Homeಕರ್ನಾಟಕಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

ಬಾಬರಿ ಮಸೀದಿಯಂತೆ ಗದಗದ ಜುಮ್ಮಾ ಮಸೀದಿ ವಿರುದ್ಧ ಹೋರಾಟ: ಮುತಾಲಿಕ್‌ ಪ್ರಚೋದನೆ

- Advertisement -
- Advertisement -

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ತೆಗೆದು ದೇವಾಲಯ ನಿರ್ಮಿಸಿದಂತೆ ಗದಗದ ಜುಮ್ಮಾ ಮಸೀದಿಯನ್ನು ತೆರವು ಮಾಡಿ ಅಲ್ಲಿ ವೆಂಕಟೇಶ್ವರ ದೇವಾಲಯ ಕಟ್ಟಬೇಕೆಂಬ ಪ್ರಚೋದನೆಯನ್ನು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ನೀಡಿದ್ದಾರೆ.

ಗದುಗಿನ ಮುನ್ಸಿಪಲ್‌ ಮೈದಾನದಲ್ಲಿ ಭಾನುವಾರ ನಡೆದ “ಮತಾಂತರ ತಡೆಗಾಗಿ ಪಥ ಸಂಚಲನ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾತನಾಡಿದ್ದು, ವಿಡಿಯೋ ವೈರಲ್‌ ಆಗಿದೆ.

“71 ವರ್ಷ ರಾಮಮಂದಿರ ಸಲುವಾಗಿ ಹೋರಾಟ ಮಾಡಬೇಕಾಯಿತು. 72 ವರ್ಷಗಳ ನಂತರ ಆ ಬಾಬರಿ ಮಸೀದಿಯನ್ನು ತೆಗೆದುಹಾಕಿ ಭವ್ಯ ದೇವಾಲಯವನ್ನು ನಿರ್ಮಾಣ ಮಾಡುವಂತಹ ಸಂಕಲ್ಪ ಪೂರ್ಣವಾಗಿದೆ. ಅದೇ ಮಾದರಿಯಲ್ಲಿ ಗದಗಿನಲ್ಲಿ ಜುಮ್ಮಾ ಮಸೀದಿ ಏನಿದೆ ಅದು ವೆಂಕಟೇಶ್ವರ ದೇವಸ್ಥಾನ…” ಎಂದು ಮುತಾಲಿಕ್‌ ಪ್ರಚೋದಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

ಮುತಾಲಿಕ್‌ ಅವರ ಪ್ರಚೋದನಕಾರಿ ಭಾಷಣಕ್ಕೆ ಶಿಳ್ಳೆ, ಚಪ್ಪಾಳೆಯನ್ನು ಸಭೆಯಲ್ಲಿದ್ದವರು ಹಾಕಿದ್ದಾರೆ. ಬಾಬರ್‌‌ನನ್ನು ನಿಂದಿಸಿರುವ ಮುತಾಲಿಕ್‌, “ಟಿಪ್ಪು ಸುಲ್ತಾನ್‌ ಅವಧಿಯಲ್ಲಿ ಒಡೆದು ಹಾಕಿದ ದೇವಸ್ಥಾನಗಳ ಪೈಕಿ ಜಮ್ಮಾ ಮಸೀದಿ ಜಾಗದಲ್ಲಿದ್ದ ವೆಂಕಟೇಶ್ವರ ದೇವಾಲಯವೂ ಒಂದು ಎಂಬ ಆಧಾರ ಸಹಿತ ಹೋರಾಟವನ್ನು ಮುಂದೆ ಮಾಡೋಣ” ಎಂದಿದ್ದಾರೆ.

ನೂರಕ್ಕೆ ನೂರು ಅದು ವೆಂಕಟೇಶ್ವರ ದೇವಸ್ಥಾನವೇ ಆಗಿತ್ತು. ಈ ಸಂಬಂಧ ಸಮಗ್ರ ದಾಖಲೆ ಸಂಗ್ರಹಿಸಿ ಹೋರಾಟ ನಡೆಸಲು ತಯಾರಿ ನಡೆಸಿದ್ದೇವೆ. 80 ವರ್ಷ ದಾಟಿ ಹಿರಿಯರ ಅಭಿಪ್ರಾಯ ಸಂಗ್ರಹ, ದಾಖಲೆಗಳ ಸಂಗ್ರಹ ಮಾಡಿ ಪಿಐಎಲ್‌ ಹಾಕುವವರಿದ್ದೇವೆ. ಕರ್ನಾಟಕದಲ್ಲಿ ಈ ರೀತಿ ಸಾಕಷ್ಟು ದೇವಸ್ಥಾನಗಳನ್ನು ಒಡೆದು ಮಸೀದಿಗಳನ್ನು ಕಟ್ಟಲಾಗಿದೆ. ಈ ಬಗ್ಗೆಯೂ ಸಮಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮತಾಂತರದ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ಆಗುತ್ತಿವೆ. ಗದಗ ಜಿಲ್ಲೆಯಲ್ಲಿ ಕೂಡ ಹತ್ತು ಸಾವಿರಕ್ಕೂ ಅಧಿಕ ಮಂದಿ ಮತಾಂತರಗೊಂಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಗುತ್ತಿರುವ ಮತಾಂತರ ತಡೆಯುವ ನಿಟ್ಟಿನಲ್ಲಿ ಶ್ರೀರಾಮ ಸೇನೆ ಯುವಪಡೆಯನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್‌ ಪಾದ್ರಿಗಳು ಇಲ್ಲೀವರೆಗೆ ಬಡವರು, ದೀನ ದಲಿತರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದರು. ಆದರೆ, ಈಗ ಅವರ ಕಾರ್ಯವ್ಯಾಪ್ತಿ ವಿಸ್ತಾರಗೊಂಡಿದ್ದು ಕುರುಬರು, ಲಿಂಗಾಯತರು, ಬ್ರಾಹ್ಮಣರು, ಒಕ್ಕಲಿಗರು ಎಲ್ಲರನ್ನೂ ಮತಾಂತರ ಮಾಡುತ್ತಿದ್ದಾರೆ. ಈ ಬಗ್ಗೆ ಆಯಾಯ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಗಂಭೀರವಾಗಿ ಆಲೋಚಿಸಿ ಮತಾಂತರ ತಡೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಮಠಕ್ಕೆ ಬರಲು, ವೋಟು ಹಾಕಲು ಸಮುದಾಯದ ಜನರು ಇರುವುದಿಲ್ಲ ಎಂದಿದ್ದಾರೆ.

‘ಬಡವರ ಕಷ್ಟ ನಷ್ಟಗಳನ್ನೇ ಬಂಡವಾಳ ಆಗಿಸಿಕೊಂಡ ಕ್ರೈಸ್ತ ಮಿಷನರಿಗಳು ಮತಾಂತರ ಪ್ರಕ್ರಿಯೆ ಆರಂಭಿಸಿದವು. ವೃದ್ಧಾಶ್ರಮಗಳು ಕೂಡ ಬ್ರಿಟಿಷರ ಕೊಡುಗೆ. ಸಮೃದ್ಧ ಭಾರತದಲ್ಲಿ ಹಿಂದೂ ಧರ್ಮವನ್ನು ನಾಶ ಮಾಡುವುದಕ್ಕಾಗಿಯೇ ಕ್ರೈಸ್ತರು ಚರ್ಚ್, ಪಾದ್ರಿಗಳನ್ನು ಕರೆತಂದರು. ಶ್ರೀಮಂತ ಸಂಸ್ಕೃತಿ, ಪರಂಪರೆ ಹೊಂದಿರುವ ಭಾರತವನ್ನು ಒಡೆದು ಆಳಲು ಇಲ್ಲಿನ ಜನರನ್ನು ಅವರು ವೈಚಾರಿಕವಾಗಿಯೂ ಮತಾಂತರ ಮಾಡಿದರು ಎಂದು ಆರೋಪಿಸಿದ್ದಾರೆ.

‘ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಗೋವುಗಳ ಹತ್ಯೆ ನಿಂತಿಲ್ಲ. ಅಂತೆಯೇ, ಮತಾಂತರ ತಡೆ ಕಾನೂನು ಆಗಬಾರದು. ಮತಾಂತರಕ್ಕೆ ಮುಂದಾಗುವ ಪಾದ್ರಿಗಳಿಗೆ ಜೈಲು ಶಿಕ್ಷೆ ಆಗಬೇಕು. ಒಂದು ವರ್ಷದವರೆಗೆ ಜಾಮೀನು ಸಿಗಬಾರದು. ಈ ರೀತಿಯಾಗಿ ಮತಾಂತರ ವಿರೋಧಿ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಶ್ರೀರಾಮ ಸೇನೆ ಸಂಘಟನೆಯ ರಾಜು ಖಾನಾಪುರ ಹಾಜರಿದ್ದರು.

ಇದನ್ನೂ ಓದಿರಿ: ಉತ್ತರ ಪ್ರದೇಶ: ನ್ಯಾಯಾಲಯ ಅಂಗಳದಲ್ಲಿ ವಕೀಲನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...