Homeಕರ್ನಾಟಕಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

ಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

- Advertisement -
- Advertisement -

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ನೀಡಿದ್ದಾರೆ.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ಭಾನುವಾರ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದು, ವಿಡಿಯೋ ವೈರಲ್‌ ಆಗಿದೆ.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದಾರೆ. ಬಾಬರ್‌‌ನನ್ನು ನಿಂದಿಸಿರುವ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದಾರೆ.

ನೂರಕ್ಕೆ ನೂರು ಅದು ವೆಂಕಟೇಶ್ವರ ದೇವಸ್ಥಾನವೇ ಆಗಿತ್ತು. ಈ ಸಂಬಂಧ ಸಮಗ್ರ ದಾಖಲೆ ಸಂಗ್ರಹಿಸಿ ಹೋರಾಟ ನಡೆಸಲು ತಯಾರಿ ನಡೆಸಿದ್ದೇವೆ. 80 ವರ್ಷ ದಾಟಿ ಹಿರಿಯರ ಅಭಿಪ್ರಾಯ ಸಂಗ್ರಹ, ದಾಖಲೆಗಳ ಸಂಗ್ರಹ ಮಾಡಿ ಪಿಐಎಲ್‌ ಹಾಕುವವರಿದ್ದೇವೆ. ಕರ್ನಾಟಕದಲ್ಲಿ ಈ ರೀತಿ ಸಾಕಷ್ಟು ದೇವಸ್ಥಾನಗಳನ್ನು ಒಡೆದು ಮಸೀದಿಗಳನ್ನು ಕಟ್ಟಲಾಗಿದೆ. ಈ ಬಗ್ಗೆಯೂ ಸಮಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮತಾಂತರದ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಗದಗ ಜಿಲ್ಲೆಯಲ್ಲಿ ಕೂಡ ಹತ್ತು ಸಾವಿರಕ್ಕೂ ಅಧಿಕ ಮಂದಿ ಮತಾಂತರಗೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವ ಮತಾಂತರ ತಡೆಯುವ ನಿಟ್ಟಿನಲ್ಲಿ ಶ್ರೀರಾಮ ಸೇನೆ ಯುವಪಡೆಯನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್‌ ಪಾದ್ರಿಗಳು ಇಲ್ಲೀವರೆಗೆ ಬಡವರು, ದೀನ ದಲಿತರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದರು. ಆದರೆ, ಈಗ ಅವರ ಕಾರ್ಯವ್ಯಾಪ್ತಿ ವಿಸ್ತಾರಗೊಂಡಿದ್ದು ಕುರುಬರು, ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರು ಎಲ್ಲರನ್ನೂ ಮತಾಂತರ ಮಾಡುತ್ತಿದ್ದಾರೆ. ಈ ಬಗ್ಗೆ ಆಯಾಯ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಆಲೋಚಿಸಿ ಮತಾಂತರ ತಡೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಮಠಕ್ಕೆ ಬರಲು, ವೋಟು ಹಾಕಲು ಸಮುದಾಯದ ಜನರು ಇರುವುದಿಲ್ಲ ಎಂದಿದ್ದಾರೆ.

‘ಬಡವರ ಕಷ್ಟ ನಷ್ಟಗಳನ್ನೇ ಬಂಡವಾಳ ಆಗಿಸಿಕೊಂಡ ಕ್ರೈಸ್ತ ಮಿಷನರಿಗಳು ಮತಾಂತರ ಪ್ರಕ್ರಿಯೆ ಆರಂಭಿಸಿದವು. ವೃದ್ಧಾಶ್ರಮಗಳು ಕೂಡ ಬ್ರಿಟಿಷರ ಕೊಡುಗೆ. ಸಮೃದ್ಧ ಭಾರತದಲ್ಲಿ ಹಿಂದೂ ಧರ್ಮವನ್ನು ನಾಶ ಮಾಡುವುದಕ್ಕಾಗಿಯೇ ಕ್ರೈಸ್ತರು ಚರ್ಚ್, ಪಾದ್ರಿಗಳನ್ನು ಕರೆತಂದರು. ಶ್ರೀಮಂತ ಸಂಸ್ಕೃತಿ, ಪರಂಪರೆ ಹೊಂದಿರುವ ಭಾರತವನ್ನು ಒಡೆದು ಆಳಲು ಇಲ್ಲಿನ ಜನರನ್ನು ಅವರು ವೈಚಾರಿಕವಾಗಿಯೂ ಮತಾಂತರ ಮಾಡಿದರು ಎಂದು ಆರೋಪಿಸಿದ್ದಾರೆ.

‘ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಗೋವುಗಳ ಹತ್ಯೆ ನಿಂತಿಲ್ಲ. ಅಂತೆಯೇ, ಮತಾಂತರ ತಡೆ ಕಾನೂನು ಆಗಬಾರದು. ಮತಾಂತರಕ್ಕೆ ಮುಂದಾಗುವ ಪಾದ್ರಿಗಳಿಗೆ ಜೈಲು ಶಿಕ್ಷೆ ಆಗಬೇಕು. ಒಂದು ವರ್ಷದವರೆಗೆ ಜಾಮೀನು ಸಿಗಬಾರದು. ಈ ರೀತಿಯಾಗಿ ಮತಾಂತರ ವಿರೋಧಿ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆ ಸಂಘಟನೆಯ ರಾಜು ಖಾನಾಪುರ ಹಾಜರಿದ್ದರು.

ಇದನ್ನೂ ಓದಿರಿ: ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...