಾಗಿತ್ತು. ಆದರೆ ಮನೆ ಮಗಳೇ ಮನೆಯವಿಗೆ ವಿಷವಿಟ್ಟಿರುವ ವಿಷಯ ತನಿಖೆಯಲ್ಲಿ ಬೆಳಕಿಗೆ ಬಂದಿದೆ.


ಇದನ್ನೂ ಓದಿ: ಚಿತ್ರದುರ್ಗ: ವಿಷಾಹಾರ ಸೇವನೆ ಅನುಮಾನ- ಒಂದೇ ಕುಟುಂಬದ ನಾಲ್ವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...